Homeಮುಖಪುಟ'ಜೈಲಿನಲ್ಲಿ ಸತ್ತರೆ ಒಳ್ಳೆಯದು': ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

- Advertisement -
- Advertisement -

ಬಹುಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ತನ್ನ ಸ್ಥಿತಿ ಜೈಲಿನಲ್ಲಿ ಚಿಂತಾಜನಕವಾಗಿದ್ದು, ಈ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದಾರೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಆರೋಪದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 1 ರಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅವರು ಪ್ರಸ್ತುತ  ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಹಾಜರಾಗಿದ್ದ ಗೋಯಲ್‌, ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ, ಈಗಿನ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯಕ್ಕೆ ಕೈ ಮುಗಿದು ಕೇಳಿಕೊಂಡಿದ್ದಾರೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಜಿ ದೇಸ್ಪಾಂಡೆ ಅವರ ಮುಂದೆ ಗೋಯಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೈಗಳನ್ನು ಮಡಚಿ  ಗೋಯಲ್ ತನ್ನ ಆರೋಗ್ಯ ಸ್ಥಿತಿ ಕೆಟ್ಟದಾಗಿದೆ. ಪತ್ನಿ ಕ್ಯಾನ್ಸರ್‌ನಿಂದ ಹಾಸಿಗೆ ಹಿಡಿದಿದ್ದು, ಇದ್ದ ಒಬ್ಬಳೇ ಮಗಳು ಕೂಡ ಅಸ್ವಸ್ಥಳಾಗಿದ್ದಾಳೆ ಎಂದು ಗೋಯಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ. ತನ್ನ ಮೊಣಕಾಲುಗಳನ್ನು ನ್ಯಾಯಾಧೀಶರಿಗೆ ತೋರಿಸಿದ ಗೋಯಲ್‌ ಕಾಲುಗಳು ಊದಿಕೊಂಡಿವೆ ಅವುಗಳನ್ನು ಮಡಚಲು ಆಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ರಕ್ತ  ಬರುತ್ತದೆ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದು ನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗಲು ಆಗುತ್ತಿಲ್ಲ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ. ನನ್ನ ಆರೋಗ್ಯವು ಇನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವ ಪರಿಸ್ಥಿತಿಯಲ್ಲಿಲ್ಲ. ಈ ಬಾರಿ ಹಾಜರಾದ ಕಾರಣ ಎಲ್ಲವನ್ನೂ ಕೋರ್ಟ್‌ ಗಮನಕ್ಕೆ ತರುತ್ತಿದ್ದೇನೆ ಎಂದು ನರೇಶ್‌ ಗೋಯಲ್‌ ಹೇಳಿದ್ದಾರೆ.

ಅವರ ಮಾತುಗಳನ್ನು ತಾಳ್ಮೆಯಿಂದ ಕೇಳಿದೆ ಮತ್ತು ಅವರು ತನ್ನ ಹೇಳಿಕೆಗಳನ್ನು ನೀಡುವಾಗ ಗಮನಿಸಿದೆ. ಅವರ ಇಡೀ ದೇಹವು ನಡುಗುತ್ತಿರುವುದನ್ನು ನಾನು ಕಂಡುಕೊಂಡೆ. ಅವರಿಗೆ ನಿಲ್ಲಲು ಸಹ ಸಹಾಯ ಬೇಕು. ಅವರು ಸಲ್ಲಿಸಿದ ಎಲ್ಲವನ್ನೂ ನಾನು ಗಮನಿಸಿದ್ದೇನೆ ಮತ್ತು ಆರೋಪಿಯನ್ನು ಅಸಹಾಯಕನಾಗಿ ಇರಲು ಬಿಡುವುದಿಲ್ಲ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಎಲ್ಲಾ ಸಂಭಾವ್ಯ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಈ ವೇಳೆ ಹೇಳಿದ್ದಾರೆ.

ಕಳೆದ ತಿಂಗಳು ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಗೋಯಲ್ ಅವರು ಹೃದಯದ ಸ್ಥಿತಿ, ಮೂಳೆ ಸಮಸ್ಯೆಗಳಂತಹ ಅನೇಕ ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರು ತಪ್ಪಿತಸ್ಥರಲ್ಲ ಎಂದು ನಂಬಲು ಸಮಂಜಸವಾದ ಕಾರಣಗಳಿವೆ ಎಂದು ಹೇಳಲಾಗಿತ್ತು. ಅವರ ಜಾಮೀನು ಅರ್ಜಿಗೆ ‘ಇಡಿ’ ಪ್ರತಿಕ್ರಿಯೆ ಸಲ್ಲಿಸಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ಬಳಿಕ ‘ಇಡಿ’ ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಕೆನರಾ ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...