Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...