Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...