Homeಬಹುಜನ ಭಾರತಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಜನತೆಗಿಂತ ದೊಡ್ಡವನಲ್ಲ: ಡಿ.ಉಮಾಪತಿ

- Advertisement -
- Advertisement -

ಆಡುವ ನುಡಿಗಳಿಗೆ ಸಾಧಕ ಬಾಧಕಗಳಿರುತ್ತವೆ. ಉಳಿದೆಲ್ಲರಿಗಿಂತ ಹೆಚ್ಚಾಗಿ ನಿತ್ಯ ಜನಸಮೂಹಗಳೊಂದಿಗೆ ಪ್ರತ್ಯಕ್ಷ-ಪರೋಕ್ಷ ಸಂವಾದದಲ್ಲಿ ತೊಡಗುವ ಜನಪ್ರತಿನಿಧಿಗಳಿಗೆ ಈ ಮಾತು ವಿಶೇಷವಾಗಿ ಅನ್ವಯಿಸುತ್ತದೆ. ಜನರಿಗೆ ಮತ್ತು ಜನರಿಂದ ರೂಪಿತವಾಗಿರುವ ಸಂವಿಧಾನದ ಆಶಯಗಳಿಗೆ ಅವರು ಬದ್ಧರಾಗಿರಬೇಕು. ಹಾಗೆಂದು ಶಾಸನಸಭೆ ಮತ್ತು ಸಂಸತ್ತಿನಲ್ಲಿ ನಿಂತು ಪ್ರಮಾಣವಚನ ಸ್ವೀಕರಿಸುತ್ತಾರೆ. ಪ್ರಮಾಣವಚನ ಸ್ವೀಕರಿಸಿದ ನಂತರವೇ ಅವರಿಗೆ ಶಾಸನಸಭೆಗಳು- ಸಂಸತ್ತಿನಲ್ಲಿ ಆಸನಗಳು ದೊರೆಯುತ್ತವೆ. ಮಾತಾಡುವ ಹಕ್ಕು ಲಭಿಸುತ್ತದೆ. ಸಂಬಳ-ಸಾರಿಗೆ-ಭತ್ಯೆಗಳು ಮತ್ತು ಸಂಸದೀಯ ಅಧಿಕಾರಗಳು ದತ್ತವಾಗುತ್ತವೆ. ಮಂತ್ರಿಗಳು ಈ ಪ್ರಮಾಣವಚನವನ್ನು ಎರಡು ಸಲ ಸ್ವೀಕರಿಸುತ್ತಾರೆ. ಸ್ಪೀಕರ್-ಸಭಾಪತಿ ರಾಜ್ಯಪಾಲರು- ರಾಷ್ಟ್ರಪತಿಯವರು ಬೋಧಿಸುವ ಈ ಶಪಥವನ್ನು ಬಹಿರಂಗವಾಗಿ ಬಾಯಲ್ಲಿ ನುಡಿದು ಆಡಬೇಕಾಗುತ್ತದೆ ಎಂಬುದನ್ನು ಗಮನಿಸಬೇಕು.

‘… ಎಂಬುವವನಾದ ನಾನು ದೇವರ- ಸತ್ಯನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುತ್ತೇನೆ. ವಿಧಿ ದ್ವಾರಾ ಸ್ಥಾಪಿಸಲಾದ ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತೇನೆ. ನಾನು ಭಾರತದ ಪ್ರಭುತೆ ಮತ್ತು ಅಖಂಡತೆಯನ್ನು ಕಾಪಾಡುತ್ತೇನೆ. ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಶುದ್ಧ ಅಂತಃಕರಣದಿಂದ ನಿರ್ವಹಿಸುತ್ತೇನೆ. ಭಯ ಅಥವಾ ಪಕ್ಷಪಾತ, ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ, ಎಲ್ಲ ರೀತಿಯ ಜನರಿಗೆ ಸಂವಿಧಾನ ಮತ್ತು ವಿಧಿಯ ಅನುಸಾರ ನ್ಯಾಯ ಸಲ್ಲಿಸುತ್ತೇನೆ’ ಎಂಬುದಾಗಿ ಶಾಸಕರು- ಸಂಸದರು ಸ್ವೀಕರಿಸುವ ಪ್ರತಿಜ್ಞೆಯ ಜೊತೆಗೆ ಪ್ರಧಾನಮಂತ್ರಿ-ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಗೌಪ್ಯತೆಯ ಶಪಥವನ್ನೂ ಸ್ವೀಕರಿಸುತ್ತಾರೆ.

ಭಯ ಅಥವಾ ಪಕ್ಷಪಾತ ಅನುರಾಗ ಇಲ್ಲವೇ ದ್ವೇಷಗಳಿಲ್ಲದೆ ಶುದ್ಧ ಅಂತಃಕರಣದಿಂದ ತಮ್ಮ ಕರ್ತವ್ಯಗಳನ್ನು ಆಳುವ ಪಕ್ಷದ ಜನಪ್ರತಿನಿಧಿಗಳು ಮಂತ್ರಿಗಳು ಪ್ರಧಾನಮಂತ್ರಿ ನಿರ್ವಹಿಸುತ್ತಿದ್ದಾರೆಯೇ, ಭಾರತದ ಸಂವಿಧಾನದ ಪ್ರಕಾರ ನಡೆದುಕೊಳ್ಳುತ್ತಿದ್ದಾರೆಯೇ ಎಂಬ ಪ್ರಶ್ನೆಗಳನ್ನು ಒಮ್ಮೆ ಕೇಳಿಕೊಳ್ಳಬೇಕಿದೆ.

ಎಲ್ಲ ನೈತಿಕ ಎಲ್ಲೆಗಳನ್ನು ಎದೆ ಸೆಟೆಸಿ ಉಲ್ಲಂಘಿಸುವ ಭಂಡತನದಲ್ಲಿ ಪೈಪೋಟಿ ನಡೆಯತೊಡಗಿದೆ. ದ್ವೇಷ, ದ್ರುವೀಕರಣ ಹಾಗೂ ಹಿಂಸೆಗಳನ್ನು ಪ್ರಚೋದಿಸುವ ಪಂದ್ಯಗಳಲ್ಲಿ ತಾವು ಭಾಗವಹಿಸುತ್ತಿದ್ದೇವೆ ಎಂಬ ಭಾವನೆಯನ್ನು ಬಿಜೆಪಿಯಲ್ಲಿ ಮತ್ತು ಈ ಪಕ್ಷದ ಕಟ್ಟರ್‌ವಾದಿ ಬೆಂಬಲಿಗರಲ್ಲಿ ಉತ್ತೇಜಿಸಲಾಗುತ್ತಿದೆ. ಈ ನಾಚಿಕೆಗೇಡಿನಲ್ಲಿ ತೊಡಗಿದವರಿಗೆ ಇಂದಲ್ಲದಿದ್ದರೆ ನಾಳೆ ಪಕ್ಷ ಬಹುಮಾನಗಳನ್ನು ನೀಡಿ ಬೆನ್ನು ತಟ್ಟುತ್ತಿದೆ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿರುವ ಭಯೋತ್ಪಾದಕರಿಗೂ ಮುಂದೊಂದು ದಿನ ಬಿಜೆಪಿ ಚುನಾವಣಾ ಟಿಕೆಟ್ ಗಳು ದೊರೆತರೆ ಚಕಿತರಾಗಬೇಕಿಲ್ಲ.

ಸಿ.ಎ.ಎ – ಎನ್.ಆರ್.ಸಿ. ವಿರುದ್ಧ ಶಾಂತಿಯುತ ಪ್ರತಿಭಟನೆ ಜರುಗುತ್ತಿರುವ ಶಾಹೀನ್‌ಬಾಗ್ ಅನ್ನು ಮಿನಿ ಪಾಕಿಸ್ತಾನ ಎಂದು ಕರೆಯುವುದು, ದೇಶ್ ಕೇ ಗದ್ದಾರೋಂ ಕೋ ಗೋಲೀ ಮಾರೋ ಸಾಲೋಂ ಕೋ ಎಂಬ ಘೋಷಣೆಗಳನ್ನು ಜನಸಭೆಗಳಲ್ಲಿ ಕೂಗಿಸುವುದು, ಎಷ್ಟು ಸಿಟ್ಟಿನಿಂದ ನೀವು ಚುನಾವಣಾ ಮತಯಂತ್ರದ ಗುಂಡಿ ಒತ್ತಬೇಕೆಂದರೆ ಅದರ ಆಘಾತ ಶಾಹೀನ್‌ಬಾಗ್‌ಗೆ ತಗುಲಬೇಕು ಎಂದು ಪ್ರಚೋದಿಸುವುದು, ಕಾಶ್ಮೀರದಲ್ಲಿ ಪಂಡಿತರನ್ನು ಹಿಂಸಿಸಿ ಬೆದರಿಸಿ ಓಡಿಸಿದಂತೆಯೇ ದೆಹಲಿಯಲ್ಲಿ ಶಾಹೀನ್‌ಬಾಗ್‌ನ ಪ್ರತಿಭಟನಕಾರರು ನಾಳೆ ನಿಮ್ಮ ಮನೆಗಳಿಗೆ ನುಗ್ಗಿ ನಿಮ್ಮ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲ್ಲಬಹುದು ಎಂದು ಒಂದು ಜನಾಂಗದ ವಿರುದ್ಧ ಹೇವರಿಕೆ ಭಯ ದ್ವೇಷ ಹುಟ್ಟಿಸುವುದು, ಶಾಹೀನ್‌ಬಾಗ್ ಪ್ರತಿಭಟನೆಯ ಹಿಂದೆ ದೇಶವನ್ನು ಒಡೆಯುವ ಹುನ್ನಾರವಿದೆ ಎಂಬುವ ವಿಷ ಕಕ್ಕುವ ಮಾತುಗಳು ಬಿಜೆಪಿಯವು.

ಶಾಹೀನ್‌ಬಾಗ್ ನಲ್ಲಿ ಧರಣಿ ಕುಳಿತಿರುವ ಮಹಿಳೆಯರು ಮತ್ತು ಮಕ್ಕಳು ಸಾಯಬಾರದೇಕೆ, ಉತ್ತರಪ್ರದೇಶದಂತಹ ಬಿಜೆಪಿ ಆಳ್ವಿಕೆಯ ರಾಜ್ಯಗಳಲ್ಲಿ ಸಿಎಎ ಪ್ರತಿಭಟನಾಕಾರರನ್ನು ನಾಯಿಗಳಂತೆ ಗುಂಡು ಹೊಡೆದು ಸಾಯಿಸಲಾಗಿದೆ ಎನ್ನುತ್ತಾರೆ. ತಮ್ಮ ಕಾರ್ಯಕರ್ತರು ಸಿಎಎ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬಳನ್ನು ಬೆಂಬತ್ತಿ ಛೇಡಿಸುವುದನ್ನು ಬೆಂಬಲಿಸುತ್ತಾರೆ. ಅವಳ ಅದೃಷ್ಟ ಚೆನ್ನಾಗಿತ್ತು, ನಮ್ಮ ಕಾರ್ಯಕರ್ತರು ಆಕೆಯನ್ನು ಅಷ್ಟಕ್ಕೇ ಬಿಟ್ಟುಬಿಟ್ಟರು ಎನ್ನುತ್ತಾರೆ ದ್ವೇಷದ ಕಿಚ್ಚು ಹಚ್ಚುವ ನುಡಿಗಳು. ಕಪಿಲ್ ಮಿಶ್ರಾ ಎಂಬ ಪುಡಿ ಪುಢಾರಿಯಿಂದ ಹಿಡಿದು, ಸಂಸದ ಪ್ರವೇಶ್‌ವರ್ಮಾ, ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಕೇಂದ್ರ ಸರ್ಕಾರದ ಕಿರಿಯ ಮಂತ್ರಿ ಅನುರಾಗ್ ಠಾಕೂರ್, ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕೋಮುವಾದದ ಕಾಳ್ಗಿಚ್ಚನ್ನು ಹೊತ್ತಿಸುವ ಕೃತ್ಯದಲ್ಲಿ ತೊಡಗಿದ್ದಾರೆ. ಈ ದ್ವೇಷದ ಕಿಚ್ಚನ್ನು ಜನಮಾನಸದ ಎದೆಯಲ್ಲಿ ಹೊತ್ತಿಸಿ ದಾರಿ ತಪ್ಪಿಸುವ ಅಪಾಯಕಾರಿ ಆಟವಿದು. ಜನರನ್ನು ಒಡೆದು ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟಿ ಕೊಲ್ಲಿಸುವ ಆಟ. ಈ ಆಟದಲ್ಲಿ ಕಿಚ್ಚು ಹೊತ್ತಿಸುವವರು ಗೆಲ್ಲಬಹುದು, ಆದರೆ ದೇಶ ಸೋಲುತ್ತದೆ.

ಗೋಲಿ ಮಾರೋ ಸಾಲೋಂ ಕೋ ಎಂಬ ತಮ್ಮ ನಾಯಕರು ಕುಡಿಸಿರುವ ದ್ವೇಷದ ನಶೆಯನ್ನು ಏರಿಸಿಕೊಂಡಿರುವ ಯುವಕರು ಈಗಾಗಲೆ ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸತೊಡಗಿದ್ದಾರೆ.

ಈ ಕಿಚ್ಚು ಇಷ್ಟಕ್ಕೇ ನಿಲ್ಲುತ್ತದೆಯೇ, ಪಕ್ಕದ ಮನೆ ಸುಟ್ಟರೆ, ಆ ಬೆಂಕಿ ಇಂದಲ್ಲ ನಾಳೆ ನನ್ನ ಮನೆಯನ್ನೂ ಸುಟ್ಟೀತಲ್ಲವೇ ಎಂಬ ಪ್ರಜ್ಞೆ ಮೂಡಬೇಕಿದೆ. ಚುನಾವಣೆಗಳಲ್ಲಿ ಗೆಲ್ಲುವ ಅಲ್ಪಕಾಲೀನ ತಂತ್ರ ಮಾತ್ರವಲ್ಲದೆ ಮತ್ತು ಕೇಸರಿ ಸೈದ್ಧಾಂತಿಕ ನೆಲೆಯ ಶಾಶ್ವತ ಸ್ಥಾಪನೆಗಾಗಿ ಮುಸ್ಲಿಮರು, ವಿದ್ಯಾರ್ಥಿಗಳು, ಸಾಮಾಜಿಕ ಹೋರಾಟಗಾರರು, ಉದಾರವಾದಿಗಳು, ಪ್ರಜ್ಞಾವಂತರು, ಕೇಂದ್ರ ಸರ್ಕಾರದ ನೀತಿ ನಿರ್ಧಾರಗಳನ್ನು ವಿರೋಧಿಸುವ ಯಾರೇ ಇರಲಿ, ಅವರಿಗೆ ದೇಶದ್ರೋಹಿಗಳ ಪಟ್ಟ ಕಟ್ಟಲಾಗುತ್ತಿದೆ. ಅವರಿಗೆ ಗುಂಡು ಹೊಡೆಯಬೇಕೆಂದು ಕರೆ ನೀಡಲಾಗುತ್ತಿದೆ. ಈ ಕರೆಯನ್ನು ದೇಶದ ಪ್ರಧಾನಮಂತ್ರಿ- ಗೃಹಮಂತ್ರಿ ಪ್ರತ್ಯಕ್ಷ ಪರೋಕ್ಷವಾಗಿ ಸಮರ್ಥಿಸುತ್ತಿದ್ದಾರೆ. ಇನ್ನು ಬಂಧನ ಕೇಂದ್ರಗಳು ಆರಂಭ ಆಗತೊಡಗಿವೆ.

ವಿದ್ಯಾರ್ಥಿ ಪರಿಷತ್ತಿನ ಸಂಬಂಧವಿದ್ದ ಬಲಪಂಥೀಯ ಮುಸುಕುಧಾರಿಗಳು ಜೆ.ಎನ್.ಯು ಹಾಸ್ಟೆಲುಗಳ ನುಗ್ಗಿ ವಿದ್ಯಾರ್ಥಿಗಳನ್ನು ತಲೆ ಒಡೆದು ರಕ್ತ ಹರಿಸಿ ತಿಂಗಳೇ ಉರುಳಿತು. ಒಬ್ಬನೇ ಒಬ್ಬನನ್ನು ಪೊಲೀಸರು ಈವರೆಗೆ ಬಂಧಿಸಿಲ್ಲ. ಶಾಹೀನ್‌ಬಾಗ್‌ನಲ್ಲಿ ಗುಂಡು ಹಾರಿಸಿದ ಗೋಪಾಲ ಶರ್ಮನನ್ನು ಅಪ್ರಾಪ್ತ ವಯಸ್ಕನೆಂದು ಸಾರಿ ರಕ್ಷಿಸಲಾಗಿದೆ. ಅತ್ತ ಬೀದರಿನಲ್ಲಿ ಮನೆಗೆಲಸ ಮಾಡಿ ಹೊಟ್ಟೆ ಹೊರೆವ ಮುಸ್ಲಿಂ ತಾಯಿಯನ್ನು ದೇಶದ್ರೋಹದ ಆಪಾದನೆಯ ಮೇರೆಗೆ ಬಂಧಿಸಲಾಗಿದೆ. ಹೊರಗಿರುವ ಆಕೆಯ ಒಂಬತ್ತು ವರ್ಷದ ಮಗಳು ಈಗ ಏಕಾಂಗಿ. ಕಾಗದ ತೋರಿಸಬೇಕೆಂದು ತೋರಿಸುವವರನ್ನು ಚಪ್ಪಲಿಯಲ್ಲಿ ಹೊಡೆಯಬೇಕು ಎಂಬ ಮಾತು ಇರುವ ನಾಟಕ ಆಡಿಸಿದರೆಂದು ಅಲ್ಪಸಂಖ್ಯಾತ ಶಾಲೆಯೊಂದರ ಮಕ್ಕಳನ್ನು ಪೊಲೀಸರು ಪ್ರಶ್ನಿಸತೊಡಗಿದ್ದಾರೆ. ಗೋಲಿ ಮಾರೋ ಸಾಲೋಂ ಕೋ ಎಂಬುದಾಗಿ ಪ್ರಚೋದಿಸುವವರ ಮೇಲೆ ಕನಿಷ್ಠ ಎಫ್.ಐ.ಆರ್ ಕೂಡ ಇಲ್ಲ.

ನಾಜಿ ಜರ್ಮನಿಯ ಇತಿಹಾಸ ಭಾರತದಲ್ಲಿ ಸುರುಳಿ ಬಿಚ್ಚತೊಡಗಿದೆ. ಅನುಮಾನವೇ ಇಲ್ಲ, ಇದು ದೀರ್ಘ ಇರುಳು. ಆದರೆ ನೆನಪಿಡೋಣ ಯಾವ ಸರ್ಕಾರವೂ ದೇಶಕ್ಕಿಂತ ದೊಡ್ಡದಲ್ಲ. ನಾಯಕ ಅದೆಷ್ಟೇ ಪ್ರಚಂಡನಾದರೂ ಜನತೆಗಿಂತ ದೊಡ್ಡವನಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...