Homeಮುಖಪುಟ'ಜೈಲಿನಲ್ಲಿ ಸತ್ತರೆ ಒಳ್ಳೆಯದು': ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

- Advertisement -
- Advertisement -

ಬಹುಕೋಟಿ ವಂಚನೆ ಆರೋಪದಲ್ಲಿ ಜೈಲಿನಲ್ಲಿರುವ ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ತನ್ನ ಸ್ಥಿತಿ ಜೈಲಿನಲ್ಲಿ ಚಿಂತಾಜನಕವಾಗಿದ್ದು, ಈ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯದಲ್ಲಿ ಹೇಳಿಕೊಂಡಿದ್ದಾರೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಆರೋಪದಲ್ಲಿ ಕಳೆದ ವರ್ಷ ಸೆಪ್ಟೆಂಬರ್ 1 ರಂದು ಜೆಟ್‌ ಏರ್‌ವೇಸ್‌ ಸಂಸ್ಥಾಪಕ ನರೇಶ್‌ ಗೋಯಲ್‌ ಅವರನ್ನು ‘ಇಡಿ’ ಅಧಿಕಾರಿಗಳು ಬಂಧಿಸಿದ್ದರು. ಅವರು ಪ್ರಸ್ತುತ  ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ ವೇಳೆ ಹಾಜರಾಗಿದ್ದ ಗೋಯಲ್‌, ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ, ಈಗಿನ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸತ್ತರೆ ಒಳ್ಳೆಯದು ಎಂದು ವಿಶೇಷ ನ್ಯಾಯಾಲಯಕ್ಕೆ ಕೈ ಮುಗಿದು ಕೇಳಿಕೊಂಡಿದ್ದಾರೆ.

ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂ ಜಿ ದೇಸ್ಪಾಂಡೆ ಅವರ ಮುಂದೆ ಗೋಯಲ್ ಜಾಮೀನು ಅರ್ಜಿ ಸಲ್ಲಿಸಿದ್ದರು. ನಿನ್ನೆ ಈ ಕುರಿತ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಕೈಗಳನ್ನು ಮಡಚಿ  ಗೋಯಲ್ ತನ್ನ ಆರೋಗ್ಯ ಸ್ಥಿತಿ ಕೆಟ್ಟದಾಗಿದೆ. ಪತ್ನಿ ಕ್ಯಾನ್ಸರ್‌ನಿಂದ ಹಾಸಿಗೆ ಹಿಡಿದಿದ್ದು, ಇದ್ದ ಒಬ್ಬಳೇ ಮಗಳು ಕೂಡ ಅಸ್ವಸ್ಥಳಾಗಿದ್ದಾಳೆ ಎಂದು ಗೋಯಲ್ ಕೋರ್ಟ್‌ನಲ್ಲಿ ಹೇಳಿದ್ದಾರೆ. ತನ್ನ ಮೊಣಕಾಲುಗಳನ್ನು ನ್ಯಾಯಾಧೀಶರಿಗೆ ತೋರಿಸಿದ ಗೋಯಲ್‌ ಕಾಲುಗಳು ಊದಿಕೊಂಡಿವೆ ಅವುಗಳನ್ನು ಮಡಚಲು ಆಗುತ್ತಿಲ್ಲ. ಮೂತ್ರ ವಿಸರ್ಜಿಸುವಾಗ ತೀವ್ರವಾದ ನೋವು ಮತ್ತು ರಕ್ತ  ಬರುತ್ತದೆ. ಆರೋಗ್ಯ ತಪಾಸಣೆಗಾಗಿ ನನ್ನನ್ನು ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಗುತ್ತದೆ. ಆಸ್ಪತ್ರೆಗೆ ಹೋಗಿ ದೀರ್ಘ ಅವಧಿಗೆ ಸರದಿಯಲ್ಲಿ ಕಾದು ನಿಲ್ಲಲು ಕೂಡಾ ನನ್ನಲ್ಲಿ ಶಕ್ತಿ ಇಲ್ಲ. ತಪಾಸಣೆಗಾಗಿ ಪದೇ ಪದೆ ಆಸ್ಪತ್ರೆಗೆ ಹೋಗಲು ಆಗುತ್ತಿಲ್ಲ. ಜೆಜೆ ಆಸ್ಪತ್ರೆಗೆ ಕರೆದೊಯ್ಯುವ ಬದಲು ಜೈಲಿನಲ್ಲೇ ಸಾಯಲು ಬಿಡಿ. ನನ್ನ ಆರೋಗ್ಯವು ಇನ್ನು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವ ಪರಿಸ್ಥಿತಿಯಲ್ಲಿಲ್ಲ. ಈ ಬಾರಿ ಹಾಜರಾದ ಕಾರಣ ಎಲ್ಲವನ್ನೂ ಕೋರ್ಟ್‌ ಗಮನಕ್ಕೆ ತರುತ್ತಿದ್ದೇನೆ ಎಂದು ನರೇಶ್‌ ಗೋಯಲ್‌ ಹೇಳಿದ್ದಾರೆ.

ಅವರ ಮಾತುಗಳನ್ನು ತಾಳ್ಮೆಯಿಂದ ಕೇಳಿದೆ ಮತ್ತು ಅವರು ತನ್ನ ಹೇಳಿಕೆಗಳನ್ನು ನೀಡುವಾಗ ಗಮನಿಸಿದೆ. ಅವರ ಇಡೀ ದೇಹವು ನಡುಗುತ್ತಿರುವುದನ್ನು ನಾನು ಕಂಡುಕೊಂಡೆ. ಅವರಿಗೆ ನಿಲ್ಲಲು ಸಹ ಸಹಾಯ ಬೇಕು. ಅವರು ಸಲ್ಲಿಸಿದ ಎಲ್ಲವನ್ನೂ ನಾನು ಗಮನಿಸಿದ್ದೇನೆ ಮತ್ತು ಆರೋಪಿಯನ್ನು ಅಸಹಾಯಕನಾಗಿ ಇರಲು ಬಿಡುವುದಿಲ್ಲ ಮತ್ತು ಸರಿಯಾದ ಚಿಕಿತ್ಸೆಯೊಂದಿಗೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ಎಲ್ಲಾ ಸಂಭಾವ್ಯ ಕಾಳಜಿಯನ್ನು ತೆಗೆದುಕೊಳ್ಳಬೇಕು ಎಂದು ನ್ಯಾಯಾಧೀಶರು ಈ ವೇಳೆ ಹೇಳಿದ್ದಾರೆ.

ಕಳೆದ ತಿಂಗಳು ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ ಗೋಯಲ್ ಅವರು ಹೃದಯದ ಸ್ಥಿತಿ, ಮೂಳೆ ಸಮಸ್ಯೆಗಳಂತಹ ಅನೇಕ ವೈದ್ಯಕೀಯ ಕಾಯಿಲೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಅವರು ತಪ್ಪಿತಸ್ಥರಲ್ಲ ಎಂದು ನಂಬಲು ಸಮಂಜಸವಾದ ಕಾರಣಗಳಿವೆ ಎಂದು ಹೇಳಲಾಗಿತ್ತು. ಅವರ ಜಾಮೀನು ಅರ್ಜಿಗೆ ‘ಇಡಿ’ ಪ್ರತಿಕ್ರಿಯೆ ಸಲ್ಲಿಸಿದ್ದು, ಜನವರಿ 16 ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ನರೇಶ್‌ ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ಬಳಿಕ ‘ಇಡಿ’ ಈ ಕುರಿತು ತನಿಖೆಯನ್ನು ಕೈಗೊಂಡಿತ್ತು.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಕೆನರಾ ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಈ ಬಗ್ಗೆ ಬ್ಯಾಂಕ್‌ನ ದೂರಿನ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: ಸೀಟು ಹಂಚಿಕೆ ಬಿಕ್ಕಟ್ಟು: ಅಗತ್ಯಬಿದ್ದರೆ ಏಕಾಂಗಿಯಾಗಿ ಸ್ಪರ್ಧಿಸಲು ಕೂಡ ಸಿದ್ಧ; ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...