Homeಬಹುಜನ ಭಾರತಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

- Advertisement -
- Advertisement -

ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು. ಹಾಗೆಂದು ಶಾಸನಸಭೆ ಮತ್ತು ಸಂಸತ್ತಿನಲ್ಲಿ ನಿಂತು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನ ಸ್ವೀಕರಿಸಿದ ನಂತರವೇ ಅವರಿಗೆ ಶಾಸನಸಭೆಗಳು- ಸಂಸತ್ತಿನಲ್ಲಿ ಆಸನಗಳು ದೊರೆಯುತ್ತವೆ. ಮಾತಾಡುವ ಹಕ್ಕು ಲಭಿಸುತ್ತದೆ. ಸಂಬಳ-ಸಾರಿಗೆ-ಭತ್ಯೆಗಳು ಮತ್ತು ಸಂಸದೀಯ ಅಧಿಕಾರಗಳು ದತ್ತವಾಗುತ್ತವೆ. ಮಂತ್ರಿಗಳು ಈ ಪ್ರಮಾಣವಚನವನ್ನು ಎರಡು ಸಲ ಸ್ವೀಕರಿಸುತ್ತಾರೆ. ಸ್ಪೀಕರ್-ಸಭಾಪತಿ ರಾಜ್ಯಪಾಲರು- ರಾಷ್ಟ್ರಪತಿಯವರು ಬೋಧಿಸುವ ಈ ಶಪಥವನ್ನು ಬಹಿರಂಗವಾಗಿ ಬಾಯಲ್ಲಿ ನುಡಿದು ಆಡಬೇಕಾಗುತ್ತದೆ ಎಂಬುದನ್ನು ಗಮನಿಸಬೇಕು.

‘… ಎಂಬುವವನಾದ ನಾನು ದೇವರ- ಸತ್ಯನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ. ವಿಧಿ ದ್ವಾರಾ ಸ್ಥಾಪಿಸಲಾದ ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇನೆ. ನಾನು ಭಾರತದ ಪ್ರಭುತೆ ಮತ್ತು ಅಖಂಡತೆಯನ್ನು ಕಾಪಾಡುತ್ತೇನೆ. ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಶುದ್ಧ ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತ, ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ, ಎಲ್ಲ ರೀತಿಯ ಜನರಿಗೆ ಸಂವಿಧಾನ ಮತ್ತು ವಿಧಿಯ ಅನುಸಾರ ನ್ಯಾಯ ಸಲ್ಲಿಸುತ್ತೇನೆ’ ಎಂಬುದಾಗಿ ಶಾಸಕರು- ಸಂಸದರು ಸ್ವೀಕರಿಸುವ ಪ್ರತಿಜ್ಞೆಯ ಜೊತೆಗೆ ಪ್ರಧಾನಮಂತ್ರಿ-ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಗೌಪ್ಯತೆಯ ಶಪಥವನ್ನೂ ಸ್ವೀಕರಿಸುತ್ತಾರೆ.

ಭಯ ಅಥವಾ ಪಕ್ಷಪಾತ ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ ಶುದ್ಧ ಅಂತಃಕರಣದಿಂದ ತಮ್ಮ ಕರ್ತವ್ಯಗಳನ್ನು ಆಳುವ ಪಕ್ಷದ ಜನಪ್ರತಿನಿಧಿಗಳು ಮಂತ್ರಿಗಳು ಪ್ರಧಾನಮಂತ್ರಿ ನಿರ್ವಹಿಸುತ್ತಿದ್ದಾರೆಯೇ, ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಒಮ್ಮೆ ಕೇಳಿಕೊಳ್ಳಬೇಕಿದೆ.

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ದ್ರುವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್‌ವಾದಿ ಬೆಂಬಲಿಗರಲ್ಲಿ ಉತ್ತೇಜಿಸಲಾಗುತ್ತಿದೆ. ಈ ನಾಚಿಕೆಗೇಡಿನಲ್ಲಿ ತೊಡಗಿದವರಿಗೆ ಇಂದಲ್ಲದಿದ್ದರೆ ನಾಳೆ ಪಕ್ಷ ಬಹುಮಾನಗಳನ್ನು ನೀಡಿ ಬೆನ್ನು ತಟ್ಟುತ್ತಿದೆ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿರುವ ಭಯೋತ್ಪಾದಕರಿಗೂ ಮುಂದೊಂದು ದಿನ ಬಿಜೆಪಿ ಚುನಾವಣಾ ಟಿಕೆಟ್ ಗಳು ದೊರೆತರೆ ಚಕಿತರಾಗಬೇಕಿಲ್ಲ.

ಸಿ.ಎ.ಎ – ಎನ್.ಆರ್.ಸಿ. ವಿರುದ್ಧ ಶಾಂತಿಯುತ ಪ್ರತಿಭಟನೆ ಜರುಗುತ್ತಿರುವ ಶಾಹೀನ್‌ಬಾಗ್ ಅನ್ನು ಮಿನಿ ಪಾಕಿಸ್ತಾನ ಎಂದು ಕರೆಯುವುದು, ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ ಎಂಬ ಘೋಷಣೆಗಳನ್ನು ಜನಸಭೆಗಳಲ್ಲಿ ಕೂಗಿಸುವುದು, ಎಷ್ಟು ಸಿಟ್ಟಿನಿಂದ ನೀವು ಚುನಾವಣಾ ಮತಯಂತ್ರದ ಗುಂಡಿ ಒತ್ತಬೇಕೆಂದರೆ ಅದರ ಆಘಾತ ಶಾಹೀನ್‌ಬಾಗ್‌ಗೆ ತಗುಲಬೇಕು ಎಂದು ಪ್ರಚೋದಿಸುವುದು, ಕಾಶ್ಮೀರದಲ್ಲಿ ಪಂಡಿತರನ್ನು ಹಿಂಸಿಸಿ ಬೆದರಿಸಿ ಓಡಿಸಿದಂತೆಯೇ ದೆಹಲಿಯಲ್ಲಿ ಶಾಹೀನ್‌ಬಾಗ್‌ನ ಪ್ರತಿಭಟನಕಾರರು ನಾಳೆ ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲ್ಲಬಹುದು ಎಂದು ಒಂದು ಜನಾಂಗದ ವಿರುದ್ಧ ಹೇವರಿಕೆ ಭಯ ದ್ವೇಷ ಹುಟ್ಟಿಸುವುದು, ಶಾಹೀನ್‌ಬಾಗ್ ಪ್ರತಿಭಟನೆಯ ಹಿಂದೆ ದೇಶವನ್ನು ಒಡೆಯುವ ಹುನ್ನಾರವಿದೆ ಎಂಬುವ ವಿಷ ಕಕ್ಕುವ ಮಾತುಗಳು ಬಿಜೆಪಿಯವು.

ಶಾಹೀನ್‌ಬಾಗ್ ನಲ್ಲಿ ಧರಣಿ ಕುಳಿತಿರುವ ಮಹಿಳೆಯರು ಮತ್ತು ಮಕ್ಕಳು ಸಾಯಬಾರದೇಕೆ, ಉತ್ತರಪ್ರದೇಶದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಿಎಎ ಪ್ರತಿಭಟನಾಕಾರರನ್ನು ನಾಯಿಗಳಂತೆ ಗುಂಡು ಹೊಡೆದು ಸಾಯಿಸಲಾಗಿದೆ ಎನ್ನುತ್ತಾರೆ. ತಮ್ಮ ಕಾರ್ಯಕರ್ತರು ಸಿಎಎ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬಳನ್ನು ಬೆಂಬತ್ತಿ ಛೇಡಿಸುವುದನ್ನು ಬೆಂಬಲಿಸುತ್ತಾರೆ. ಅವಳ ಅದೃಷ್ಟ ಚೆನ್ನಾಗಿತ್ತು, ನಮ್ಮ ಕಾರ್ಯಕರ್ತರು ಆಕೆಯನ್ನು ಅಷ್ಟಕ್ಕೇ ಬಿಟ್ಟುಬಿಟ್ಟರು ಎನ್ನುತ್ತಾರೆ ದ್ವೇಷದ ಕಿಚ್ಚು ಹಚ್ಚುವ ನುಡಿಗಳು. ಕಪಿಲ್ ಮಿಶ್ರಾ ಎಂಬ ಪುಡಿ ಪುಢಾರಿಯಿಂದ ಹಿಡಿದು, ಸಂಸದ ಪ್ರವೇಶ್‌ವರ್ಮಾ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಕೇಂದ್ರ ಸರ್ಕಾರದ ಕಿರಿಯ ಮಂತ್ರಿ ಅನುರಾಗ್ ಠಾಕೂರ್, ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕೋಮುವಾದದ ಕಾಳ್ಗಿಚ್ಚನ್ನು ಹೊತ್ತಿಸುವ ಕೃತ್ಯದಲ್ಲಿ ತೊಡಗಿದ್ದಾರೆ. ಈ ದ್ವೇಷದ ಕಿಚ್ಚನ್ನು ಜನಮಾನಸದ ಎದೆಯಲ್ಲಿ ಹೊತ್ತಿಸಿ ದಾರಿ ತಪ್ಪಿಸುವ ಅಪಾಯಕಾರಿ ಆಟವಿದು. ಜನರನ್ನು ಒಡೆದು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟಿ ಕೊಲ್ಲಿಸುವ ಆಟ. ಈ ಆಟದಲ್ಲಿ ಕಿಚ್ಚು ಹೊತ್ತಿಸುವವರು ಗೆಲ್ಲಬಹುದು, ಆದರೆ ದೇಶ ಸೋಲುತ್ತದೆ.

ಗೋಲಿ ಮಾರೋ ಸಾಲೋಂ ಕೋ ಎಂಬ ತಮ್ಮ ನಾಯಕರು ಕುಡಿಸಿರುವ ದ್ವೇಷದ ನಶೆಯನ್ನು ಏರಿಸಿಕೊಂಡಿರುವ ಯುವಕರು ಈಗಾಗಲೆ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸತೊಡಗಿದ್ದಾರೆ.

ಈ ಕಿಚ್ಚು ಇಷ್ಟಕ್ಕೇ ನಿಲ್ಲುತ್ತದೆಯೇ, ಪಕ್ಕದ ಮನೆ ಸುಟ್ಟರೆ, ಆ ಬೆಂಕಿ ಇಂದಲ್ಲ ನಾಳೆ ನನ್ನ ಮನೆಯನ್ನೂ ಸುಟ್ಟೀತಲ್ಲವೇ ಎಂಬ ಪ್ರಜ್ಞೆ ಮೂಡಬೇಕಿದೆ. ಚುನಾವಣೆಗಳಲ್ಲಿ ಗೆಲ್ಲುವ ಅಲ್ಪಕಾಲೀನ ತಂತ್ರ ಮಾತ್ರವಲ್ಲದೆ ಮತ್ತು ಕೇಸರಿ ಸೈದ್ಧಾಂತಿಕ ನೆಲೆಯ ಶಾಶ್ವತ ಸ್ಥಾಪನೆಗಾಗಿ ಮುಸ್ಲಿಮರು, ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಉದಾರವಾದಿಗಳು, ಪ್ರಜ್ಞಾವಂತರು, ಕೇಂದ್ರ ಸರ್ಕಾರದ ನೀತಿ ನಿರ್ಧಾರಗಳನ್ನು ವಿರೋಧಿಸುವ ಯಾರೇ ಇರಲಿ, ಅವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಅವರಿಗೆ ಗುಂಡು ಹೊಡೆಯಬೇಕೆಂದು ಕರೆ ನೀಡಲಾಗುತ್ತಿದೆ. ಈ ಕರೆಯನ್ನು ದೇಶದ ಪ್ರಧಾನಮಂತ್ರಿ- ಗೃಹಮಂತ್ರಿ ಪ್ರತ್ಯಕ್ಷ ಪರೋಕ್ಷವಾಗಿ ಸಮರ್ಥಿಸುತ್ತಿದ್ದಾರೆ. ಇನ್ನು ಬಂಧನ ಕೇಂದ್ರಗಳು ಆರಂಭ ಆಗತೊಡಗಿವೆ.

ವಿದ್ಯಾರ್ಥಿ ಪರಿಷತ್ತಿನ ಸಂಬಂಧವಿದ್ದ ಬಲಪಂಥೀಯ ಮುಸುಕುಧಾರಿಗಳು ಜೆ.ಎನ್.ಯು ಹಾಸ್ಟೆಲುಗಳ ನುಗ್ಗಿ ವಿದ್ಯಾರ್ಥಿಗಳನ್ನು ತಲೆ ಒಡೆದು ರಕ್ತ ಹರಿಸಿ ತಿಂಗಳೇ ಉರುಳಿತು. ಒಬ್ಬನೇ ಒಬ್ಬನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ ಗೋಪಾಲ ಶರ್ಮನನ್ನು ಅಪ್ರಾಪ್ತ ವಯಸ್ಕನೆಂದು ಸಾರಿ ರಕ್ಷಿಸಲಾಗಿದೆ. ಅತ್ತ ಬೀದರಿನಲ್ಲಿ ಮನೆಗೆಲಸ ಮಾಡಿ ಹೊಟ್ಟೆ ಹೊರೆವ ಮುಸ್ಲಿಂ ತಾಯಿಯನ್ನು ದೇಶದ್ರೋಹದ ಆಪಾದನೆಯ ಮೇರೆಗೆ ಬಂಧಿಸಲಾಗಿದೆ. ಹೊರಗಿರುವ ಆಕೆಯ ಒಂಬತ್ತು ವರ್ಷದ ಮಗಳು ಈಗ ಏಕಾಂಗಿ. ಕಾಗದ ತೋರಿಸಬೇಕೆಂದು ತೋರಿಸುವವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತು ಇರುವ ನಾಟಕ ಆಡಿಸಿದರೆಂದು ಅಲ್ಪಸಂಖ್ಯಾತ ಶಾಲೆಯೊಂದರ ಮಕ್ಕಳನ್ನು ಪೊಲೀಸರು ಪ್ರಶ್ನಿಸತೊಡಗಿದ್ದಾರೆ. ಗೋಲಿ ಮಾರೋ ಸಾಲೋಂ ಕೋ ಎಂಬುದಾಗಿ ಪ್ರಚೋದಿಸುವವರ ಮೇಲೆ ಕನಿಷ್ಠ ಎಫ್.ಐ.ಆರ್ ಕೂಡ ಇಲ್ಲ.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ, ಇದು ದೀರ್ಘ ಇರುಳು. ಆದರೆ ನೆನಪಿಡೋಣ ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಅದೆಷ್ಟೇ ಪ್ರಚಂಡನಾದರೂ ಜನತೆಗಿಂತ ದೊಡ್ಡವನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...