Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...