Homeಮುಖಪುಟ'ಜೈಲಿನಲ್ಲಿ ಸತ್ತರೆ ಒಳ್ಳೆಯದು': ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

- Advertisement -
- Advertisement -

ಬಹುಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ತನ್ನ ಸ್ಥಿತಿ ಜೈಲಿನಲ್ಲಿ ಚಿಂತಾಜನಕವಾಗಿದ್ದು, ಈ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದಾರೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಆರೋಪದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 1 ರಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅವರು ಪ್ರಸ್ತುತ  ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಹಾಜರಾಗಿದ್ದ ಗೋಯಲ್‌, ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ, ಈಗಿನ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯಕ್ಕೆ ಕೈ ಮುಗಿದು ಕೇಳಿಕೊಂಡಿದ್ದಾರೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಜಿ ದೇಸ್ಪಾಂಡೆ ಅವರ ಮುಂದೆ ಗೋಯಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೈಗಳನ್ನು ಮಡಚಿ  ಗೋಯಲ್ ತನ್ನ ಆರೋಗ್ಯ ಸ್ಥಿತಿ ಕೆಟ್ಟದಾಗಿದೆ. ಪತ್ನಿ ಕ್ಯಾನ್ಸರ್‌ನಿಂದ ಹಾಸಿಗೆ ಹಿಡಿದಿದ್ದು, ಇದ್ದ ಒಬ್ಬಳೇ ಮಗಳು ಕೂಡ ಅಸ್ವಸ್ಥಳಾಗಿದ್ದಾಳೆ ಎಂದು ಗೋಯಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ. ತನ್ನ ಮೊಣಕಾಲುಗಳನ್ನು ನ್ಯಾಯಾಧೀಶರಿಗೆ ತೋರಿಸಿದ ಗೋಯಲ್‌ ಕಾಲುಗಳು ಊದಿಕೊಂಡಿವೆ ಅವುಗಳನ್ನು ಮಡಚಲು ಆಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ರಕ್ತ  ಬರುತ್ತದೆ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದು ನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗಲು ಆಗುತ್ತಿಲ್ಲ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ. ನನ್ನ ಆರೋಗ್ಯವು ಇನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವ ಪರಿಸ್ಥಿತಿಯಲ್ಲಿಲ್ಲ. ಈ ಬಾರಿ ಹಾಜರಾದ ಕಾರಣ ಎಲ್ಲವನ್ನೂ ಕೋರ್ಟ್‌ ಗಮನಕ್ಕೆ ತರುತ್ತಿದ್ದೇನೆ ಎಂದು ನರೇಶ್‌ ಗೋಯಲ್‌ ಹೇಳಿದ್ದಾರೆ.

ಅವರ ಮಾತುಗಳನ್ನು ತಾಳ್ಮೆಯಿಂದ ಕೇಳಿದೆ ಮತ್ತು ಅವರು ತನ್ನ ಹೇಳಿಕೆಗಳನ್ನು ನೀಡುವಾಗ ಗಮನಿಸಿದೆ. ಅವರ ಇಡೀ ದೇಹವು ನಡುಗುತ್ತಿರುವುದನ್ನು ನಾನು ಕಂಡುಕೊಂಡೆ. ಅವರಿಗೆ ನಿಲ್ಲಲು ಸಹ ಸಹಾಯ ಬೇಕು. ಅವರು ಸಲ್ಲಿಸಿದ ಎಲ್ಲವನ್ನೂ ನಾನು ಗಮನಿಸಿದ್ದೇನೆ ಮತ್ತು ಆರೋಪಿಯನ್ನು ಅಸಹಾಯಕನಾಗಿ ಇರಲು ಬಿಡುವುದಿಲ್ಲ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಎಲ್ಲಾ ಸಂಭಾವ್ಯ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಈ ವೇಳೆ ಹೇಳಿದ್ದಾರೆ.

ಕಳೆದ ತಿಂಗಳು ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಗೋಯಲ್ ಅವರು ಹೃದಯದ ಸ್ಥಿತಿ, ಮೂಳೆ ಸಮಸ್ಯೆಗಳಂತಹ ಅನೇಕ ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರು ತಪ್ಪಿತಸ್ಥರಲ್ಲ ಎಂದು ನಂಬಲು ಸಮಂಜಸವಾದ ಕಾರಣಗಳಿವೆ ಎಂದು ಹೇಳಲಾಗಿತ್ತು. ಅವರ ಜಾಮೀನು ಅರ್ಜಿಗೆ ‘ಇಡಿ’ ಪ್ರತಿಕ್ರಿಯೆ ಸಲ್ಲಿಸಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ಬಳಿಕ ‘ಇಡಿ’ ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಕೆನರಾ ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....