Homeಬಹುಜನ ಭಾರತಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

- Advertisement -
- Advertisement -

ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು. ಹಾಗೆಂದು ಶಾಸನಸಭೆ ಮತ್ತು ಸಂಸತ್ತಿನಲ್ಲಿ ನಿಂತು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನ ಸ್ವೀಕರಿಸಿದ ನಂತರವೇ ಅವರಿಗೆ ಶಾಸನಸಭೆಗಳು- ಸಂಸತ್ತಿನಲ್ಲಿ ಆಸನಗಳು ದೊರೆಯುತ್ತವೆ. ಮಾತಾಡುವ ಹಕ್ಕು ಲಭಿಸುತ್ತದೆ. ಸಂಬಳ-ಸಾರಿಗೆ-ಭತ್ಯೆಗಳು ಮತ್ತು ಸಂಸದೀಯ ಅಧಿಕಾರಗಳು ದತ್ತವಾಗುತ್ತವೆ. ಮಂತ್ರಿಗಳು ಈ ಪ್ರಮಾಣವಚನವನ್ನು ಎರಡು ಸಲ ಸ್ವೀಕರಿಸುತ್ತಾರೆ. ಸ್ಪೀಕರ್-ಸಭಾಪತಿ ರಾಜ್ಯಪಾಲರು- ರಾಷ್ಟ್ರಪತಿಯವರು ಬೋಧಿಸುವ ಈ ಶಪಥವನ್ನು ಬಹಿರಂಗವಾಗಿ ಬಾಯಲ್ಲಿ ನುಡಿದು ಆಡಬೇಕಾಗುತ್ತದೆ ಎಂಬುದನ್ನು ಗಮನಿಸಬೇಕು.

‘… ಎಂಬುವವನಾದ ನಾನು ದೇವರ- ಸತ್ಯನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ. ವಿಧಿ ದ್ವಾರಾ ಸ್ಥಾಪಿಸಲಾದ ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇನೆ. ನಾನು ಭಾರತದ ಪ್ರಭುತೆ ಮತ್ತು ಅಖಂಡತೆಯನ್ನು ಕಾಪಾಡುತ್ತೇನೆ. ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಶುದ್ಧ ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತ, ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ, ಎಲ್ಲ ರೀತಿಯ ಜನರಿಗೆ ಸಂವಿಧಾನ ಮತ್ತು ವಿಧಿಯ ಅನುಸಾರ ನ್ಯಾಯ ಸಲ್ಲಿಸುತ್ತೇನೆ’ ಎಂಬುದಾಗಿ ಶಾಸಕರು- ಸಂಸದರು ಸ್ವೀಕರಿಸುವ ಪ್ರತಿಜ್ಞೆಯ ಜೊತೆಗೆ ಪ್ರಧಾನಮಂತ್ರಿ-ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಗೌಪ್ಯತೆಯ ಶಪಥವನ್ನೂ ಸ್ವೀಕರಿಸುತ್ತಾರೆ.

ಭಯ ಅಥವಾ ಪಕ್ಷಪಾತ ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ ಶುದ್ಧ ಅಂತಃಕರಣದಿಂದ ತಮ್ಮ ಕರ್ತವ್ಯಗಳನ್ನು ಆಳುವ ಪಕ್ಷದ ಜನಪ್ರತಿನಿಧಿಗಳು ಮಂತ್ರಿಗಳು ಪ್ರಧಾನಮಂತ್ರಿ ನಿರ್ವಹಿಸುತ್ತಿದ್ದಾರೆಯೇ, ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಒಮ್ಮೆ ಕೇಳಿಕೊಳ್ಳಬೇಕಿದೆ.

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ದ್ರುವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್‌ವಾದಿ ಬೆಂಬಲಿಗರಲ್ಲಿ ಉತ್ತೇಜಿಸಲಾಗುತ್ತಿದೆ. ಈ ನಾಚಿಕೆಗೇಡಿನಲ್ಲಿ ತೊಡಗಿದವರಿಗೆ ಇಂದಲ್ಲದಿದ್ದರೆ ನಾಳೆ ಪಕ್ಷ ಬಹುಮಾನಗಳನ್ನು ನೀಡಿ ಬೆನ್ನು ತಟ್ಟುತ್ತಿದೆ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿರುವ ಭಯೋತ್ಪಾದಕರಿಗೂ ಮುಂದೊಂದು ದಿನ ಬಿಜೆಪಿ ಚುನಾವಣಾ ಟಿಕೆಟ್ ಗಳು ದೊರೆತರೆ ಚಕಿತರಾಗಬೇಕಿಲ್ಲ.

ಸಿ.ಎ.ಎ – ಎನ್.ಆರ್.ಸಿ. ವಿರುದ್ಧ ಶಾಂತಿಯುತ ಪ್ರತಿಭಟನೆ ಜರುಗುತ್ತಿರುವ ಶಾಹೀನ್‌ಬಾಗ್ ಅನ್ನು ಮಿನಿ ಪಾಕಿಸ್ತಾನ ಎಂದು ಕರೆಯುವುದು, ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ ಎಂಬ ಘೋಷಣೆಗಳನ್ನು ಜನಸಭೆಗಳಲ್ಲಿ ಕೂಗಿಸುವುದು, ಎಷ್ಟು ಸಿಟ್ಟಿನಿಂದ ನೀವು ಚುನಾವಣಾ ಮತಯಂತ್ರದ ಗುಂಡಿ ಒತ್ತಬೇಕೆಂದರೆ ಅದರ ಆಘಾತ ಶಾಹೀನ್‌ಬಾಗ್‌ಗೆ ತಗುಲಬೇಕು ಎಂದು ಪ್ರಚೋದಿಸುವುದು, ಕಾಶ್ಮೀರದಲ್ಲಿ ಪಂಡಿತರನ್ನು ಹಿಂಸಿಸಿ ಬೆದರಿಸಿ ಓಡಿಸಿದಂತೆಯೇ ದೆಹಲಿಯಲ್ಲಿ ಶಾಹೀನ್‌ಬಾಗ್‌ನ ಪ್ರತಿಭಟನಕಾರರು ನಾಳೆ ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲ್ಲಬಹುದು ಎಂದು ಒಂದು ಜನಾಂಗದ ವಿರುದ್ಧ ಹೇವರಿಕೆ ಭಯ ದ್ವೇಷ ಹುಟ್ಟಿಸುವುದು, ಶಾಹೀನ್‌ಬಾಗ್ ಪ್ರತಿಭಟನೆಯ ಹಿಂದೆ ದೇಶವನ್ನು ಒಡೆಯುವ ಹುನ್ನಾರವಿದೆ ಎಂಬುವ ವಿಷ ಕಕ್ಕುವ ಮಾತುಗಳು ಬಿಜೆಪಿಯವು.

ಶಾಹೀನ್‌ಬಾಗ್ ನಲ್ಲಿ ಧರಣಿ ಕುಳಿತಿರುವ ಮಹಿಳೆಯರು ಮತ್ತು ಮಕ್ಕಳು ಸಾಯಬಾರದೇಕೆ, ಉತ್ತರಪ್ರದೇಶದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಿಎಎ ಪ್ರತಿಭಟನಾಕಾರರನ್ನು ನಾಯಿಗಳಂತೆ ಗುಂಡು ಹೊಡೆದು ಸಾಯಿಸಲಾಗಿದೆ ಎನ್ನುತ್ತಾರೆ. ತಮ್ಮ ಕಾರ್ಯಕರ್ತರು ಸಿಎಎ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬಳನ್ನು ಬೆಂಬತ್ತಿ ಛೇಡಿಸುವುದನ್ನು ಬೆಂಬಲಿಸುತ್ತಾರೆ. ಅವಳ ಅದೃಷ್ಟ ಚೆನ್ನಾಗಿತ್ತು, ನಮ್ಮ ಕಾರ್ಯಕರ್ತರು ಆಕೆಯನ್ನು ಅಷ್ಟಕ್ಕೇ ಬಿಟ್ಟುಬಿಟ್ಟರು ಎನ್ನುತ್ತಾರೆ ದ್ವೇಷದ ಕಿಚ್ಚು ಹಚ್ಚುವ ನುಡಿಗಳು. ಕಪಿಲ್ ಮಿಶ್ರಾ ಎಂಬ ಪುಡಿ ಪುಢಾರಿಯಿಂದ ಹಿಡಿದು, ಸಂಸದ ಪ್ರವೇಶ್‌ವರ್ಮಾ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಕೇಂದ್ರ ಸರ್ಕಾರದ ಕಿರಿಯ ಮಂತ್ರಿ ಅನುರಾಗ್ ಠಾಕೂರ್, ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕೋಮುವಾದದ ಕಾಳ್ಗಿಚ್ಚನ್ನು ಹೊತ್ತಿಸುವ ಕೃತ್ಯದಲ್ಲಿ ತೊಡಗಿದ್ದಾರೆ. ಈ ದ್ವೇಷದ ಕಿಚ್ಚನ್ನು ಜನಮಾನಸದ ಎದೆಯಲ್ಲಿ ಹೊತ್ತಿಸಿ ದಾರಿ ತಪ್ಪಿಸುವ ಅಪಾಯಕಾರಿ ಆಟವಿದು. ಜನರನ್ನು ಒಡೆದು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟಿ ಕೊಲ್ಲಿಸುವ ಆಟ. ಈ ಆಟದಲ್ಲಿ ಕಿಚ್ಚು ಹೊತ್ತಿಸುವವರು ಗೆಲ್ಲಬಹುದು, ಆದರೆ ದೇಶ ಸೋಲುತ್ತದೆ.

ಗೋಲಿ ಮಾರೋ ಸಾಲೋಂ ಕೋ ಎಂಬ ತಮ್ಮ ನಾಯಕರು ಕುಡಿಸಿರುವ ದ್ವೇಷದ ನಶೆಯನ್ನು ಏರಿಸಿಕೊಂಡಿರುವ ಯುವಕರು ಈಗಾಗಲೆ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸತೊಡಗಿದ್ದಾರೆ.

ಈ ಕಿಚ್ಚು ಇಷ್ಟಕ್ಕೇ ನಿಲ್ಲುತ್ತದೆಯೇ, ಪಕ್ಕದ ಮನೆ ಸುಟ್ಟರೆ, ಆ ಬೆಂಕಿ ಇಂದಲ್ಲ ನಾಳೆ ನನ್ನ ಮನೆಯನ್ನೂ ಸುಟ್ಟೀತಲ್ಲವೇ ಎಂಬ ಪ್ರಜ್ಞೆ ಮೂಡಬೇಕಿದೆ. ಚುನಾವಣೆಗಳಲ್ಲಿ ಗೆಲ್ಲುವ ಅಲ್ಪಕಾಲೀನ ತಂತ್ರ ಮಾತ್ರವಲ್ಲದೆ ಮತ್ತು ಕೇಸರಿ ಸೈದ್ಧಾಂತಿಕ ನೆಲೆಯ ಶಾಶ್ವತ ಸ್ಥಾಪನೆಗಾಗಿ ಮುಸ್ಲಿಮರು, ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಉದಾರವಾದಿಗಳು, ಪ್ರಜ್ಞಾವಂತರು, ಕೇಂದ್ರ ಸರ್ಕಾರದ ನೀತಿ ನಿರ್ಧಾರಗಳನ್ನು ವಿರೋಧಿಸುವ ಯಾರೇ ಇರಲಿ, ಅವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಅವರಿಗೆ ಗುಂಡು ಹೊಡೆಯಬೇಕೆಂದು ಕರೆ ನೀಡಲಾಗುತ್ತಿದೆ. ಈ ಕರೆಯನ್ನು ದೇಶದ ಪ್ರಧಾನಮಂತ್ರಿ- ಗೃಹಮಂತ್ರಿ ಪ್ರತ್ಯಕ್ಷ ಪರೋಕ್ಷವಾಗಿ ಸಮರ್ಥಿಸುತ್ತಿದ್ದಾರೆ. ಇನ್ನು ಬಂಧನ ಕೇಂದ್ರಗಳು ಆರಂಭ ಆಗತೊಡಗಿವೆ.

ವಿದ್ಯಾರ್ಥಿ ಪರಿಷತ್ತಿನ ಸಂಬಂಧವಿದ್ದ ಬಲಪಂಥೀಯ ಮುಸುಕುಧಾರಿಗಳು ಜೆ.ಎನ್.ಯು ಹಾಸ್ಟೆಲುಗಳ ನುಗ್ಗಿ ವಿದ್ಯಾರ್ಥಿಗಳನ್ನು ತಲೆ ಒಡೆದು ರಕ್ತ ಹರಿಸಿ ತಿಂಗಳೇ ಉರುಳಿತು. ಒಬ್ಬನೇ ಒಬ್ಬನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ ಗೋಪಾಲ ಶರ್ಮನನ್ನು ಅಪ್ರಾಪ್ತ ವಯಸ್ಕನೆಂದು ಸಾರಿ ರಕ್ಷಿಸಲಾಗಿದೆ. ಅತ್ತ ಬೀದರಿನಲ್ಲಿ ಮನೆಗೆಲಸ ಮಾಡಿ ಹೊಟ್ಟೆ ಹೊರೆವ ಮುಸ್ಲಿಂ ತಾಯಿಯನ್ನು ದೇಶದ್ರೋಹದ ಆಪಾದನೆಯ ಮೇರೆಗೆ ಬಂಧಿಸಲಾಗಿದೆ. ಹೊರಗಿರುವ ಆಕೆಯ ಒಂಬತ್ತು ವರ್ಷದ ಮಗಳು ಈಗ ಏಕಾಂಗಿ. ಕಾಗದ ತೋರಿಸಬೇಕೆಂದು ತೋರಿಸುವವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತು ಇರುವ ನಾಟಕ ಆಡಿಸಿದರೆಂದು ಅಲ್ಪಸಂಖ್ಯಾತ ಶಾಲೆಯೊಂದರ ಮಕ್ಕಳನ್ನು ಪೊಲೀಸರು ಪ್ರಶ್ನಿಸತೊಡಗಿದ್ದಾರೆ. ಗೋಲಿ ಮಾರೋ ಸಾಲೋಂ ಕೋ ಎಂಬುದಾಗಿ ಪ್ರಚೋದಿಸುವವರ ಮೇಲೆ ಕನಿಷ್ಠ ಎಫ್.ಐ.ಆರ್ ಕೂಡ ಇಲ್ಲ.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ, ಇದು ದೀರ್ಘ ಇರುಳು. ಆದರೆ ನೆನಪಿಡೋಣ ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಅದೆಷ್ಟೇ ಪ್ರಚಂಡನಾದರೂ ಜನತೆಗಿಂತ ದೊಡ್ಡವನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...