Homeಬಹುಜನ ಭಾರತಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

- Advertisement -
- Advertisement -

ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು. ಹಾಗೆಂದು ಶಾಸನಸಭೆ ಮತ್ತು ಸಂಸತ್ತಿನಲ್ಲಿ ನಿಂತು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನ ಸ್ವೀಕರಿಸಿದ ನಂತರವೇ ಅವರಿಗೆ ಶಾಸನಸಭೆಗಳು- ಸಂಸತ್ತಿನಲ್ಲಿ ಆಸನಗಳು ದೊರೆಯುತ್ತವೆ. ಮಾತಾಡುವ ಹಕ್ಕು ಲಭಿಸುತ್ತದೆ. ಸಂಬಳ-ಸಾರಿಗೆ-ಭತ್ಯೆಗಳು ಮತ್ತು ಸಂಸದೀಯ ಅಧಿಕಾರಗಳು ದತ್ತವಾಗುತ್ತವೆ. ಮಂತ್ರಿಗಳು ಈ ಪ್ರಮಾಣವಚನವನ್ನು ಎರಡು ಸಲ ಸ್ವೀಕರಿಸುತ್ತಾರೆ. ಸ್ಪೀಕರ್-ಸಭಾಪತಿ ರಾಜ್ಯಪಾಲರು- ರಾಷ್ಟ್ರಪತಿಯವರು ಬೋಧಿಸುವ ಈ ಶಪಥವನ್ನು ಬಹಿರಂಗವಾಗಿ ಬಾಯಲ್ಲಿ ನುಡಿದು ಆಡಬೇಕಾಗುತ್ತದೆ ಎಂಬುದನ್ನು ಗಮನಿಸಬೇಕು.

‘… ಎಂಬುವವನಾದ ನಾನು ದೇವರ- ಸತ್ಯನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ. ವಿಧಿ ದ್ವಾರಾ ಸ್ಥಾಪಿಸಲಾದ ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇನೆ. ನಾನು ಭಾರತದ ಪ್ರಭುತೆ ಮತ್ತು ಅಖಂಡತೆಯನ್ನು ಕಾಪಾಡುತ್ತೇನೆ. ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಶುದ್ಧ ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತ, ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ, ಎಲ್ಲ ರೀತಿಯ ಜನರಿಗೆ ಸಂವಿಧಾನ ಮತ್ತು ವಿಧಿಯ ಅನುಸಾರ ನ್ಯಾಯ ಸಲ್ಲಿಸುತ್ತೇನೆ’ ಎಂಬುದಾಗಿ ಶಾಸಕರು- ಸಂಸದರು ಸ್ವೀಕರಿಸುವ ಪ್ರತಿಜ್ಞೆಯ ಜೊತೆಗೆ ಪ್ರಧಾನಮಂತ್ರಿ-ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಗೌಪ್ಯತೆಯ ಶಪಥವನ್ನೂ ಸ್ವೀಕರಿಸುತ್ತಾರೆ.

ಭಯ ಅಥವಾ ಪಕ್ಷಪಾತ ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ ಶುದ್ಧ ಅಂತಃಕರಣದಿಂದ ತಮ್ಮ ಕರ್ತವ್ಯಗಳನ್ನು ಆಳುವ ಪಕ್ಷದ ಜನಪ್ರತಿನಿಧಿಗಳು ಮಂತ್ರಿಗಳು ಪ್ರಧಾನಮಂತ್ರಿ ನಿರ್ವಹಿಸುತ್ತಿದ್ದಾರೆಯೇ, ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಒಮ್ಮೆ ಕೇಳಿಕೊಳ್ಳಬೇಕಿದೆ.

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ದ್ರುವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್‌ವಾದಿ ಬೆಂಬಲಿಗರಲ್ಲಿ ಉತ್ತೇಜಿಸಲಾಗುತ್ತಿದೆ. ಈ ನಾಚಿಕೆಗೇಡಿನಲ್ಲಿ ತೊಡಗಿದವರಿಗೆ ಇಂದಲ್ಲದಿದ್ದರೆ ನಾಳೆ ಪಕ್ಷ ಬಹುಮಾನಗಳನ್ನು ನೀಡಿ ಬೆನ್ನು ತಟ್ಟುತ್ತಿದೆ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿರುವ ಭಯೋತ್ಪಾದಕರಿಗೂ ಮುಂದೊಂದು ದಿನ ಬಿಜೆಪಿ ಚುನಾವಣಾ ಟಿಕೆಟ್ ಗಳು ದೊರೆತರೆ ಚಕಿತರಾಗಬೇಕಿಲ್ಲ.

ಸಿ.ಎ.ಎ – ಎನ್.ಆರ್.ಸಿ. ವಿರುದ್ಧ ಶಾಂತಿಯುತ ಪ್ರತಿಭಟನೆ ಜರುಗುತ್ತಿರುವ ಶಾಹೀನ್‌ಬಾಗ್ ಅನ್ನು ಮಿನಿ ಪಾಕಿಸ್ತಾನ ಎಂದು ಕರೆಯುವುದು, ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ ಎಂಬ ಘೋಷಣೆಗಳನ್ನು ಜನಸಭೆಗಳಲ್ಲಿ ಕೂಗಿಸುವುದು, ಎಷ್ಟು ಸಿಟ್ಟಿನಿಂದ ನೀವು ಚುನಾವಣಾ ಮತಯಂತ್ರದ ಗುಂಡಿ ಒತ್ತಬೇಕೆಂದರೆ ಅದರ ಆಘಾತ ಶಾಹೀನ್‌ಬಾಗ್‌ಗೆ ತಗುಲಬೇಕು ಎಂದು ಪ್ರಚೋದಿಸುವುದು, ಕಾಶ್ಮೀರದಲ್ಲಿ ಪಂಡಿತರನ್ನು ಹಿಂಸಿಸಿ ಬೆದರಿಸಿ ಓಡಿಸಿದಂತೆಯೇ ದೆಹಲಿಯಲ್ಲಿ ಶಾಹೀನ್‌ಬಾಗ್‌ನ ಪ್ರತಿಭಟನಕಾರರು ನಾಳೆ ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲ್ಲಬಹುದು ಎಂದು ಒಂದು ಜನಾಂಗದ ವಿರುದ್ಧ ಹೇವರಿಕೆ ಭಯ ದ್ವೇಷ ಹುಟ್ಟಿಸುವುದು, ಶಾಹೀನ್‌ಬಾಗ್ ಪ್ರತಿಭಟನೆಯ ಹಿಂದೆ ದೇಶವನ್ನು ಒಡೆಯುವ ಹುನ್ನಾರವಿದೆ ಎಂಬುವ ವಿಷ ಕಕ್ಕುವ ಮಾತುಗಳು ಬಿಜೆಪಿಯವು.

ಶಾಹೀನ್‌ಬಾಗ್ ನಲ್ಲಿ ಧರಣಿ ಕುಳಿತಿರುವ ಮಹಿಳೆಯರು ಮತ್ತು ಮಕ್ಕಳು ಸಾಯಬಾರದೇಕೆ, ಉತ್ತರಪ್ರದೇಶದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಿಎಎ ಪ್ರತಿಭಟನಾಕಾರರನ್ನು ನಾಯಿಗಳಂತೆ ಗುಂಡು ಹೊಡೆದು ಸಾಯಿಸಲಾಗಿದೆ ಎನ್ನುತ್ತಾರೆ. ತಮ್ಮ ಕಾರ್ಯಕರ್ತರು ಸಿಎಎ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬಳನ್ನು ಬೆಂಬತ್ತಿ ಛೇಡಿಸುವುದನ್ನು ಬೆಂಬಲಿಸುತ್ತಾರೆ. ಅವಳ ಅದೃಷ್ಟ ಚೆನ್ನಾಗಿತ್ತು, ನಮ್ಮ ಕಾರ್ಯಕರ್ತರು ಆಕೆಯನ್ನು ಅಷ್ಟಕ್ಕೇ ಬಿಟ್ಟುಬಿಟ್ಟರು ಎನ್ನುತ್ತಾರೆ ದ್ವೇಷದ ಕಿಚ್ಚು ಹಚ್ಚುವ ನುಡಿಗಳು. ಕಪಿಲ್ ಮಿಶ್ರಾ ಎಂಬ ಪುಡಿ ಪುಢಾರಿಯಿಂದ ಹಿಡಿದು, ಸಂಸದ ಪ್ರವೇಶ್‌ವರ್ಮಾ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಕೇಂದ್ರ ಸರ್ಕಾರದ ಕಿರಿಯ ಮಂತ್ರಿ ಅನುರಾಗ್ ಠಾಕೂರ್, ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕೋಮುವಾದದ ಕಾಳ್ಗಿಚ್ಚನ್ನು ಹೊತ್ತಿಸುವ ಕೃತ್ಯದಲ್ಲಿ ತೊಡಗಿದ್ದಾರೆ. ಈ ದ್ವೇಷದ ಕಿಚ್ಚನ್ನು ಜನಮಾನಸದ ಎದೆಯಲ್ಲಿ ಹೊತ್ತಿಸಿ ದಾರಿ ತಪ್ಪಿಸುವ ಅಪಾಯಕಾರಿ ಆಟವಿದು. ಜನರನ್ನು ಒಡೆದು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟಿ ಕೊಲ್ಲಿಸುವ ಆಟ. ಈ ಆಟದಲ್ಲಿ ಕಿಚ್ಚು ಹೊತ್ತಿಸುವವರು ಗೆಲ್ಲಬಹುದು, ಆದರೆ ದೇಶ ಸೋಲುತ್ತದೆ.

ಗೋಲಿ ಮಾರೋ ಸಾಲೋಂ ಕೋ ಎಂಬ ತಮ್ಮ ನಾಯಕರು ಕುಡಿಸಿರುವ ದ್ವೇಷದ ನಶೆಯನ್ನು ಏರಿಸಿಕೊಂಡಿರುವ ಯುವಕರು ಈಗಾಗಲೆ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸತೊಡಗಿದ್ದಾರೆ.

ಈ ಕಿಚ್ಚು ಇಷ್ಟಕ್ಕೇ ನಿಲ್ಲುತ್ತದೆಯೇ, ಪಕ್ಕದ ಮನೆ ಸುಟ್ಟರೆ, ಆ ಬೆಂಕಿ ಇಂದಲ್ಲ ನಾಳೆ ನನ್ನ ಮನೆಯನ್ನೂ ಸುಟ್ಟೀತಲ್ಲವೇ ಎಂಬ ಪ್ರಜ್ಞೆ ಮೂಡಬೇಕಿದೆ. ಚುನಾವಣೆಗಳಲ್ಲಿ ಗೆಲ್ಲುವ ಅಲ್ಪಕಾಲೀನ ತಂತ್ರ ಮಾತ್ರವಲ್ಲದೆ ಮತ್ತು ಕೇಸರಿ ಸೈದ್ಧಾಂತಿಕ ನೆಲೆಯ ಶಾಶ್ವತ ಸ್ಥಾಪನೆಗಾಗಿ ಮುಸ್ಲಿಮರು, ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಉದಾರವಾದಿಗಳು, ಪ್ರಜ್ಞಾವಂತರು, ಕೇಂದ್ರ ಸರ್ಕಾರದ ನೀತಿ ನಿರ್ಧಾರಗಳನ್ನು ವಿರೋಧಿಸುವ ಯಾರೇ ಇರಲಿ, ಅವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಅವರಿಗೆ ಗುಂಡು ಹೊಡೆಯಬೇಕೆಂದು ಕರೆ ನೀಡಲಾಗುತ್ತಿದೆ. ಈ ಕರೆಯನ್ನು ದೇಶದ ಪ್ರಧಾನಮಂತ್ರಿ- ಗೃಹಮಂತ್ರಿ ಪ್ರತ್ಯಕ್ಷ ಪರೋಕ್ಷವಾಗಿ ಸಮರ್ಥಿಸುತ್ತಿದ್ದಾರೆ. ಇನ್ನು ಬಂಧನ ಕೇಂದ್ರಗಳು ಆರಂಭ ಆಗತೊಡಗಿವೆ.

ವಿದ್ಯಾರ್ಥಿ ಪರಿಷತ್ತಿನ ಸಂಬಂಧವಿದ್ದ ಬಲಪಂಥೀಯ ಮುಸುಕುಧಾರಿಗಳು ಜೆ.ಎನ್.ಯು ಹಾಸ್ಟೆಲುಗಳ ನುಗ್ಗಿ ವಿದ್ಯಾರ್ಥಿಗಳನ್ನು ತಲೆ ಒಡೆದು ರಕ್ತ ಹರಿಸಿ ತಿಂಗಳೇ ಉರುಳಿತು. ಒಬ್ಬನೇ ಒಬ್ಬನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ ಗೋಪಾಲ ಶರ್ಮನನ್ನು ಅಪ್ರಾಪ್ತ ವಯಸ್ಕನೆಂದು ಸಾರಿ ರಕ್ಷಿಸಲಾಗಿದೆ. ಅತ್ತ ಬೀದರಿನಲ್ಲಿ ಮನೆಗೆಲಸ ಮಾಡಿ ಹೊಟ್ಟೆ ಹೊರೆವ ಮುಸ್ಲಿಂ ತಾಯಿಯನ್ನು ದೇಶದ್ರೋಹದ ಆಪಾದನೆಯ ಮೇರೆಗೆ ಬಂಧಿಸಲಾಗಿದೆ. ಹೊರಗಿರುವ ಆಕೆಯ ಒಂಬತ್ತು ವರ್ಷದ ಮಗಳು ಈಗ ಏಕಾಂಗಿ. ಕಾಗದ ತೋರಿಸಬೇಕೆಂದು ತೋರಿಸುವವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತು ಇರುವ ನಾಟಕ ಆಡಿಸಿದರೆಂದು ಅಲ್ಪಸಂಖ್ಯಾತ ಶಾಲೆಯೊಂದರ ಮಕ್ಕಳನ್ನು ಪೊಲೀಸರು ಪ್ರಶ್ನಿಸತೊಡಗಿದ್ದಾರೆ. ಗೋಲಿ ಮಾರೋ ಸಾಲೋಂ ಕೋ ಎಂಬುದಾಗಿ ಪ್ರಚೋದಿಸುವವರ ಮೇಲೆ ಕನಿಷ್ಠ ಎಫ್.ಐ.ಆರ್ ಕೂಡ ಇಲ್ಲ.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ, ಇದು ದೀರ್ಘ ಇರುಳು. ಆದರೆ ನೆನಪಿಡೋಣ ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಅದೆಷ್ಟೇ ಪ್ರಚಂಡನಾದರೂ ಜನತೆಗಿಂತ ದೊಡ್ಡವನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...