Homeಮುಖಪುಟಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

- Advertisement -
- Advertisement -

ಕೊರೊನಾ ನಿಯಂತ್ರಣ ಮತ್ತು ಮಾಹಿತಿಗಾಗಿ ಭಾರತದ ಜನತೆ ಬಳಸುತ್ತಿದ್ದ ಆರೋಗ್ಯ ಸೇತು ಆಪ್‌ ಅನ್ನು ಅಭಿವೃದ್ಧಿಪಡಿಸಿದವರು ಯಾರೆಂದು ತಿಳಿದಿಲ್ಲ ಎಂದು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹೇಳಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ಅದರ ನಿಯಂತ್ರಣಕ್ಕಾಗಿ ಸೋಂಕಿತರು ಮತ್ತು ಅವರೊಡನೆ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಮತ್ತು ಜಾಗೃತಿ ನೀಡುವುದಕ್ಕಾಗಿ ಅಭಿವೃದ್ಧಿಪಡಿಸಲಾಗಿದ್ದ ಆರೋಗ್ಯ ಸೇತು ಆಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಮಾಹಿತಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಈ  ಹಿಂದೆ ಸರ್ಕಾರವೇ, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಹಕಾರಿಯಾದ ಸಾಧನ ಎಂದು ಘೋಷಿಸಿತ್ತು. ಹಾಗಾಗಿ ಭಾರತದ ಕೋಟ್ಯಂತರ ಜನರು ಈ ಆಪ್‌ ಅನ್ನು ಬಳಸುತ್ತಿದ್ದಾರೆ. ಅದೂ ಅಲ್ಲದೇ ರೈಲುಗಳಲ್ಲಿ ಮತ್ತು ಸರ್ಕಾರಿ ಸಾರಿಗೆಗಳಲ್ಲಿ ಪ್ರಯಾಣಿಸಬೇಕೆಂದರೆ ಆರೋಗ್ಯ ಸೇತು ಆಪ್ ಖಡ್ಡಾಯ ಎಂದು ಸರ್ಕಾರವೇ ಹೇಳಿತ್ತು. ಆದರೆ ಈಗ ಏಕಾಏಕಿ ಇದರ ಬಗ್ಗೆ ಮಾಹಿತಿ ಇಲ್ಲ ಎನ್ನುವುದು ದೊಡ್ಡ ಆಘಾತವನ್ನುಂಟುಮಾಡಿದೆ.

ಈ ಆಪ್ ಬಳಸುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯೂ ಅದರಲ್ಲೇ ಅಡಕವಾಗಿರುತ್ತದೆ. ಈಗ ಇದನ್ನು ಅಭಿವೃದ್ಧಿಪಡಿಸಿದವರ ಬಗ್ಗೆ ಗೊತ್ತಿಲ್ಲ ಎನ್ನುವುದಾದರೆ ಈ ಮಾಹಿತಿಗಳು ಸುರಕ್ಷಿತವಾಗಿಲ್ಲ ಎಂದೇ ಅರ್ಥ. ಆದರೆ ಈ ಆಪ್‌ನಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇದನ್ನು ಅಭಿವೃದ್ಧಿಗೊಳಿಸಿದೆ ಎಂದು ನಮೂದಿಸಲಾಗಿದೆ. ಆದರೆ ಇದನ್ನು ಅಭಿವೃದ್ಧಿಪಡಿಸಿದವರು ಯಾರು ಎಂಬ ಪ್ರಶ್ನೆಗೆ ಎರಡೂ ಇಲಾಖೆಗಳೂ ಹಾರಿಕೆಯ ಉತ್ತರ ನೀಡಿವೆ.

ಇದನ್ನೂ ಓದಿ: ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಆರ್‌ಟಿಐ ಕಾಯ್ದೆಯಡಿ ಇದರ ಬಗ್ಗೆ ಮಾಹಿತಿ ಕೋರಿದ್ದ ಸೌರವ್ ದಾಸ್ ಎಂಬುವವರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದು, ಆಪ್ ರೂಪಿಸಲು ಪ್ರಸ್ತಾವ ಸಲ್ಲಿಸಿದ್ದು ಯಾರು? ಅದಕ್ಕೆ ಅನುಮೋದನೆ ನೀಡಿದ್ದು ಯಾವತ್ತು? ಇದರಲ್ಲಿ ಭಾಗಿಯಾಗಿರುವ ಸಂಸ್ಥೆ, ವ್ಯಕ್ತಿಗಳು ಅಥವಾ ಸರ್ಕಾರದ ಇಲಾಖೆಯ ವಿವರ, ಇದನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಖಾಸಗೀ ವ್ಯಕ್ತಿಗಳ ನಡುವೆ ನಡೆದಿರುವ ಸಂವಹನದ ವಿವರಗಳನ್ನು ಒದಗಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಈ ಆಪ್ ರೂಪಿಸುವ ಕುರಿತ ಫೈಲ್ ನಮ್ಮ ಬಳಿ ಇಲ್ಲ ಎಂದು ರಾಷ್ಟ್ರೀಯ ಮಾಹಿತಿ ಕೇಂದ್ರ ಉತ್ತರಿಸಿತ್ತು. ಮಾಹಿತಿ ತಂತ್ರಜ್ಞಾನ ಇಲಾಖೆಯು ಈ ಅರ್ಜಿಯನ್ನು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ವರ್ಗಾಯಿಸಿತ್ತು. ಅಲ್ಲಿಯೂ ಇದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲವೆಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕಡ್ಡಾಯ ಕಾನೂನುಬಾಹಿರ – ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ

ನೀಡಬಹುದಾದ ಯಾವುದೇ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡಬಹುದು ಎಂದು ಮಾಹಿತಿ ಆಯೋಗವೇ ಹೇಳಿದ್ದು, ಈ ರೀತಿ ಹಾರಿಕೆಯ ಉತ್ತರ ನೀಡಿರುವ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಜೊತೆಗೆ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಆದರೂ ಸಾರ್ವಜನಿಕರ ಖಾಸಗೀ ಮಾಹಿತಿಗಳಿಗೆ ಜವಾಬ್ದಾರಿ ಯಾರು ಎಂಬ ಪ್ರಶ್ನೆ ಗಾಢವಾಗಿ ಕಾಡುತ್ತದೆ. ಈ ಹಿಂದೆ ಆಧಾರ್‌ ಕಾರ್ಡ್‌‌ಗೆ ಸಂಬಂಧಿಸಿದಂತೆ ಇದೇ ರೀತಿಯ ತೊಂದರೆ ಎದುರಾಗಿ, ಆಧಾರ್‌ ಮಾಹಿತಿಗಳು ಸುರಕ್ಷಿತವಲ್ಲ ಎಂದು ಹಲವು ಡಿಜಿಟಲ್ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವುದೆ ಕ್ರಮಗಳನ್ನು ಕೈಗೊಂಡಂತೆ ಕಾಣುತ್ತಿಲ್ಲ. ಹೀಗಿರುವಾಗ ಡಿಜಿಟಲ್ ಇಂಡಿಯಾ ಎಷ್ಟು ಸುರಕ್ಷಿತ ಎಂಬುದು ಮುಖ್ಯವಾಗಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಅಭಿವೃದ್ಧಿ ಯಾವತ್ತಿಗೂ ಮನುಷ್ಯನನ್ನು ಅಪಾಯಕ್ಕೆ ಸಿಲುಕಿಸುವಂತಿರಬಾರದು. ಆದರೆ ಇಂದು ಆಗುತ್ತಿರುವುದೇ ಬೇರೆ. ಮನುಷ್ಯ, ಅಭಿವೃದ್ಧಿಯ ಒಂದೊಂದೇ ಮೆಟ್ಟಿಲನ್ನು ಏರುತ್ತಾ ಹೋದಂತೆ ಅದರೊಂದಿಗಿನ ಅಪಾಯಗಳೂ ಒಂದೊಂದಾಗಿ ತೆರೆದುಕೊಳ್ಳುತ್ತಲೇ ಇವೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಂತೂ ನಾವು ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕು. ಆದರೆ ಸರ್ಕಾರದ ಇಂತಹ ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿಯ ಧೋರಣೆಯಿಂದ ಇದು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಆರೋಗ್ಯ ಸೇತು ಆಪ್ ಮತ್ತು ಈ ಹಿಂದಿನ ಆಧಾರ್‌ ಕಾರ್ಡ್‌.

ಇಂದು ನಾವು ಮತ್ತು ನಮ್ಮ ಮಾಹಿತಿಯನ್ನು ರಕ್ಷಿಸುವಲ್ಲಿ ನಿರಾಸಕ್ತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಂದೋಲನ ನಡೆಯಬೇಕಿದೆ. ಆದರೆ ಪಕ್ಷನಿಷ್ಟ ಮತ್ತು ವ್ಯಕ್ತಿನಿಷ್ಟ ಮಬ್ಬಕ್ತರಿಂದ ಇದು ಸಾಧ್ಯವಗುತ್ತಿಲ್ಲ. ಇಂದಿನ ಸೈಬರ್‌ ಯುಗದಲ್ಲಿ ನಾವು ಮತ್ತು ಮತ್ತು ನಮ್ಮ ಮಾಹಿತಿಗಳು ಸುರಕ್ಷಿತವಲ್ಲ ಎಂಬುದನ್ನು ಅರಿತಾಗ ಮಾತ್ರ ಮುಂದೆ ಸಂಭವಿಸಲಿರುವ ದೊಡ್ಡ ಅಪಾಯವನ್ನು ತಡೆಯಬಹುದು.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...