Homeಮುಖಪುಟದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ರಮೇಶ್ ಜಗಜಿಣಗಿ ನೀವು ದಲಿತರಾಗಿದ್ದುಕೊಂಡು ಬಿಜೆಪಿಯೊಳಗಿದ್ದರೆ ಬೆಳಯಲು ಏನು ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಗಜಿಣಗಿ, ದಲಿತರಾಗಿದ್ದರೆ ಬಿಜೆಪಿಯೊಳಗೆ ಬೆಳೆಯಲು ಅವಕಾಶ ಸಿಗುವುದಿಲ್ಲ. ಶ್ರೀಮಂತ ನಾಯಕರು ಅಥವಾ ಒಕ್ಕಲಿಗರು ಇದ್ದರೆ ಅವರನ್ನು ಬೆಂಬಲಿಸುತ್ತಾರೆ. ಆದರೆ ದಲಿತರಿದ್ದರೆ ಯಾರೂ ಬೆಂಬಲಿಸುವುದಿಲ್ಲ. ಇದು ನಮಗೆ ತಿಳಿದಿದೆ ಮತ್ತು ಇದು ತುಂಬಾ ದುರದೃಷ್ಟಕರ ಎಂದು ಹೇಳಿದ್ದಾರೆ.

ಬಿಜೆಪಿಯ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದೆ ಹೊರತು ಅವರನ್ನು ರಾಜ್ಯದ ಬಿಜೆಪಿ ನಾಯಕರು ಹೆಸರಿಸಿಲ್ಲ ಎಂದು ಹೇಳುವ ಮೂಲಕ ಪಕ್ಷದ ಹೈಕಮಾಂಡ್‌ ನಿರ್ಧಾರದ ವಿರುದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಪಕ್ಷದ ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಟೀಕಿಸಿದರು.

ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶುಕ್ರವಾರ ನೇಮಿಸಿದ್ದರು. ಅವರು ನ.15 ರಂದು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ನೇಮಕ  ಬಿಜೆಪಿಯ ಹಲವು ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಸೋಮಣ್ಣ, ಸಿಟಿ ರವಿ, ಯತ್ನಾಳ್ ಸೇರಿ ಹಲವು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿತರಾಗಿದ್ದರು. ಆದರೆ ಕೊನೆಗೆ ಯಡಿಯೂರಪ್ಪ ಅವರೇ ಮೇಲುಗೈ ಸಾಧಿಸಿದ್ದಾರೆ.

ವಿಜಯೇಂದ್ರ ಅವರ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೇ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು.

ಇದನ್ನು ಓದಿ; ‘ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...