Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...