Homeಮುಖಪುಟಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

- Advertisement -
- Advertisement -

ಮುಂದಿನ ಗುರುವಾರ (ಫೆ.6) ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.

ಟ್ರಂಪ್ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಬಳಿಕ, ಅವರನ್ನು ಭೇಟಿಯಾಗುತ್ತಿರುವ ಮೊದಲ ವಿದೇಶ ನಾಯಕ ನೆತನ್ಯಾಹು ಆಗಿದ್ದಾರೆ.

ನೆತನ್ಯಾಹು ಭೇಟಿಯ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಟ್ರಂಪ್, “ಗಾಝಾ ಕದನ ವಿರಾಮ ಮುಂದುವರಿಯುವ ಯಾವುದೇ ಗ್ಯಾರಂಟಿ ನನಗಿಲ್ಲ” ಎಂದಿದ್ದಾರೆ.

ವಿವಿಧ ‍‍ಷರತ್ತುಗಳನ್ನು ಒಳಗೊಂಡ ಹಮಾಸ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮ ಒಪ್ಪಂದ ಜನವರಿ 16, 2025ರಿಂದ ಜಾರಿಗೆ ಬಂದಿದೆ. ಅದರ ಮೊದಲ ಹಂತವಾಗಿ ಪರಸ್ಪರ ಬಂಧಿತರು, ಒತ್ತೆಯಾಳುಗಳ ಬಿಡುಗಡೆ ಯಶಸ್ವಿಯಾಗಿ ನಡೆಯುತ್ತಿದೆ. ಶಿಬಿರಗಳಲ್ಲಿ ಇದ್ದ ಲಕ್ಷಾಂತರ ಜನರು ಉತ್ತರ ಗಾಝಾಗೆ ಮರಳುತ್ತಿದ್ದಾರೆ.

ಈ ನಡುವೆ ಕದನ ವಿರಾಮ ವಿಫಲಗೊಳ್ಳುವ ಬಗ್ಗೆ ಟ್ರಂಪ್ ಮಾತನಾಡಿರುವುದು ಆತಂಕ್ಕೆ ಕಾರಣವಾಗಿದೆ. ಏಕೆಂದರೆ, ಗಾಝಾದಲ್ಲಿ ಇಸ್ರೇಲ್ ಆಕ್ರಮಣ ನಡೆಸಲು ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಿರುವುದು ಇದೇ ಅಮೆರಿಕವಾಗಿದೆ.

ಈ ಹಿಂದೆ ಜೋ ಬೈಡೆನ್ ಅಮೆರಿಕದ ಅಧ್ಯಕ್ಷರಾಗಿದ್ದಾಗ ಮಾಧ್ಯಮಗಳ ಮುಂದೆ ಗಾಝಾ ಆಕ್ರಮಣವನ್ನು ಖಂಡಿಸುತ್ತಿದ್ದರು. ಜೀವ ಹಾನಿಯ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದರು. ಆದರೆ, ಹಿಂಬದಿಯಲ್ಲಿ ಇಸ್ರೇಲ್‌ಗೆ ಬೇಕಾದ ಮದ್ದು, ಗುಂಡು ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದರು.

ಇದೀಗ ಬೈಡೆನ್‌ಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾತನಾಡುವ ಟ್ರಂಪ್ ಕೈಗೆ ಅಮೆರಿಕದ ಆಡಳಿತ ಸಿಕ್ಕಿದೆ. ಹಾಗಾಗಿ, ಯಾವ ರೀತಿಯ ಹುಚ್ಚು ನಿರ್ಧಾರಗಳನ್ನು ಬೇಕಾದರು ತೆಗೆದುಕೊಳ್ಳಬಹುದು. ಈ ಕಾರಣಕ್ಕೆ ಟ್ರಂಪ್ ಹೇಳಿಕೆ ಮಹತ್ವವೆನಿಸಿದೆ.

ಕದನ ವಿರಾಮದ ಬಳಿಕ ಸದ್ಯಕ್ಕೆ ಗಾಝಾದಲ್ಲಿ ಆಕ್ರಮಣ ಕೊನೆಗೊಳಿಸಿರುವ ಇಸ್ರೇಲ್, ಆಕ್ರಮಿತ ಪಶ್ಚಿಮ ದಂಡೆಯಲ್ಲಿ ದಾಳಿ ಮುಂದುವರೆಸಿದೆ. ಇತ್ತೀಚಿನ ಘಟನೆಗಳಲ್ಲಿ ಓರ್ವ ಬಂದೂಕುಧಾರಿಯನ್ನು ಇಸ್ರೇಲಿ ಸೇನೆ ಗುಂಡಿಕ್ಕಿ ಹತ್ಯೆ ಮಾಡಿದೆ. ಆತ ಮಿಲಿಟರಿ ಚೆಕ್‌ ಪಾಯಿಂಟ್ ಮೇಲೆ ಗುಂಡು ಹಾರಿಸಿ ಹಲವಾರು ಜನರನ್ನು ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಟ್ರಂಪ್ ಭೇಟಿಗೆ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಸಚಿವ ಸಂಪುಟದ ಜೊತೆ ಸಭೆ ನಡೆಸಿದ್ದಾರೆ. ಅದರಲ್ಲಿ ಗಾಝಾ ಯುದ್ಧದ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ಹೇಳಿವೆ.

ಗಾಝಾದಲ್ಲಿರುವ ಎಲ್ಲಾ ಒತ್ತೆಯಾಳುಗಳ ಬಿಡುಗಡೆಗೊಳಿಸುವುದು, ಹಮಾಸ್ ವಿರುದ್ದ ಪೂರ್ಣ ಜಯ ಸಾಧಿಸುವುದು, ಇರಾನ್ ಬೆಂಬಲಿತ ಪಡೆಗಳನ್ನು ಹಿಮ್ಮೆಟಿಸುವುದು ನೆತನ್ಯಾಹು ಸಭೆಯ ಮುಖ್ಯ ಚರ್ಚಾ ವಿಷಯಗಳು ಎಂದು ಹೇಳಲಾಗಿದೆ.

ಈ ನಡುವೆ, ಹಮಾಸ್ ಗಾಝಾದ ಮೇಲೆ ಶೀಘ್ರವಾಗಿ ನಿಯಂತ್ರಣವನ್ನು ಮರಳಿ ಪಡೆದಂತೆ ಕಂಡುಬರುತ್ತಿದೆ. ಇಸ್ರೇಲಿ ಪಡೆಗಳು ಗಾಝಾ ಪ್ರದೇಶದ ಮೇಲಿನ ತನ್ನ ಮಿಲಿಟರಿ ಆಕ್ರಮಣವನ್ನು ಕೊನೆಗೊಳಿಸುವ ಮೂಲಕ ತನ್ನ ಬದ್ಧತೆಗಳನ್ನು ಪೂರೈಸದಿದ್ದರೆ, ಎರಡನೇ ಹಂತದ ಕದನ ವಿರಾಮದ ಸಮಯದಲ್ಲಿ ಹೆಚ್ಚಿನ ಸೆರೆಯಾಳುಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಹಮಾಸ್ ಒತ್ತಿ ಹೇಳಿದೆ.

ಯುದ್ಧದ ಸಮಯದಲ್ಲಿ ಇಸ್ರೇಲ್ ಮತ್ತು ಅಮೆರಿಕ ತೆಗೆದುಕೊಂಡ ನಿರ್ಧಾರಗಳು ಈಗಾಗಲೇ ಮಧ್ಯಪ್ರಾಚ್ಯದ ಮುಖವನ್ನೇ ಬದಲಾಯಿಸಿದೆ. ಈ ನಕ್ಷೆಯನ್ನು ಇನ್ನಷ್ಟು ಮತ್ತು ಉತ್ತಮವಾಗಿ ಪುನಃ ರಚಿಸುವ ಉದ್ದೇಶವನ್ನು ಹೊಂದಿರುವುದಾಗಿ ನೆತನ್ಯಾಹು ಹೇಳಿದ್ದಾರೆ.

ಯುದ್ಧದ ವಿನಾಶ, ಈಜಿಪ್ಟ್ ಮತ್ತು ಜೋರ್ಡಾನ್ ಮೇಲೆ ಲಕ್ಷಾಂತರ ಪ್ಯಾಲೆಸ್ತೀನಿಯನ್ ನಿರಾಶ್ರಿತರನ್ನು ಸ್ವೀಕರಿಸಲು ಒತ್ತಡ ಹೇರುವ ಮೂಲಕ ಗಾಝಾವನ್ನು ಸ್ವಚ್ಛಗೊಳಿಸುವ ಟ್ರಂಪ್ ಸಲಹೆಯ ಹೊರತಾಗಿಯೂ, ನೆತನ್ಯಾಹು ಅರಬ್ ರಾಷ್ಟ್ರಗಳೊಂದಿಗಿನ ಸಂಬಂಧಗಳನ್ನು ಮತ್ತಷ್ಟು ಬಲಗೊಳಿಸುವ ಬಗ್ಗೆಯೂ ಯೋಚಿಸುತ್ತಿದ್ದಾರೆ. ಕೈರೋ ಮತ್ತು ಅಮ್ಮನ್ ಸರ್ಕಾರಗಳು ಟ್ರಂಪ್ ಪ್ರಸ್ತಾಪವನ್ನು ತಿರಸ್ಕರಿಸಿವೆ ಎಂದು ವರದಿಗಳು ಹೇಳಿವೆ.

ಇಸ್ರೇಲ್ ಬಿಡುಗಡೆಗೊಳಿಸಿದವರು ಗಡಿಪಾರು!

ಇಸ್ರೇಲ್ ಬಂಧಿಸಿಟ್ಟಿದ್ದ ನೂರಾರು ಮಂದಿ ಪ್ಯಾಲೆಸ್ತೀನ್ ನಾಗರಿಕರನ್ನು ಕದನ ವಿರಾಮದ ಒಪ್ಪದಂತೆ ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ. ಆದರೆ, ಈಗಾಗಲೇ ಬಿಡುಗಡೆಗೊಂಡವರನ್ನು ವಿವಿಧ ದೇಶಗಳಿಗೆ ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ.

ಗಾಝಾ ಕದನ ವಿರಾಮ ಮತ್ತು ವಿನಿಮಯ ಒಪ್ಪಂದದ ಭಾಗವಾಗಿ ಇಸ್ರೇಲ್ ಬಿಡುಗಡೆ ಮಾಡಿದ 79 ಪ್ಯಾಲೆಸ್ತೀನ್ ಕೈದಿಗಳನ್ನು ಈಜಿಪ್ಟ್‌ಗೆ ಗಡಿಪಾರು ಮಾಡಿದ ನಂತರ, ಅವರು ಕೈರೋ ತಲುಪಿದ್ದಾರೆ ಎಂದು ಹಮಾಸ್‌ನ ಕೈದಿಗಳ ಕಚೇರಿಯ ಮಾಧ್ಯಮ ಅಧಿಕಾರಿಯೊಬ್ಬರು ದೃಢಪಡಿಸಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

ಗಡಿಪಾರಾದ ಕೆಲವರು ಈಜಿಪ್ಟ್‌ನಲ್ಲಿ ನೆಲೆಸಲಿದ್ದಾರೆ. ಮುಂದೆಯೂ ಬಿಡುಗಡೆಯಾಗುವ ಹೆಚ್ಚಿನ ಕೈದಿಗಳು ಕೈರೋಗೆ ಗಡಿಪಾರು ಆಗಬಹುದು ಎಂದು ಹಿರಿಯ ಹಮಾಸ್ ನಾಯಕ ನಹೇದ್ ಅಲ್-ಫಖೌರಿ ಹೇಳಿದ್ದಾರೆ.

ಬಿಡುಗಡೆಯಾದ ಕೈದಿಗಳನ್ನು ಸ್ವೀಕರಿಸಲು ಇತರ ದೇಶಗಳಲ್ಲೂ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹಮಾಸ್ ಅಧಿಕಾರಿ ತಿಳಿಸಿದ್ದಾರೆ. ಮಂಗಳವಾರ 15 ಮಂದಿ ಟರ್ಕಿ ತಲುಪುವ ನಿರೀಕ್ಷೆಯಿದೆ. ನಂತರದ ದಿನಗಳಲ್ಲಿ ಇನ್ನೂ 15 ಮಂದಿ ಪಾಕಿಸ್ತಾನಕ್ಕೆ ತೆರಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಅಲ್-ಫಖೌರಿ ಪ್ರಕಾರ, ಇಸ್ರೇಲ್ ಗಡಿಪಾರು ಮಾಡುವಂತೆ ಒತ್ತಾಯಿಸಿದ ಪ್ಯಾಲೆಸ್ತೀನಿಯರನ್ನು ಸ್ವೀಕರಿಸಲು ಅಲ್ಜೀರಿಯಾ ಕೂಡ ಆರಂಭಿಕ ಅನುಮೋದನೆಯನ್ನು ನೀಡಿದೆ. ಆದರೆ, ಟುನೀಶಿಯಾ ಯಾವುದೇ ಜನರನ್ನು ಸ್ವೀಕರಿಸಲು ನಿರಾಕರಿಸಿದೆ.

ಇಸ್ರೇಲಿ ಪಡೆಗಳು ಆಕ್ರಮಿತ ಪಶ್ಚಿಮ ದಂಡೆಯಿಂದ ಹಲವಾರು ಇತರ ಕೈದಿಗಳನ್ನು ಮತ್ತು ಒಬ್ಬ ಜೋರ್ಡಾನ್ ಕೈದಿಯನ್ನು ಗಾಝಾಗೆ ಗಡಿಪಾರು ಮಾಡಿವೆ.

ಅಕ್ಟೋಬರ್ 7, 2023ರಿಂದ ಇದುವರೆಗೆ ಗಾಝಾದಲ್ಲಿ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ 61, 700ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜನವರಿ16, 2025ರಂದು ಕದನ ವಿರಾಮ ಜಾರಿಯಾಗುವವರೆಗೆ 47ಕ್ಕೂ ಹೆಚ್ಚು ಜನರನ್ನು ಇಸ್ರೇಲ್ ಹತ್ಯೆ ಮಾಡಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಕದನ ವಿರಾಮದ ಬಳಿಕ ಸುಮಾರು 3 ಲಕ್ಷದಷ್ಟು ಜನರು ಉತ್ತರ ಗಾಝಾದ ತಮ್ಮ ಮೂಲ ಸ್ಥಳಗಳಿಗೆ ಮರಳಿದ್ದಾರೆ. ಅಲ್ಲಿ ಧ್ವಂಸಗೊಂಡ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿದ್ದ ನೂರಾರು ಜನರ ಮೃತದೇಹಗಳು ಸಿಗುತ್ತಿವೆ ಎಂದು ವರದಿಯಾಗಿದೆ. ಈ ಕಾರಣಕ್ಕೆ ಮೃತರ ಸಂಖ್ಯೆ ಒಂದೇ ಸಮನೆ 61 ಸಾವಿರಕ್ಕೆ ತಲುಪಿದೆ.

ಗಾಝಾದಲ್ಲಿ ಕದನ ವಿರಾಮ ಜಾರಿಯಾದ ಬಳಿಕ ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಆಕ್ರಮಣ ಮುಂದುವರಿಸಿದೆ. ಅಲ್ಲಿ ಇತ್ತೀಚಿನ ದಾಳಿಯಲ್ಲಿ ಒಂದೇ ಸಮನೆ 20 ಮನೆಗಳನ್ನು ಸ್ಪೋಟಗೊಳಿಸಿ ಧ್ವಂಸ ಮಾಡಿದೆ. ಪರಿಣಾಮ 15 ಸಾವಿರಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದಾರೆ. ನೂರಾರು ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟಿನಲ್ಲಿ, ಗಾಝಾದಲ್ಲಿ ಕದನ ವಿರಾಮ ಜಾರಿಯಾದರೂ ಅನಿಶ್ಚತತೆ ಮುಂದುವರೆದಿದೆ. ಜನರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ.

ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...