Homeಮುಖಪುಟದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಮುಖ್ಯಸ್ಥರನ್ನಾಗಿ ನೇಮಕ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ರಮೇಶ್ ಜಗಜಿಣಗಿ ನೀವು ದಲಿತರಾಗಿದ್ದುಕೊಂಡು ಬಿಜೆಪಿಯೊಳಗಿದ್ದರೆ ಬೆಳಯಲು ಏನು ಅವಕಾಶ ಸಿಗುವುದಿಲ್ಲ ಎಂದು ಹೇಳಿದ್ದಾರೆ.

ವಿಜಯಪುರದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ರಮೇಶ್ ಜಗಜಿಣಗಿ, ದಲಿತರಾಗಿದ್ದರೆ ಬಿಜೆಪಿಯೊಳಗೆ ಬೆಳೆಯಲು ಅವಕಾಶ ಸಿಗುವುದಿಲ್ಲ. ಶ್ರೀಮಂತ ನಾಯಕರು ಅಥವಾ ಒಕ್ಕಲಿಗರು ಇದ್ದರೆ ಅವರನ್ನು ಬೆಂಬಲಿಸುತ್ತಾರೆ. ಆದರೆ ದಲಿತರಿದ್ದರೆ ಯಾರೂ ಬೆಂಬಲಿಸುವುದಿಲ್ಲ. ಇದು ನಮಗೆ ತಿಳಿದಿದೆ ಮತ್ತು ಇದು ತುಂಬಾ ದುರದೃಷ್ಟಕರ ಎಂದು ಹೇಳಿದ್ದಾರೆ.

ಬಿಜೆಪಿಯ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಿದೆ ಹೊರತು ಅವರನ್ನು ರಾಜ್ಯದ ಬಿಜೆಪಿ ನಾಯಕರು ಹೆಸರಿಸಿಲ್ಲ ಎಂದು ಹೇಳುವ ಮೂಲಕ ಪಕ್ಷದ ಹೈಕಮಾಂಡ್‌ ನಿರ್ಧಾರದ ವಿರುದ್ದ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿ.ವೈ.ವಿಜಯೇಂದ್ರ ಅವರು ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಪಕ್ಷದ ಹೈಕಮಾಂಡ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದೆ ಎಂದು ಟೀಕಿಸಿದರು.

ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಶುಕ್ರವಾರ ನೇಮಿಸಿದ್ದರು. ಅವರು ನ.15 ರಂದು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ನಳಿನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ನೇಮಕ  ಬಿಜೆಪಿಯ ಹಲವು ಹಿರಿಯ ನಾಯಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಸೋಮಣ್ಣ, ಸಿಟಿ ರವಿ, ಯತ್ನಾಳ್ ಸೇರಿ ಹಲವು ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಆಕಾಂಕ್ಷಿತರಾಗಿದ್ದರು. ಆದರೆ ಕೊನೆಗೆ ಯಡಿಯೂರಪ್ಪ ಅವರೇ ಮೇಲುಗೈ ಸಾಧಿಸಿದ್ದಾರೆ.

ವಿಜಯೇಂದ್ರ ಅವರ ನೇಮಕದ ಬಗ್ಗೆ ಪ್ರತಿಕ್ರಿಯಿಸಿದ ಸಿಟಿ ರವಿ, ಈಗಾಗಲೆ ಬಹಳಷ್ಟು ಮಾತನಾಡಿದ್ದೇನೆ. 35 ವರ್ಷಗಳಿಂದ ರಾಜಕೀಯ ಕ್ಷೇತ್ರದಲ್ಲಿದ್ದೇನೆ. ಬೂತ್ ಅಧ್ಯಕ್ಷನಿಂದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿವರೆಗೂ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗಾಗಲೆ ಬಹಳ ವಿಷಯ ಮಾತನಾಡಿ ಬಿಟ್ಟಿದ್ದೇನೆ. ಈಗ ಏನಾದರೂ ಮಾತನಾಡಿದರೇ ನಮ್ಮ ಮಾತೇ ನಮಗೆ ತಿರುಗುಬಾಣವಾಗುತ್ತೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದ್ದರು.

ಇದನ್ನು ಓದಿ; ‘ಮರುನಾಡನ್ ಮಲಯಾಳಿ’ ಯೂಟ್ಯೂಬ್ ಚಾನೆಲ್ ಸಂಸ್ಥಾಪಕರ ವಿರುದ್ಧ ಪ್ರಕರಣ ದಾಖಲು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...