Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...