Homeಕರ್ನಾಟಕ2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

- Advertisement -
- Advertisement -

ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ದಿನಕ್ಕೊಂದು ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರು ವಿವಿಯ ಸುತ್ತೋಲೆ ಹೊರಬಿದ್ದಿದೆ.

ಸುತ್ತೋಲೆಯಲ್ಲಿ ಏನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಭಾರಿ ಸರ್ಕಾರಿ ಅಥವಾ ವಿಶ್ವವಿದ್ಯಾನಿಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು.

ಆದುದರಿಂದ ಎಲ್ಲಾ ಪ್ರಧಾನ ಕ್ಷೇಮಪಾಲಕರುಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಮೊದಲು ಪಿಜಿ/ಎರಡನೇ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಮಾಜಿ ಸದಸ್ಯರಾದ ರಮೇಶ್‌ ಬಾಬು, “ಬೆಂಗಳೂರು ವಿವಿಯು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ಪರಿಶಿಷ್ಟ ಜಾತಿ/ಪಂಗಡಗಳ ಶಾಸಕ,ಲೋಕಸಭೆ ಸದಸ್ಯರು, ಮಂತ್ರಿಗಳು ಏನು ಗೆಣಸು ತಿನ್ನುತ್ತಿದ್ದಾರಾ? ನಿಮ್ಮಗಳಿಗೆ ನಿಮ್ಮ ಸಮುದಾಯದ ಜನಗಳು ವಿದ್ಯಾವಂತರಾಗುವುದು ಬೇಡವಾ, ನೀವೇ ಈ ದರಿದ್ರ ಜಾತಿವಾದಿ ಸರ್ಕಾರದ ಜೀತದಾಳಾಗಲು ಭಾಭಾಸಾಹೇಬರು ನಿಮಗೆಲ್ಲಾ ರಾಜಕೀಯ ಮೀಸಲಾತಿ ನೀಡಿದರಾ? ಒಂದು ವೇಳೆ ನೀವೆಲ್ಲಾ ಈ ಜಾತಿವಾದಿ ಸರ್ಕಾರದ ಗುಲಾಮರಾಗುವುದಾದರೆ , ಪರಿಶಿಷ್ಟರ ಸಂವಿಧಾನಕ ಅಶಯಗಳನ್ನ ರಕ್ಷಣೆ ನೀಡಲು ಅಶಕ್ತರಾದರೆ ,ನಿಮ್ಮ ಸ್ಥಾನಕ್ಕೆ ರಾಜನಾಮೆ ನೀಡಿ ತೊಲಗಿ, ಕನಿಷ್ಠ ದಲಿತರ ನಿಜ ಪ್ರತಿನಿದಿಗಳಾದರು ಬರಲಿ.

  2. ಇದೆಲ್ಲ ಮನುವಾದಿಗಳ ಷಡ್ಯಂತ್ರ. ಶೂದ್ರರ, ದಲಿತರ ಸೌಲಭ್ಯಗಳನ್ನು ಮೊಟಕುಗೊಳಿಸಿ, ವಿವಿ ಕ್ಯಾಂಪಸ್ ನಲ್ಲಿ ದೇವಸ್ಥಾನ ಕಟ್ಟಲು ಪ್ರಯತ್ನ ಮಾಡುವುದು ಕೇವಲ ನಾಗಪುರದ ಅಜೆoಡಾ ಅಷ್ಟೇ….

  3. ಕಲಿಯುತ್ತಿರುವ ಮೊದಲ ಪೀಳಿಗೆಯ ದಲಿತ ಮಕ್ಕಳಿಗೆ ಮೊದಲೊತ್ತು ನೀಡಲಿ. ಸೀಟುಗಳು ಉಳಿದರೆ, ಕಲಿಕೆಯ ಎರಡನೇ ಪೀಳಿಗೆಯವರಿಗೂ ಎಡೆಮಾಡಲಿ.

  4. ಬಿಜೆಪಿ ಸರ್ಕಾರ ದಲಿತ ವಿರೋಧಿ ಎಂಬುವುದನ್ನು ಸಾಬೀತು ಪಡಿಸಿದೆ ದಲಿತ ಜನಪ್ರತಿನಿಧಿಗಳು ಯೋಚಿಸಿ ನೋಡಿ ನಮಗೆ ಈ ಸರ್ಕಾರ ಬೇಕಾ..????

  5. ಮಾನ್ಯ ಗೋವಿಂದ ಕಾರಜೋಳ್, ಪಿ ರಾಜೀವ್ ಕುಡಚಿ ಶಾಸಕರ, ನಾರಾಯಣ ಸ್ವಾಮಿ, ಇನ್ನಿತರ ಎಸ್ಸಿ ಎಸ್ಟಿ ಜನ ಪ್ರತಿನಿದಿಗಳೇ ಕತ್ತೆ ಕಾಯ್ತಿದಿರಾ ನಮ್ಮ ಬಡ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಈ ಆದೇಶದ ವಿರುದ್ದ ಬಾಯಿ ಬಿಟ್ಟು ಮಾತಾಡಿ. ನಮ್ಮ ಅಳಿವು ಉಳಿವಿನ ಪ್ರಶ್ನೆ ಯಾಗಿದೆ.

  6. ಈಗಲಾದರೂ ಎಸ್ಸಿ ಎಸ್ಟಿ ಗಳು ಒಂದಾಗಿ ರಾಜ್ಯಧಿಕಾರ ಹಿಡಿಯಬೇಕು, ಯುವಕರು ಅರ್ಥಮಾಡಿಕೊಳ್ಳಿ ಬಿಜೆಪಿ ಬಿಜೆಪಿ ಎಂದು ಹಿಂದೆ ಹೋಗಿ ಸಮಾಜವನ್ನು ಅದೋಗತಿಗೆ ದೂಡಬೇಡಿ ಅಂಬೇಡ್ಕರ್ ಅವರ ಅನುಭವದ ಜೀವನ ಚರಿತ್ರೆಯನ್ನು ಓದಿ ತಿಳುಕೊಳ್ಳಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸಿ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...