Homeಮುಖಪುಟ'ಜೈಲಿನಲ್ಲಿ ಸತ್ತರೆ ಒಳ್ಳೆಯದು': ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

- Advertisement -
- Advertisement -

ಬಹುಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ತನ್ನ ಸ್ಥಿತಿ ಜೈಲಿನಲ್ಲಿ ಚಿಂತಾಜನಕವಾಗಿದ್ದು, ಈ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದಾರೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಆರೋಪದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 1 ರಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅವರು ಪ್ರಸ್ತುತ  ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಹಾಜರಾಗಿದ್ದ ಗೋಯಲ್‌, ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ, ಈಗಿನ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯಕ್ಕೆ ಕೈ ಮುಗಿದು ಕೇಳಿಕೊಂಡಿದ್ದಾರೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಜಿ ದೇಸ್ಪಾಂಡೆ ಅವರ ಮುಂದೆ ಗೋಯಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೈಗಳನ್ನು ಮಡಚಿ  ಗೋಯಲ್ ತನ್ನ ಆರೋಗ್ಯ ಸ್ಥಿತಿ ಕೆಟ್ಟದಾಗಿದೆ. ಪತ್ನಿ ಕ್ಯಾನ್ಸರ್‌ನಿಂದ ಹಾಸಿಗೆ ಹಿಡಿದಿದ್ದು, ಇದ್ದ ಒಬ್ಬಳೇ ಮಗಳು ಕೂಡ ಅಸ್ವಸ್ಥಳಾಗಿದ್ದಾಳೆ ಎಂದು ಗೋಯಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ. ತನ್ನ ಮೊಣಕಾಲುಗಳನ್ನು ನ್ಯಾಯಾಧೀಶರಿಗೆ ತೋರಿಸಿದ ಗೋಯಲ್‌ ಕಾಲುಗಳು ಊದಿಕೊಂಡಿವೆ ಅವುಗಳನ್ನು ಮಡಚಲು ಆಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ರಕ್ತ  ಬರುತ್ತದೆ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದು ನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗಲು ಆಗುತ್ತಿಲ್ಲ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ. ನನ್ನ ಆರೋಗ್ಯವು ಇನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವ ಪರಿಸ್ಥಿತಿಯಲ್ಲಿಲ್ಲ. ಈ ಬಾರಿ ಹಾಜರಾದ ಕಾರಣ ಎಲ್ಲವನ್ನೂ ಕೋರ್ಟ್‌ ಗಮನಕ್ಕೆ ತರುತ್ತಿದ್ದೇನೆ ಎಂದು ನರೇಶ್‌ ಗೋಯಲ್‌ ಹೇಳಿದ್ದಾರೆ.

ಅವರ ಮಾತುಗಳನ್ನು ತಾಳ್ಮೆಯಿಂದ ಕೇಳಿದೆ ಮತ್ತು ಅವರು ತನ್ನ ಹೇಳಿಕೆಗಳನ್ನು ನೀಡುವಾಗ ಗಮನಿಸಿದೆ. ಅವರ ಇಡೀ ದೇಹವು ನಡುಗುತ್ತಿರುವುದನ್ನು ನಾನು ಕಂಡುಕೊಂಡೆ. ಅವರಿಗೆ ನಿಲ್ಲಲು ಸಹ ಸಹಾಯ ಬೇಕು. ಅವರು ಸಲ್ಲಿಸಿದ ಎಲ್ಲವನ್ನೂ ನಾನು ಗಮನಿಸಿದ್ದೇನೆ ಮತ್ತು ಆರೋಪಿಯನ್ನು ಅಸಹಾಯಕನಾಗಿ ಇರಲು ಬಿಡುವುದಿಲ್ಲ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಎಲ್ಲಾ ಸಂಭಾವ್ಯ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಈ ವೇಳೆ ಹೇಳಿದ್ದಾರೆ.

ಕಳೆದ ತಿಂಗಳು ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಗೋಯಲ್ ಅವರು ಹೃದಯದ ಸ್ಥಿತಿ, ಮೂಳೆ ಸಮಸ್ಯೆಗಳಂತಹ ಅನೇಕ ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರು ತಪ್ಪಿತಸ್ಥರಲ್ಲ ಎಂದು ನಂಬಲು ಸಮಂಜಸವಾದ ಕಾರಣಗಳಿವೆ ಎಂದು ಹೇಳಲಾಗಿತ್ತು. ಅವರ ಜಾಮೀನು ಅರ್ಜಿಗೆ ‘ಇಡಿ’ ಪ್ರತಿಕ್ರಿಯೆ ಸಲ್ಲಿಸಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ಬಳಿಕ ‘ಇಡಿ’ ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಕೆನರಾ ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...