Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...