HomeಮುಖಪುಟINDIA ಒಕ್ಕೂಟವು ಮಾದ್ಯಮಗಳಿಗೆ ಬಹಿಷ್ಕಾರ ಹಾಕಿರುವ ಬಗ್ಗೆ ಮಾಹಿತಿ ಇಲ್ಲ: ನಿತೀಶ್‌ ಕುಮಾರ್‌

INDIA ಒಕ್ಕೂಟವು ಮಾದ್ಯಮಗಳಿಗೆ ಬಹಿಷ್ಕಾರ ಹಾಕಿರುವ ಬಗ್ಗೆ ಮಾಹಿತಿ ಇಲ್ಲ: ನಿತೀಶ್‌ ಕುಮಾರ್‌

- Advertisement -
- Advertisement -

ಪ್ರತಿಪಕ್ಷಗಳ INDIA ಒಕ್ಕೂಟವು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿರುವುದರ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ ಮತ್ತು ಇದು ತಪ್ಪು ನಿರ್ಧಾರ ಎಂದು ಬಿಹಾರದ ಸಿಎಂ ಹಾಗೂ INDIA ಒಕ್ಕೂಟದ ಸದಸ್ಯ ಪಕ್ಷದ ನಾಯಕ ನಿತೀಶ್‌ ಕುಮಾರ್‌ ಅವರು ಹೇಳಿದ್ದಾರೆ.

INDIA ಮೈತ್ರಿಕೂಟದ ಕೆಲ ಸದಸ್ಯರಿಗೆ ಕೆಲ ಟಿವಿ ಆಂಕರ್‌ಗಳ ಕಾರ್ಯಕ್ರಮದಲ್ಲಿ ಸಮಸ್ಯೆಗಳು ಕಂಡು ಬಂದ ಹಿನ್ನೆಲೆ ಈ ನಿರ್ಧಾರವನ್ನು ತೆಗೆದುಕೊಂಡಿರಬಹುದು ಎಂದು ಕುಮಾರ್ ಹೇಳಿದರು. ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾನು ಯಾವಾಗಲೂ ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ದಾಳಿಗೆ ಒಳಗಾಗುತ್ತಿರುವ ಪತ್ರಿಕಾ ಸ್ವಾತಂತ್ರ್ಯದ ಪರವಾಗಿದ್ದೇನೆ ಎಂದು ಹೇಳಿದ್ದಾರೆ.

ನಾವು ಪ್ರಸ್ತುತ ಅಧಿಕಾರದಲ್ಲಿರುವವರನ್ನು ಸೋಲಿಸಿ ನಿಮ್ಮ ವೃತ್ತಿಯನ್ನು ಅಭ್ಯಾಸ ಮಾಡಲು ನಿಮಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡುವ ಭರವಸೆ ನೀಡುತ್ತೇವೆ ಎಂದು ನಿತೀಶ್ ಕುಮಾರ್‌ ಅವರು ಇದೇ ವೇಳೆ ಪತ್ರಕರ್ತರಿಗೆ ಹೇಳಿದ್ದಾರೆ.

ನಾನು ಪತ್ರಕರ್ತರ ಬೆಂಬಲಕ್ಕೆ ಇದ್ದೇನೆ. ಎಲ್ಲರಿಗೂ ಸಂಪೂರ್ಣ ಮುಕ್ತ ಸ್ವಾತಂತ್ರ್ಯ ಸಿಕ್ಕಾಗ ಪತ್ರಕರ್ತರು ತಮಗೆ ಬೇಕಾದುದನ್ನು ಬರೆಯುತ್ತಾರೆ. ಅವರನ್ನು ನಿಯಂತ್ರಿಸಲಾಗಿದೆಯೇ? ನಾನು ಅದನ್ನು ಮಾಡಿದ್ದೇನೆಯೇ? ಅವರಿಗೆ ಹಕ್ಕುಗಳಿವೆ, ನಾನು ಯಾರ ವಿರುದ್ಧವೂ ಅಲ್ಲ ಎಂದು ಅವರು ಹೇಳಿದ್ದಾರೆ.

INDIA ಒಕ್ಕೂಟದ ನಾಯಕರು 14 ಸುದ್ದಿ ನಿರೂಪಕರು ಆಯೋಜಿಸುವ ಟಿವಿ ಸಂವಾದ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಬುಧವಾರ ಪ್ರಕಟಿಸಿತ್ತು. ಆದರೆ ನಿನ್ನೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಮೈತ್ರಿಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ ಅಥವಾ ನಿಷೇಧಿಸಿಲ್ಲ ಎಂದು ಹೇಳಿದ್ದರು.

ಅವರು ನಮ್ಮ ಶತ್ರುಗಳಲ್ಲ ಅವರು ತಮ್ಮ ವಿರುದ್ಧದ ನಿಲುವುಗಳನ್ನು ಹೊಂದಿರಬಹುದು ಆದರೆ ಯಾವುದೂ ಶಾಶ್ವತವಲ್ಲ,  ಅವರು ಮಾಡುತ್ತಿರುವುದು ಭಾರತಕ್ಕೆ ಒಳ್ಳೆಯದಲ್ಲ ಎಂದು ಅವರು ಅರಿತುಕೊಂಡರೆ, ನಾವು ಮತ್ತೆ ಅವರ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.

ಅದಿತಿ ತ್ಯಾಗಿ, ಅಮನ್ ಚೋಪ್ರಾ, ಅಮಿದ್ ದೇವಗನ್, ಆನಂದ್ ನರಸಿಂಹನ್, ಅರ್ನಾಬ್ ಗೋಸ್ವಾಮಿ, ಅಶೋಕ್ ಶ್ರೀವಾಸ್ತವ್, ಚಿತ್ರಾ ತ್ರಿಪಾಠಿ, ಗೌರವ್ ಸಾವಂತ್, ನಾವಿಕ ಕುಮಾರ್, ಪ್ರಾಚಿ ಪರಾಶರ್, ರುಬಿಕಾ ಲಿಯಾಕತ್, ಶಿವ ಆರೂರ್, ಸುಧೀರ್ ಚೌಧರಿ ಮತ್ತು ಸುಶಾಂತ್ ಸಿನ್ಹಾ ನಡೆಸಿಕೊಡುವ ದೂರದರ್ಶನ ಚರ್ಚೆಗಳಿಗೆ ತನ್ನ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಹೇಳಲಾಗಿತ್ತು.

ಈ ಬಗ್ಗೆ ಶುಕ್ರವಾರ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ಈ ಆಂಕರ್‌ಗಳು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಾಗಿ ಪ್ರಾಯೋಜಿತ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ INDIA ಒಕ್ಕೂಟವು ಈ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದರು.

ಇದನ್ನು ಓದಿ: INDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...