Homeಮುಖಪುಟಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಐಟಿ ನಿಯಮಗಳ ತಿದ್ದುಪಡಿ, ಪ್ರತ್ಯೇಕ ಫ್ಯಾಕ್ಟ್‌ಚೆಕ್ ಘಟಕದ ಅಗತ್ಯತೆ ಏನಿದೆ?: ಕೇಂದ್ರಕ್ಕೆ ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಹೊಸ ಐಟಿ ನಿಯಮಗಳು ಸರ್ಕಾರಕ್ಕೆ ಯಾವುದೇ “ಮಾರ್ಗಸೂಚಿಗಳು ಮತ್ತು ಗಾರ್ಡ್‌ರೈಲ್‌ಗಳು ಇಲ್ಲದೆಯೇ “ಅನಿಯಂತ್ರಿತ ಅಧಿಕಾರ” ನೀಡುತ್ತದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಗಮನಿಸಿದೆ.

ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಐಟಿ ನಿಯಮದ ತಿದ್ದುಪಡಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪೀಠವು, ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್ ಚೆಕ್‌ನ್ನು ಸ್ಥಾಪಿಸಿದ್ದರೂ ತಿದ್ದುಪಡಿ ಮತ್ತು ಪ್ರತ್ಯೇಕ ಸತ್ಯ ಪರಿಶೀಲನಾ ಘಟಕದ ಅಗತ್ಯತೆ ಏನಿದೆ? ಎಂದು ಸರ್ಕಾರವನ್ನು ಪ್ರಶ್ನಿಸಿತು.

”ನೀವು ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ PIB ಇದೆ, ಹಾಗಿದ್ದಾಗ ಈ ತಿದ್ದುಪಡಿ ಏಕೆ ಅಗತ್ಯವಿತ್ತು ಮತ್ತು ಫ್ಯಾಕ್ಟ್‌ಚೆಕ್ ಘಟಕ ಯಾಕೆ ಸ್ಥಾಪಿಸಬೇಕು? ಈ ತಿದ್ದುಪಡಿಯು ಉದ್ದೇಶವೇ ಬೇರೆ ಎಂದು ನಮಗೆ ಅನಿಸುತ್ತಿದೆ. ಸರ್ಕಾರವು “ಯಾವುದೇ ಫ್ಯಾಕ್ಟ್‌ಚೆಕ್ ಮಾಡಲು ಮಾರ್ಗಸೂಚಿ ಹೊಂದಿರುವುದು ಅಗತ್ಯವಿದೆ” ಎಂದು ನ್ಯಾಯಮೂರ್ತಿ ಪಟೇಲ್ ಹೇಳಿದರು.

ಈ ಮಧ್ಯೆ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪಿಐಬಿಯ ಫ್ಯಾಕ್ಟ್ ಚೆಕ್ ಯುನಿಟ್ “ಹಲ್ಲಿಲ್ಲ ಹಾವಿನಂತೆ” ಎಂದು ಹೇಳಿದರು.

”ಐಟಿ ನಿಯಮಗಳು ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸುವುದಕ್ಕೆ ಸಂಬಂಧಿಸಿಲ್ಲ. ಅಭಿಪ್ರಾಯ, ಟೀಕೆ ಅಥವಾ ತುಲನಾತ್ಮಕ ವಿಶ್ಲೇಷಣೆಯ ಯಾವುದೇ ಅಭಿವ್ಯಕ್ತಿಯನ್ನು ನಿಷೇಧಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ… ವಾಸ್ತವವಾಗಿ ನಾವು ಅಂತವರನ್ನು ಸ್ವಾಗತಿಸುತ್ತೇವೆ, ಅವರಿಗೆ ಪ್ರೋತ್ಸಾಹಿಸುತ್ತೇವೆ ಮತ್ತು ಅವರಿಂದ ಕಲಿಯುತ್ತೇವೆ” ಎಂದು ಅವರು ಹೇಳಿದರು.

ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಪ್ರಕರಣದಲ್ಲಿ ಈ ನಿಯಮಗಳನ್ನು ಅನಿಯಂತ್ರಿತ ಮತ್ತು ಅಸಂವಿಧಾನಿಕವಾಗಿ ಬಳಸಲಾಗಿದೆ ಎಂದು ಉಲ್ಲೇಖಿಸಿ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ಅಸೋಸಿಯೇಷನ್ ಆಫ್ ಇಂಡಿಯನ್ ಮ್ಯಾಗಜೀನ್‌ಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಆ ಅರ್ಜಿಗಳ ವಿಚಾರಣೆ ಬುಧವಾರವೂ ಮುಂದುವರಿಯಲಿದೆ.

ಈ ತಿದ್ದುಪಡಿಯನ್ನು ಏಪ್ರಿಲ್ 6ರಂದು ತಿಳಿಸಲಾಗಿದೆ, ಸರ್ಕಾರಿ ಸತ್ಯ-ಪರಿಶೀಲನಾ ಘಟಕದಿಂದ ನಕಲಿ ಎಂದು ಪರಿಗಣಿಸಲ್ಪಟ್ಟ ವಿಷಯವನ್ನು ಸಾಮಾಜಿಕ ಮಾಧ್ಯಮ ಕಂಪನಿಗಳು ಮತ್ತು ಇತರ ಮಧ್ಯವರ್ತಿಗಳು  ತೆಗೆದುಹಾಕಬೇಕು ಎಂದು ಹೇಳಿದರು. ಇದನ್ನು ಪತ್ರಿಕಾ ಗುಂಪುಗಳು, ವಿರೋಧ ಪಕ್ಷದ ನಾಯಕರು ಮತ್ತು ಪತ್ರಕರ್ತರು ವ್ಯಾಪಕವಾಗಿ ವಿರೋಧಿಸಿದರು.

ಇದನ್ನೂ ಓದಿ: ‘ಇಸ್ಕಾನ್’ ಅತಿ ದೊಡ್ಡ ಮೋಸದ ಸಂಸ್ಥೆ, ಹಸುಗಳನ್ನು ಕಟುಕರಿಗೆ ಮಾರಿದೆ: ಬಿಜೆಪಿ ಸಂಸದೆ ಮನೇಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....