Homeಮುಖಪುಟಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿ: ಮೂರು ತಿಂಗಳಲ್ಲಿ ಒಂದೂ ಹೆಣ್ಣು ಮಗು ಜನಿಸಿಲ್ಲ!

ಉತ್ತರ ಕಾಶಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪಿಡುಗು ಪ್ರಚಲಿತದಲ್ಲಿ ಇರುವುದಕ್ಕೆ ಈ ಅಂಕಿಅಂಶ ಸಾಕ್ಷಿಯಾಗಿದೆ.

- Advertisement -
- Advertisement -

ಇದೊಂದು ಆಘಾತದ ಸುದ್ದಿ. ಜಿಲ್ಲೆಯೊಂದರ 132 ಗ್ರಾಮಗಳಲ್ಲಿ ಕಳೆದ ಮೂರು ತಿಂಗಳಲ್ಲಿ ಒಂದೇ ಒಂದು ಹೆಣ್ಣು ಕೂಸು ಜನಿಸಿಲ್ಲ!
ಉತ್ತರಪ್ರದೇಶದ ಉತ್ತರ ಕಾಶಿ ಜಿಲ್ಲೆಯಲ್ಲಿ ಇಂಥದ್ದೊಂದು ವಿದ್ಯಮಾನ ಬೆಳಕಿಗೆ ಬಂದಿದೆ. ಅಲ್ಲಿನ 132 ಹಳ್ಳಿಗಳಲ್ಲಿ ಕಳೆದ ಮೂರು ತಿಂಗಳಲ್ಲಿ 212 ಮಕ್ಕಳು ಜನಿಸಿದ್ದು ಎಲ್ಲವೂ ಗಂಡು ಶಿಶುಗಳೇ ಆಗಿದ್ದು, ಒಂದೇ ಒಂದು ಹೆಣ್ಣು ಶಿಶು ಇಲ್ಲದಿರುವುದು ಹೆಣ್ಣು ಭ್ರೂಣ ಹತ್ಯೆ ವ್ಯಾಪಕವಾಗಿ ಪ್ರಚಲಿತದಲ್ಲಿ ಇರುವುದಕ್ಕೆ ಸಾಕ್ಷಿಯಾಗಿದೆ.

ಈ ವರದಿ ಬಂದ ನಂತರ ಎಚ್ಚೆತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತವು ಆ 132 ಗ್ರಾಮಗಳನ್ನು ಕೆಂಪು ವಲಯ (ರೆಡ್ ಝೋನ್) ಪಟ್ಟಿಗೆ ಸೇರಿಸಿದ್ದು ಆಶಾ ಕಾರ್ಯಕರ್ತೆಯರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

2011ರ ಜನಗಣತಿಯ ಪ್ರಕಾರ ಉತ್ತರ ಕಾಶಿ ಜಿಲ್ಲೆಯಲ್ಲಿ 1,61,489 ಮಹಿಳೆಯರು ಮತ್ತು 1,68,597 ಪುರುಷರಿದ್ದರು. ಕಳವಳ ಮೂಡಿಸಿದ ಈ ಲಿಂಗಾನುಪಾತದ ಪರಿಣಾಮವಾಗಿ ಅಲ್ಲಿ ಲಿಂಗಾನುಪಾತ ಸುಧಾರಿಸಲು ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ರಾಜ್ಯ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಮೂರು ತಿಂಗಳಲ್ಲಿ ಉತ್ತರ ಕಾಶಿ ಜಿಲ್ಲೆಯ ದುಂಡಾ ಬ್ಲಾಕಿನ 27 ಹಳ್ಳಿಗಳಲ್ಲಿ 51 ಮಕ್ಕಳ ಜನನವಾಗಿದ್ದು ಒಂದೂ ಹೆಣ್ಣು ಶಿಶುವಿನ ಜನನವಾಗಿಲ್ಲ. ಭತ್ವಾರಿ ಬ್ಲಾಕ್ (27 ಗ್ರಾಮಗಳಲ್ಲಿ 49 ಜನನ), ನೌಗೌನ್ ಬ್ಲಾಕ್ (28 ಗ್ರಾಮಗಳಲ್ಲಿ 47 ಜನನ), ಮೋರಿ ಬ್ಲಾಕ್ (20 ಗ್ರಾಮಗಳಲ್ಲಿ 29 ಜನನ), ಚಿನ್ಯಾಲಿಪೌರ್ ಬ್ಲಾಕ್( 16 ಗ್ರಾಮಗಳಲ್ಲಿ 23 ಜನನ) ಮತ್ತು ಪುರೋಲಾ ಬ್ಲಾಕಿನಲ್ಲಿ 14 ಗ್ರಾಮಗಳಲ್ಲಿ 17 ಜನನಗಳಾಗಿದ್ದು ಒಂದೇ ಒಂದು ಹೆಣ್ಣು ಶಿಶು ಜನಿಸದಿರುವುದು ಆರೋಗ್ಯ ಇಲಾಖೆಯನ್ನು ಕಳವಳಕ್ಕೆ ದೂಡಿದೆ.

ಸದ್ಯ ಈ 132 ಗ್ರಾಮಗಳಲ್ಲಿನ ಚಟುವಟುಕೆಗಳ ಮೇಲೆ ನಿಗಾ ಇಡಲಾಗಿದ್ದು ಮುಂದಿನ ಆರು ತಿಂಗಳ ಬೆಳವಣಿಗೆಗಳ ಮೇಲೆ ಜಿಲ್ಲಾಡಳಿತ ಗಮನ ಹರಿಸಿದೆ. ಜನನ ಲಿಂಗಾನುಪಾತದಲ್ಲಿ ಸುಧಾರಣೆ ಆಗದಿದ್ದರೆ ಆಶಾ ಕಾರ್ಯಕರ್ತರನ್ನು ಹೊಣೆ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ಇದು ಕಾಕತಾಳೀಯ ಇರಬಹುದು ಎಂದು ನಿರ್ಲಕ್ಷಿಸುವಂತಿಲ್ಲ ಎಂದಿರುವ ಜಿಲ್ಲಾಧಿಕಾರಿ ಅತೀಶ್ ಚೌಹಾಣ್, ಹೆಣ್ಣು ಭ್ರೂಣ ಹತ್ಯೆಗಳು ಜರುಗುತ್ತಿರವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

2015-17ರ ಅವಧಿಯಲ್ಲಿ ದೇಶದ ಜನನ ಲಿಂಗಾನುಪಾತ (ಪ್ರತಿ ಸಾವಿರ ಗಂಡು ಶಿಶುಗಳಿಗೆ ಹೆಣ್ಣು ಶಿಶುಗಳ ಸಂಖ್ಯೆ) ತೀವ್ರ ಕುಸಿತ ಕಂಡಿದ್ದು, ಈ ಅವಧಿಯಲ್ಲಿ ಅದು 897 ಇದೆ. ಇಷ್ಟು ಕಡಿಮೆ ಪ್ರಮಾಣದ ಜನನ ಲಿಂಗಾನುಪಾತ ಹಿಂದೆಂದೂ ಕಂಡುಬಂದಿರಲಿಲ್ಲ.

ಉತ್ತರಪ್ರದೇಶ, ರಾಜಸ್ಥಾನ್, ಬಿಹಾರ್, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ 2015-17ರಲ್ಲಿ ಜನನ ಲಿಂಗಾನುಪಾತದಲ್ಲಿ ತೀವ್ರ ಕುಸಿತ ಕಂಡು ಬಂದಿರುವುದನ್ನು ಇಲ್ಲಿ ಗಮನಿಸಬೇಕು.
(ಕೃಪೆ: ಟೈಮ್ಸ್ ಆಫ್ ಇಂಡಿಯಾ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...