Homeಮುಖಪುಟಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ: ಆಪ್ ಶಾಸಕ ಅಮಾನತುಲ್ಲಾಖಾನ್

ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ: ಆಪ್ ಶಾಸಕ ಅಮಾನತುಲ್ಲಾಖಾನ್

- Advertisement -
- Advertisement -

ದೆಹಲಿಯ ಶಾಹೀನ್‌ಬಾಗ್‌ನಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆಸಲು ಬುಲ್ಡೋಜರ್ ಬಳಸಲು ಮುಂದಾದ ಬಿಜೆಪಿ ಕ್ರಮವನ್ನು ಒಕ್ಲಾ ಕ್ಷೇತ್ರದ ಆಪ್ ಶಾಸಕ ಅಮಾನತುಲ್ಲಾಖಾನ್ ವಿರೋಧಿಸಿದ್ದಾರೆ. ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಅತಿಕ್ರಮ ಪ್ರವೇಶ ಮಾಡಿದವರನ್ನು ಈ ಹಿಂದೆಯೇ ತೆರವುಗೊಳಿಸಲಾಗಿದೆ. ಹಾಗಾಗಿ ಇಲ್ಲಿ ಯಾವುದೇ ಅಕ್ರಮ ಕಟ್ಟಡಗಳಿಲ್ಲ ಎಂದು ಅಮಾನತುಲ್ಲಾಖಾನ್ ತಿಳಿಸಿದ್ದಾರೆ. ಸ್ಥಳೀಯ ಪ್ರತಿಭಟನಾಕಾರರೊಂದಿಗೆ ಅವರು ಸಹ ಕೈ ಜೋಡಿಸಿದ ನಂತರ ತೆರವು ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ವಿರೋಧಿ ಹೋರಾಟದ ಕೇಂದ್ರತಾಣವಾಗಿದ್ದ ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಬಿಜೆಪಿ ಆಡಳಿತದ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ ಮುಂದಾಗಿದೆ. ಇಂದು ಬೆಳಿಗ್ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗಿದ್ದು ಅದನ್ನು ವಿರೋಧಿಸಿ ಪ್ರತಿಭಟನಾಕಾರರು ಜೆಸಿಬಿಗಳ ಎದುರು ಮಲಗಿ ಪ್ರತಿಭಟಿಸಿದ್ದಾರೆ. ಕೆಲ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಹಾಂಗೀರ್ ಪುರಿಯಲ್ಲಿಯೂ ಇದೇ ರೀತಿ ಬಿಜೆಪಿ ಆಡಳಿತದ ಎಂಸಿಡಿ ಬುಲ್ಡೋಜರ್‌ಗಳನ್ನು ನುಗ್ಗಿಸಿತ್ತು. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ತೆರವು ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಮುಸ್ಲಿಮರು ಹೆಚ್ಚಾಗಿ ವಾಸಿಸುವ ಶಾಹೀನ್ ಬಾಗ್‌ ಅನ್ನು ಗುರಿ ಮಾಡಿ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗುತ್ತಿದೆ.

ಕಳೆದ ತಿಂಗಳು ದೆಹಲಿಯ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಎಂಸಿಡಿಗೆ ಪತ್ರ ಬರೆದು ಶಾಹೀನ್ ಬಾಗ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಮನವಿ ಮಾಡಿದ್ದರು. ಇಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಸಮಾಜವಿರೋಧಿ ಶಕ್ತಿಗಳು ನೆಲಿಸಿದ್ದಾರೆ ಎಂದು ದೂರಿದ್ದರು. ಅದರ ಆಧಾರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ದಕ್ಷಿಣ ದೆಹಲಿಯ ಕಾರ್ಪೊರೇಷನ್ 10 ದಿನಗಳ ತೆರವು ಕಾರ್ಯಾಚರಣೆಯ ಯೋಜನೆ ಸಿದ್ದಪಡಿಸಿಕೊಂಡಿದೆ. ಮೇ 13ರವರೆಗೂ ಅದು ನಡೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ. ಇದು ಬಿಜೆಪಿಯ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...