Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...