Homeಕರ್ನಾಟಕತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ತೀವ್ರ ಬೆಲೆ ಏರಿಕೆಯಾದರೂ ಅನುದಾನ ಹೆಚ್ಚಳವಿಲ್ಲ: ಅರೆಹೊಟ್ಟೆಯಲ್ಲಿ ಶಾಲಾ ಮಕ್ಕಳು

ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ 2020ರ ಜೂನ್‌ನಲ್ಲಿ ನಿಗಧಿಪಡಿಸಿದ ಅನುದಾನವನ್ನೇ ಈಗಲೂ ನೀಡಲಾಗುತ್ತಿದೆ.

- Advertisement -
- Advertisement -

ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಲ್ಲಿ ಮಕ್ಕಳಿಗೆ ಕೊಡುತ್ತಿರುವ ಮಧ್ಯಾಹ್ನದ ಬಿಸಿಯೂಟ ಹೊಟ್ಟೆ ತುಂಬ ಸಿಗದಂತಾಗಿದೆ. ಒಂದೇ ಸಮನೆ ಗ್ಯಾಸ್ ಸಿಲೆಂಡರ್, ದವಸ ಧಾನ್ಯ ಮತ್ತು ತರಕಾರಿ ಬೆಲೆ ಏರಿಕೆಯಾಗುತ್ತಿದ್ದರೂ ಹಿಂದಿನ ಅನುದಾನ ಪರಿಷ್ಕರಿಸದೆ ಸರಕಾರ ಉದಾಸೀನ ತೋರಿರುವುದರಿಂದ ಬಿಸಿಯೂಟ ಯೋಜನೆಯ್ನು ಶಾಲೆಗಳಲ್ಲಿ ನಿಭಾಯಿಸಲಾಗುತ್ತಿಲ್ಲವೆಂದು ಶಿಕ್ಷಕರು ಅಲವತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಮಂತ್ರಿಯಾದಿಯಾಗಿ ಜನಪ್ರತಿನಿಧಿಗಳೆಲ್ಲ ಇದು ತಮಗೆ ಸಂಬಂಧಿಸಿದ ಸಂಗತಿ ಅಲ್ಲವೆಂಬಂತೆ ಇರುವುದರಿಂದ ವಿಧ್ಯಾರ್ಥಿಗಳು ಅರೆ-ಬರೆ ಉಂಡೇಳುವಂತಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಪ್ರತಿ ಮಗುವಿನ ಲೆಕ್ಕಾಚಾರದಲ್ಲಿ ಪ್ರತಿ ವರ್ಷ ಬಿಸಿಊಟದ ದರ ಸರ್ಕಾರ ಪರಿಷ್ಕರಿಸುವುದು ಪದ್ದತಿ. ಜೂನ್ 2020ರಲ್ಲಿ ಶೇ.10.99ರಷ್ಟು ಅನುದಾನ ಜಾಸ್ತಿ ಮಾಡಲಾಗಿತ್ತು. ಈ ದರದಂತೆ 1ರಿಂದ 5ನೇ ತರಗತಿ ವರೆಗಿನ ಒಂದು ಮಗುವಿಗೆ 4.97ರೂ. ಖರ್ಚು ಮಾಡಬಹುದು. 6ರಿಂದ 10ನೇ ತರಗತಿ ಮಕ್ಕಳಿಗೆ ತಲಾ 7.45ರೂ ವ್ಯಯಿಸಬೇಕು. ಅಡುಗೆ ಅನಿಲದಿಂದ, ಎಣ್ಣೆ ಬೇಳೆಕಾಳಿನ ತನಕದ ಎಲ್ಲ ಖರ್ಚು-ವೆಚ್ಚ ಹೆಚ್ಚಾಗಿದ್ದರೂ ಈ ವರ್ಷ ಅನುದಾನ ಮಾತ್ರ ಸರ್ಕಾರ ಹೆಚ್ಚಿಸಿಲ್ಲ. ಒಂದರಿಂದ ಐದನೇ ತರಗತಿ ವರೆಗಿನ ಒಂದು ಮಗುವಿಗೆ 2 ರೂಗೆ ತೊಗರಿ ಬೇಳೆ (20 ಗ್ರಾಂ), 1.36ರೂಗೆ ತರಕಾರಿ (50 ಗ್ರಾಂ), 1.73ರೂಗೆ ಎಣ್ಣೆ (5 ಗ್ರಾಂ), 37 ಪೈಸೆಗೆ ಸಾಂಬಾರ್ ಪುಡಿ, 3 ಪೈಸೆಗೆ ಉಪ್ಪು (2ಗ್ರಾಂ), ಇಂಧನಕ್ಕೆ 79 ಪೈಸೆ ಖರ್ಚು ಮಾಡಲಾಗುತ್ತಿದೆ.

ಅದೇ ರೀತಿಯಾಗಿ 6ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ 2.95ರೂಗೆ ತೊಗರಿಬೇಳೆ (30 ಗ್ರಾಂ), 2.04ರೂಗೆ ತರಕಾರಿ (75 ಗ್ರಾಂ), 54ಪೈಸೆಗೆ ಸಾಂಬಾರ್ ಪುಡಿ, 67 ಪೈಸೆಗೆ ಎಣ್ಣೆ (7.5 ಗ್ರಾಂ), 6 ಪೈಸೆಗೆ ಉಪ್ಪು(4ಗ್ರಾಂ), 1.19ರೂಗೆ ಇಂಧನದ ಲೆಕ್ಕದಲ್ಲಿ ಖರ್ಚು ಮಾಡಬೇಕೆಂದು ಸರ್ಕಾರಿ ಸುತ್ತೋಲೆ ಹೆಳುತ್ತದೆ. ವಾರಕ್ಕೊಮ್ಮೆ ಪಾಯಸ-ಹುಗ್ಗಿ ಮಕ್ಕಳಿಗೆ ಹಂಚಬೇಕು. ಇದಕ್ಕೆ ಪ್ರತ್ಯೇಕ ಅನುದಾನವಿಲ್ಲ. ಬಿಸಿಯೂಟ ಖಾತೆಯಿಂದ ನಿಗದಿತ ಪ್ರಮಾಣಕ್ಕಿಂತ ಒಂದು ಪೈಸೆ ಹೆಚ್ಚು ತೆಗೆಯುವಂತಿಲ್ಲ. ಆದರೆ ಈ ದರದಲ್ಲಿ ಬಿಸಿಯೂಟ ತಯಾರಿಸುವುದು ಹಾಲಿ ದುಬಾರಿ ದಿನ ಮಾನದಲ್ಲಿ ಅಸಾಧ್ಯದ ಮಾತೆಂಬ ಸಾಮಾನ್ಯ ಜ್ಞಾನ ಸರಕಾರ ನಡೆಸುವವರಿಗೆ ಇರಬೇಡವೆ ಎಂದು ಪಾಲಕರು ಪ್ರಶ್ನಿಸುತ್ತಾರೆ.

ಸರಕಾರ ನಿಗದಿಸಿರುವ ಈ ತಲಾ ಖರ್ಚಿನಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿರುವ ಸರಕಾರಿ ಮತ್ತು ಅನುದಾನಿತ ಶಾಲೆಗಳಲಿ ಬಿಸಿಯೂಟ ನಿರ್ವಹಣೆ ಸಾಧ್ಯವಾಗುತ್ತಿಲ್ಲ. ಮೊದಲು ಶಾಲೆಗಳಿಗೆ ತಿಂಗಳಿಗೆ ಎರಡು ಅನಿಲ ಸಿಲೆಂಡರ್ ಕೊಡಲಾಗುತ್ತಿತ್ತು. ಈಗ ಅದರ ವೆಚ್ಚ ನೀಡಲಾಗುತ್ತಿದ್ದು ಶಿಕ್ಷಕರೆ ಗ್ಯಾಸ್‌ ತಂದುಕೊಳ್ಳಬೇಕಿದೆ. ಸರಕಾರ ಕೊಡುವ ಅನುದಾನದಲ್ಲಿ 910ರೂಗೆ ಗ್ಯಾಸ್ ಸಿಲೆಂಡರ್, ಕೆ.ಜಿ.ಗೆ 105 ರೂ.ಗಳ ತೊಗರಿ ಬೇಳೆ, ಕನಿಷ್ಟವೆಂದರೂ 40 ರಿಂದ 50 ರೂ.ಗಳಿರುವ ಕೆಜಿ ಈರುಳ್ಳಿ, ಟೊಮೆಟೊ, ಇನ್ನಿತರ ತರಕಾರಿ ಮತ್ತು ಲೀಟರಿಗೆ 160 ರೂ.ಗಳ ಖಾದ್ಯ ತೈಲಕ್ಕೆ ವಿಂಗಡಿಸಿ ಈ ಬೆಲೆ ಏರಿಕೆಯ ದಿನಗಳಲ್ಲಿ ಬಿಸಿಯೂಟ ತಯಾರಿಕೆ ಸಾಧ್ಯವಿಲ್ಲವೆಂದು ನಿರ್ವಾಹಕರು ಹೇಳುತ್ತಾರೆ.

“ಅಡುಗೆ ಅನಿಲ ಸಮಸ್ಯೆಯಿಂದ ಬಿಸಿಯೂಟ ತಯಾರಿಸುವುದು ದೊಡ್ಡ ಸವಾಲಿನ ಸಂಗತಿಯೆಂಬಂತಾಗಿದೆ. 50 ಮಕ್ಕಳಿರುವ ಶಾಲೆಗೆ ತಿಂಗಳಿಗೆ ಒಂದು ಸಿಲೆಂಡರ್ ಮತ್ತು 100 ಮಕ್ಕಳಿರುವ ಶಾಲೆಗಳಿಗೆ ತಿಂಗಳಿಗೆ ಎರಡು ಸಿಲಿಂಡರ್ ನಿಗದಿಪಡಿಸಲಾಗಿದೆ. 20ರಿಂದ 30 ಮಕ್ಕಳಿರುವ ಶಾಲೆಗಳೆ ಹೆಚ್ಚಿವೆ. ನಮ್ಮದು ಸಹ ಅಂತಹ ಶಾಲೆಯಾಗಿದ್ದು ಇಲ್ಲಿ 16-17 ದಿನಕ್ಕೆ ಸಿಲಿಂಡರ್ ಖಾಲಿಯಾಗುತ್ತಿದೆ. ಉಳಿದ ದಿನಗಳ ಸಮಸ್ಯೆಗೆ ನಾವೆ ತಲೆಕೊಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಛಿಸಿದ ಶಾಲಾ ಮುಖ್ಯೋಪಾಧ್ಯಾಯರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇನ್ನು ಬಿಸಿ ಊಟ ತಯಾರಿಸುವ ಮಹಿಳಾ ನೌಕರರಿಗೆ 2021ರ ಜೂನ್ ತಿಂಗಳಿನಿಂದಲೂ ಸಂಬಳ ನೀಡಿಲ್ಲ. ಈ ಬಗ್ಗೆ ಹಲವು ಹೋರಾಟಗಳು ನಡೆದರೂ ಸರ್ಕಾರ ಮಾತ್ರ ಕಡೆಗಣಿಸುತ್ತಲೇ ಇದೆ.

ಬಿಸಿಯೂಟ ತಯಾರಿಕೆಯಲ್ಲಾಗುತ್ತಿರುವ ತೊಂದರೆ-ತೊಡಕು ನಿವಾರಣೆಗೆ ಜನ ಪ್ರತಿನಿಧಿಗಳು ಅದರಲ್ಲೂ ಶಾಸಕರು ಇಚ್ಚಾ ಶಕ್ತಿ ತೋರಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.


ಇದನ್ನೂ ಓದಿ: ಮೋದಿ ಅಭಿವೃದ್ಧಿ ವಾಹನವು ರಿವರ್ಸ್ ಗೇರ್‌ನಲ್ಲಿದೆ ಹಾಗೂ ಅದರ ಬ್ರೇಕ್‌ ವಿಫಲವಾಗಿದೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...