Homeಕರ್ನಾಟಕ2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

2ನೇ ಸ್ನಾತಕೋತ್ತರ ಪದವಿ ದಲಿತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶವಿಲ್ಲ: ಬೆಂಗಳೂರು ವಿವಿಯಿಂದ ಸುತ್ತೋಲೆ

- Advertisement -
- Advertisement -

ಎರಡನೇ ಸ್ನಾತಕೋತ್ತರ ಪದವಿಗೆ ಸೇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಪ್ರವೇಶಾತಿ ನೀಡಬಾರದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

ದಲಿತ ವಿದ್ಯಾರ್ಥಿಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾನಿಲಯಗಳು ದಿನಕ್ಕೊಂದು ನಿಯಮಗಳನ್ನು ಜಾರಿಗೊಳಿಸುತ್ತಿದ್ದು, ಅದರ ಮುಂದುವರಿದ ಭಾಗವಾಗಿ ಬೆಂಗಳೂರು ವಿವಿಯ ಸುತ್ತೋಲೆ ಹೊರಬಿದ್ದಿದೆ.

ಸುತ್ತೋಲೆಯಲ್ಲಿ ಏನಿದೆ?

2022-23ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದ ಹಾಸ್ಟೆಲ್ ಪ್ರವೇಶ ನೀಡುವ ಸಂದರ್ಭದಲ್ಲಿ ಎರಡನೇ ಸ್ನಾತಕೋತ್ತರ ಪದವಿಗೆ ಕಡ್ಡಾಯವಾಗಿ ಅವಕಾಶ ನೀಡಬಾರದೆಂದು ತಿಳಿಸಲಾಗಿದೆ. ಕಾರಣ ಸರ್ಕಾರದ ಆದೇಶದನ್ವಯ ಒಂದು ಭಾರಿ ಸರ್ಕಾರಿ ಅಥವಾ ವಿಶ್ವವಿದ್ಯಾನಿಲಯದ ಸೌಲಭ್ಯಗಳನ್ನು ಪಡೆದಿರುವವರಿಗೆ ಮತ್ತೊಮ್ಮೆ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಅವಕಾಶವಿರುವುದಿಲ್ಲ. ಇದನ್ನು ಅತೀ ಸೂಕ್ಷ್ಮವಾಗಿ ಪರಿಗಣಿಸಿ ಪ್ರವೇಶ ನೀಡುವ ಸಂದರ್ಭದಲ್ಲಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಪ್ರವೇಶ ನೀಡಬೇಕು.

ಆದುದರಿಂದ ಎಲ್ಲಾ ಪ್ರಧಾನ ಕ್ಷೇಮಪಾಲಕರುಗಳು ವಿದ್ಯಾರ್ಥಿಗಳ ವಿವರಗಳನ್ನು ಪರಿಶೀಲಿಸಿ ಮುಚ್ಚಳಿಕೆಯನ್ನು ಪಡೆದು ಹಾಸ್ಟೆಲ್ ಪ್ರವೇಶ ನೀಡಬೇಕು. ವಿಭಾಗಗಳಿಗೆ ಪ್ರವೇಶ ನೀಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಎಲ್ಲ ದಾಖಲಾತಿಗಳನ್ನು ಪರಿಶೀಲಿಸಿ ಮೊದಲು ಪಿಜಿ/ಎರಡನೇ ಪಿಜಿ ಎಂಬುದನ್ನು ಪರಿಶೀಲಿಸಿಕೊಂಡು ವಿಭಾಗಗಳ ಮುಖ್ಯಸ್ಥರು ವಿದ್ಯಾರ್ಥಿಗಳ ಹಾಸ್ಟೆಲ್ ಪ್ರವೇಶದ ಅರ್ಜಿಗಳನ್ನು ದೃಢೀಕರಿಸಬೇಕು.

ಈ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಧಾನಪರಿಷತ್‌ ಮಾಜಿ ಸದಸ್ಯರಾದ ರಮೇಶ್‌ ಬಾಬು, “ಬೆಂಗಳೂರು ವಿವಿಯು ದಲಿತ ವಿರೋಧಿ ನೀತಿಯನ್ನು ಪದೇ ಪದೇ ಜಾಹೀರು ಮಾಡಿದೆ. ಬಿಜೆಪಿಯ ರಹಸ್ಯ ಕಾರ್ಯಸೂಚಿ ಬೆತ್ತಲಾಗಿದೆ. ದಲಿತ ವಿದ್ಯಾರ್ಥಿಗಳಿಗೆ ಎರಡನೇ ಸ್ನಾತಕೋತ್ತರ ಪದವಿಗೆ ಹಾಸ್ಟೆಲ್‌ಗೆ ಅವಕಾಶ ನೀಡದಂತೆ ಸುತ್ತೋಲೆ ನೀಡಿ ಅವರ ಹಕ್ಕು ಕಸಿಯಲು ಶಿಕ್ಷಣ ವಂಚಿತ ಮಾಡಲು ಹೊರಟಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

8 COMMENTS

  1. ಪರಿಶಿಷ್ಟ ಜಾತಿ/ಪಂಗಡಗಳ ಶಾಸಕ,ಲೋಕಸಭೆ ಸದಸ್ಯರು, ಮಂತ್ರಿಗಳು ಏನು ಗೆಣಸು ತಿನ್ನುತ್ತಿದ್ದಾರಾ? ನಿಮ್ಮಗಳಿಗೆ ನಿಮ್ಮ ಸಮುದಾಯದ ಜನಗಳು ವಿದ್ಯಾವಂತರಾಗುವುದು ಬೇಡವಾ, ನೀವೇ ಈ ದರಿದ್ರ ಜಾತಿವಾದಿ ಸರ್ಕಾರದ ಜೀತದಾಳಾಗಲು ಭಾಭಾಸಾಹೇಬರು ನಿಮಗೆಲ್ಲಾ ರಾಜಕೀಯ ಮೀಸಲಾತಿ ನೀಡಿದರಾ? ಒಂದು ವೇಳೆ ನೀವೆಲ್ಲಾ ಈ ಜಾತಿವಾದಿ ಸರ್ಕಾರದ ಗುಲಾಮರಾಗುವುದಾದರೆ , ಪರಿಶಿಷ್ಟರ ಸಂವಿಧಾನಕ ಅಶಯಗಳನ್ನ ರಕ್ಷಣೆ ನೀಡಲು ಅಶಕ್ತರಾದರೆ ,ನಿಮ್ಮ ಸ್ಥಾನಕ್ಕೆ ರಾಜನಾಮೆ ನೀಡಿ ತೊಲಗಿ, ಕನಿಷ್ಠ ದಲಿತರ ನಿಜ ಪ್ರತಿನಿದಿಗಳಾದರು ಬರಲಿ.

  2. ಇದೆಲ್ಲ ಮನುವಾದಿಗಳ ಷಡ್ಯಂತ್ರ. ಶೂದ್ರರ, ದಲಿತರ ಸೌಲಭ್ಯಗಳನ್ನು ಮೊಟಕುಗೊಳಿಸಿ, ವಿವಿ ಕ್ಯಾಂಪಸ್ ನಲ್ಲಿ ದೇವಸ್ಥಾನ ಕಟ್ಟಲು ಪ್ರಯತ್ನ ಮಾಡುವುದು ಕೇವಲ ನಾಗಪುರದ ಅಜೆoಡಾ ಅಷ್ಟೇ….

  3. ಕಲಿಯುತ್ತಿರುವ ಮೊದಲ ಪೀಳಿಗೆಯ ದಲಿತ ಮಕ್ಕಳಿಗೆ ಮೊದಲೊತ್ತು ನೀಡಲಿ. ಸೀಟುಗಳು ಉಳಿದರೆ, ಕಲಿಕೆಯ ಎರಡನೇ ಪೀಳಿಗೆಯವರಿಗೂ ಎಡೆಮಾಡಲಿ.

  4. ಬಿಜೆಪಿ ಸರ್ಕಾರ ದಲಿತ ವಿರೋಧಿ ಎಂಬುವುದನ್ನು ಸಾಬೀತು ಪಡಿಸಿದೆ ದಲಿತ ಜನಪ್ರತಿನಿಧಿಗಳು ಯೋಚಿಸಿ ನೋಡಿ ನಮಗೆ ಈ ಸರ್ಕಾರ ಬೇಕಾ..????

  5. ಮಾನ್ಯ ಗೋವಿಂದ ಕಾರಜೋಳ್, ಪಿ ರಾಜೀವ್ ಕುಡಚಿ ಶಾಸಕರ, ನಾರಾಯಣ ಸ್ವಾಮಿ, ಇನ್ನಿತರ ಎಸ್ಸಿ ಎಸ್ಟಿ ಜನ ಪ್ರತಿನಿದಿಗಳೇ ಕತ್ತೆ ಕಾಯ್ತಿದಿರಾ ನಮ್ಮ ಬಡ ವಿದ್ಯಾರ್ಥಿಗಳು ಎಲ್ಲಿ ಓದಬೇಕು, ಈ ಆದೇಶದ ವಿರುದ್ದ ಬಾಯಿ ಬಿಟ್ಟು ಮಾತಾಡಿ. ನಮ್ಮ ಅಳಿವು ಉಳಿವಿನ ಪ್ರಶ್ನೆ ಯಾಗಿದೆ.

  6. ಈಗಲಾದರೂ ಎಸ್ಸಿ ಎಸ್ಟಿ ಗಳು ಒಂದಾಗಿ ರಾಜ್ಯಧಿಕಾರ ಹಿಡಿಯಬೇಕು, ಯುವಕರು ಅರ್ಥಮಾಡಿಕೊಳ್ಳಿ ಬಿಜೆಪಿ ಬಿಜೆಪಿ ಎಂದು ಹಿಂದೆ ಹೋಗಿ ಸಮಾಜವನ್ನು ಅದೋಗತಿಗೆ ದೂಡಬೇಡಿ ಅಂಬೇಡ್ಕರ್ ಅವರ ಅನುಭವದ ಜೀವನ ಚರಿತ್ರೆಯನ್ನು ಓದಿ ತಿಳುಕೊಳ್ಳಿ ನಮ್ಮ ಸಮಾಜದ ಏಳಿಗೆಗಾಗಿ ಶ್ರಮಿಸಿ ಜೈಭೀಮ್

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...