Homeಮುಖಪುಟ'ಜೈಲಿನಲ್ಲಿ ಸತ್ತರೆ ಒಳ್ಳೆಯದು': ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

- Advertisement -
- Advertisement -

ಬಹುಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ತನ್ನ ಸ್ಥಿತಿ ಜೈಲಿನಲ್ಲಿ ಚಿಂತಾಜನಕವಾಗಿದ್ದು, ಈ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದಾರೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಆರೋಪದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 1 ರಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅವರು ಪ್ರಸ್ತುತ  ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಹಾಜರಾಗಿದ್ದ ಗೋಯಲ್‌, ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ, ಈಗಿನ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯಕ್ಕೆ ಕೈ ಮುಗಿದು ಕೇಳಿಕೊಂಡಿದ್ದಾರೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಜಿ ದೇಸ್ಪಾಂಡೆ ಅವರ ಮುಂದೆ ಗೋಯಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೈಗಳನ್ನು ಮಡಚಿ  ಗೋಯಲ್ ತನ್ನ ಆರೋಗ್ಯ ಸ್ಥಿತಿ ಕೆಟ್ಟದಾಗಿದೆ. ಪತ್ನಿ ಕ್ಯಾನ್ಸರ್‌ನಿಂದ ಹಾಸಿಗೆ ಹಿಡಿದಿದ್ದು, ಇದ್ದ ಒಬ್ಬಳೇ ಮಗಳು ಕೂಡ ಅಸ್ವಸ್ಥಳಾಗಿದ್ದಾಳೆ ಎಂದು ಗೋಯಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ. ತನ್ನ ಮೊಣಕಾಲುಗಳನ್ನು ನ್ಯಾಯಾಧೀಶರಿಗೆ ತೋರಿಸಿದ ಗೋಯಲ್‌ ಕಾಲುಗಳು ಊದಿಕೊಂಡಿವೆ ಅವುಗಳನ್ನು ಮಡಚಲು ಆಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ರಕ್ತ  ಬರುತ್ತದೆ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದು ನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗಲು ಆಗುತ್ತಿಲ್ಲ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ. ನನ್ನ ಆರೋಗ್ಯವು ಇನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವ ಪರಿಸ್ಥಿತಿಯಲ್ಲಿಲ್ಲ. ಈ ಬಾರಿ ಹಾಜರಾದ ಕಾರಣ ಎಲ್ಲವನ್ನೂ ಕೋರ್ಟ್‌ ಗಮನಕ್ಕೆ ತರುತ್ತಿದ್ದೇನೆ ಎಂದು ನರೇಶ್‌ ಗೋಯಲ್‌ ಹೇಳಿದ್ದಾರೆ.

ಅವರ ಮಾತುಗಳನ್ನು ತಾಳ್ಮೆಯಿಂದ ಕೇಳಿದೆ ಮತ್ತು ಅವರು ತನ್ನ ಹೇಳಿಕೆಗಳನ್ನು ನೀಡುವಾಗ ಗಮನಿಸಿದೆ. ಅವರ ಇಡೀ ದೇಹವು ನಡುಗುತ್ತಿರುವುದನ್ನು ನಾನು ಕಂಡುಕೊಂಡೆ. ಅವರಿಗೆ ನಿಲ್ಲಲು ಸಹ ಸಹಾಯ ಬೇಕು. ಅವರು ಸಲ್ಲಿಸಿದ ಎಲ್ಲವನ್ನೂ ನಾನು ಗಮನಿಸಿದ್ದೇನೆ ಮತ್ತು ಆರೋಪಿಯನ್ನು ಅಸಹಾಯಕನಾಗಿ ಇರಲು ಬಿಡುವುದಿಲ್ಲ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಎಲ್ಲಾ ಸಂಭಾವ್ಯ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಈ ವೇಳೆ ಹೇಳಿದ್ದಾರೆ.

ಕಳೆದ ತಿಂಗಳು ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಗೋಯಲ್ ಅವರು ಹೃದಯದ ಸ್ಥಿತಿ, ಮೂಳೆ ಸಮಸ್ಯೆಗಳಂತಹ ಅನೇಕ ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರು ತಪ್ಪಿತಸ್ಥರಲ್ಲ ಎಂದು ನಂಬಲು ಸಮಂಜಸವಾದ ಕಾರಣಗಳಿವೆ ಎಂದು ಹೇಳಲಾಗಿತ್ತು. ಅವರ ಜಾಮೀನು ಅರ್ಜಿಗೆ ‘ಇಡಿ’ ಪ್ರತಿಕ್ರಿಯೆ ಸಲ್ಲಿಸಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ಬಳಿಕ ‘ಇಡಿ’ ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಕೆನರಾ ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...