Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...