Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...