Homeಮುಖಪುಟಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ: ಆಪ್ ಶಾಸಕ ಅಮಾನತುಲ್ಲಾಖಾನ್

ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ: ಆಪ್ ಶಾಸಕ ಅಮಾನತುಲ್ಲಾಖಾನ್

- Advertisement -
- Advertisement -

ದೆಹಲಿಯ ಶಾಹೀನ್‌ಬಾಗ್‌ನಲ್ಲಿ ಅಕ್ರಮ ತೆರವು ಕಾರ್ಯಾಚರಣೆ ನಡೆಸಲು ಬುಲ್ಡೋಜರ್ ಬಳಸಲು ಮುಂದಾದ ಬಿಜೆಪಿ ಕ್ರಮವನ್ನು ಒಕ್ಲಾ ಕ್ಷೇತ್ರದ ಆಪ್ ಶಾಸಕ ಅಮಾನತುಲ್ಲಾಖಾನ್ ವಿರೋಧಿಸಿದ್ದಾರೆ. ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

ಇಲ್ಲಿ ಅತಿಕ್ರಮ ಪ್ರವೇಶ ಮಾಡಿದವರನ್ನು ಈ ಹಿಂದೆಯೇ ತೆರವುಗೊಳಿಸಲಾಗಿದೆ. ಹಾಗಾಗಿ ಇಲ್ಲಿ ಯಾವುದೇ ಅಕ್ರಮ ಕಟ್ಟಡಗಳಿಲ್ಲ ಎಂದು ಅಮಾನತುಲ್ಲಾಖಾನ್ ತಿಳಿಸಿದ್ದಾರೆ. ಸ್ಥಳೀಯ ಪ್ರತಿಭಟನಾಕಾರರೊಂದಿಗೆ ಅವರು ಸಹ ಕೈ ಜೋಡಿಸಿದ ನಂತರ ತೆರವು ಕಾರ್ಯಾಚರಣೆಯನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಸಿಎಎ ವಿರೋಧಿ ಹೋರಾಟದ ಕೇಂದ್ರತಾಣವಾಗಿದ್ದ ಶಾಹೀನ್‌ಬಾಗ್‌ನಲ್ಲಿ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ಬಿಜೆಪಿ ಆಡಳಿತದ ದೆಹಲಿ ಮುನಿಸಿಪಲ್ ಕಾರ್ಪೊರೇಷನ್ ಮುಂದಾಗಿದೆ. ಇಂದು ಬೆಳಿಗ್ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗಿದ್ದು ಅದನ್ನು ವಿರೋಧಿಸಿ ಪ್ರತಿಭಟನಾಕಾರರು ಜೆಸಿಬಿಗಳ ಎದುರು ಮಲಗಿ ಪ್ರತಿಭಟಿಸಿದ್ದಾರೆ. ಕೆಲ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ತಿಂಗಳು ದೆಹಲಿಯ ಜಹಾಂಗೀರ್ ಪುರಿಯಲ್ಲಿಯೂ ಇದೇ ರೀತಿ ಬಿಜೆಪಿ ಆಡಳಿತದ ಎಂಸಿಡಿ ಬುಲ್ಡೋಜರ್‌ಗಳನ್ನು ನುಗ್ಗಿಸಿತ್ತು. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ತೆರವು ಕಾರ್ಯಾಚರಣೆ ನಿಲ್ಲಿಸಲಾಗಿತ್ತು. ಈಗ ಮತ್ತೆ ಮುಸ್ಲಿಮರು ಹೆಚ್ಚಾಗಿ ವಾಸಿಸುವ ಶಾಹೀನ್ ಬಾಗ್‌ ಅನ್ನು ಗುರಿ ಮಾಡಿ ಬುಲ್ಡೋಜರ್‌ಗಳನ್ನು ನುಗ್ಗಿಸಲಾಗುತ್ತಿದೆ.

ಕಳೆದ ತಿಂಗಳು ದೆಹಲಿಯ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಎಂಸಿಡಿಗೆ ಪತ್ರ ಬರೆದು ಶಾಹೀನ್ ಬಾಗ್‌ನಲ್ಲಿ ತೆರವು ಕಾರ್ಯಾಚರಣೆ ನಡೆಸುವಂತೆ ಮನವಿ ಮಾಡಿದ್ದರು. ಇಲ್ಲಿ ಅಕ್ರಮ ಬಾಂಗ್ಲಾ ನುಸುಳುಕೋರರು, ರೋಹಿಂಗ್ಯಾ ಮುಸ್ಲಿಮರು ಮತ್ತು ಸಮಾಜವಿರೋಧಿ ಶಕ್ತಿಗಳು ನೆಲಿಸಿದ್ದಾರೆ ಎಂದು ದೂರಿದ್ದರು. ಅದರ ಆಧಾರದಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ಬುಲ್ಡೋಜರ್ ರಾಜಕಾರಣ: ’ಜಹಾಂಗೀರ್ ಪುರಿ’ಯಿಂದ ದೇಶದ ವಿನಾಶಕ್ಕೆ ಮುಂದಾದ ಬಿಜೆಪಿ-ಸಂಘ ಪರಿವಾರ

ದಕ್ಷಿಣ ದೆಹಲಿಯ ಕಾರ್ಪೊರೇಷನ್ 10 ದಿನಗಳ ತೆರವು ಕಾರ್ಯಾಚರಣೆಯ ಯೋಜನೆ ಸಿದ್ದಪಡಿಸಿಕೊಂಡಿದೆ. ಮೇ 13ರವರೆಗೂ ಅದು ನಡೆಯಲಿದೆ ಎಂದು ಮೇಯರ್ ತಿಳಿಸಿದ್ದಾರೆ. ಇದು ಬಿಜೆಪಿಯ ದ್ವೇಷದ ರಾಜಕಾರಣ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...