Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...