Homeಮುಖಪುಟಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

- Advertisement -
- Advertisement -

ಕೊರೊನಾ ನಿಯಂತ್ರಣ ಮತ್ತು ಮಾಹಿತಿಗಾಗಿ ಭಾರತದ ಜನತೆ ಬಳಸುತ್ತಿದ್ದ ಆರೋಗ್ಯ ಸೇತು ಆಪ್‌ ಅನ್ನು ಅಭಿವೃದ್ಧಿಪಡಿಸಿದವರು ಯಾರೆಂದು ತಿಳಿದಿಲ್ಲ ಎಂದು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹೇಳಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ಅದರ ನಿಯಂತ್ರಣಕ್ಕಾಗಿ ಸೋಂಕಿತರು ಮತ್ತು ಅವರೊಡನೆ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಮತ್ತು ಜಾಗೃತಿ ನೀಡುವುದಕ್ಕಾಗಿ ಅಭಿವೃದ್ಧಿಪಡಿಸಲಾಗಿದ್ದ ಆರೋಗ್ಯ ಸೇತು ಆಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಮಾಹಿತಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಈ  ಹಿಂದೆ ಸರ್ಕಾರವೇ, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಹಕಾರಿಯಾದ ಸಾಧನ ಎಂದು ಘೋಷಿಸಿತ್ತು. ಹಾಗಾಗಿ ಭಾರತದ ಕೋಟ್ಯಂತರ ಜನರು ಈ ಆಪ್‌ ಅನ್ನು ಬಳಸುತ್ತಿದ್ದಾರೆ. ಅದೂ ಅಲ್ಲದೇ ರೈಲುಗಳಲ್ಲಿ ಮತ್ತು ಸರ್ಕಾರಿ ಸಾರಿಗೆಗಳಲ್ಲಿ ಪ್ರಯಾಣಿಸಬೇಕೆಂದರೆ ಆರೋಗ್ಯ ಸೇತು ಆಪ್ ಖಡ್ಡಾಯ ಎಂದು ಸರ್ಕಾರವೇ ಹೇಳಿತ್ತು. ಆದರೆ ಈಗ ಏಕಾಏಕಿ ಇದರ ಬಗ್ಗೆ ಮಾಹಿತಿ ಇಲ್ಲ ಎನ್ನುವುದು ದೊಡ್ಡ ಆಘಾತವನ್ನುಂಟುಮಾಡಿದೆ.

ಈ ಆಪ್ ಬಳಸುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯೂ ಅದರಲ್ಲೇ ಅಡಕವಾಗಿರುತ್ತದೆ. ಈಗ ಇದನ್ನು ಅಭಿವೃದ್ಧಿಪಡಿಸಿದವರ ಬಗ್ಗೆ ಗೊತ್ತಿಲ್ಲ ಎನ್ನುವುದಾದರೆ ಈ ಮಾಹಿತಿಗಳು ಸುರಕ್ಷಿತವಾಗಿಲ್ಲ ಎಂದೇ ಅರ್ಥ. ಆದರೆ ಈ ಆಪ್‌ನಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇದನ್ನು ಅಭಿವೃದ್ಧಿಗೊಳಿಸಿದೆ ಎಂದು ನಮೂದಿಸಲಾಗಿದೆ. ಆದರೆ ಇದನ್ನು ಅಭಿವೃದ್ಧಿಪಡಿಸಿದವರು ಯಾರು ಎಂಬ ಪ್ರಶ್ನೆಗೆ ಎರಡೂ ಇಲಾಖೆಗಳೂ ಹಾರಿಕೆಯ ಉತ್ತರ ನೀಡಿವೆ.

ಇದನ್ನೂ ಓದಿ: ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಆರ್‌ಟಿಐ ಕಾಯ್ದೆಯಡಿ ಇದರ ಬಗ್ಗೆ ಮಾಹಿತಿ ಕೋರಿದ್ದ ಸೌರವ್ ದಾಸ್ ಎಂಬುವವರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದು, ಆಪ್ ರೂಪಿಸಲು ಪ್ರಸ್ತಾವ ಸಲ್ಲಿಸಿದ್ದು ಯಾರು? ಅದಕ್ಕೆ ಅನುಮೋದನೆ ನೀಡಿದ್ದು ಯಾವತ್ತು? ಇದರಲ್ಲಿ ಭಾಗಿಯಾಗಿರುವ ಸಂಸ್ಥೆ, ವ್ಯಕ್ತಿಗಳು ಅಥವಾ ಸರ್ಕಾರದ ಇಲಾಖೆಯ ವಿವರ, ಇದನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಖಾಸಗೀ ವ್ಯಕ್ತಿಗಳ ನಡುವೆ ನಡೆದಿರುವ ಸಂವಹನದ ವಿವರಗಳನ್ನು ಒದಗಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಈ ಆಪ್ ರೂಪಿಸುವ ಕುರಿತ ಫೈಲ್ ನಮ್ಮ ಬಳಿ ಇಲ್ಲ ಎಂದು ರಾಷ್ಟ್ರೀಯ ಮಾಹಿತಿ ಕೇಂದ್ರ ಉತ್ತರಿಸಿತ್ತು. ಮಾಹಿತಿ ತಂತ್ರಜ್ಞಾನ ಇಲಾಖೆಯು ಈ ಅರ್ಜಿಯನ್ನು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ವರ್ಗಾಯಿಸಿತ್ತು. ಅಲ್ಲಿಯೂ ಇದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲವೆಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕಡ್ಡಾಯ ಕಾನೂನುಬಾಹಿರ – ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ

ನೀಡಬಹುದಾದ ಯಾವುದೇ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡಬಹುದು ಎಂದು ಮಾಹಿತಿ ಆಯೋಗವೇ ಹೇಳಿದ್ದು, ಈ ರೀತಿ ಹಾರಿಕೆಯ ಉತ್ತರ ನೀಡಿರುವ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಜೊತೆಗೆ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಆದರೂ ಸಾರ್ವಜನಿಕರ ಖಾಸಗೀ ಮಾಹಿತಿಗಳಿಗೆ ಜವಾಬ್ದಾರಿ ಯಾರು ಎಂಬ ಪ್ರಶ್ನೆ ಗಾಢವಾಗಿ ಕಾಡುತ್ತದೆ. ಈ ಹಿಂದೆ ಆಧಾರ್‌ ಕಾರ್ಡ್‌‌ಗೆ ಸಂಬಂಧಿಸಿದಂತೆ ಇದೇ ರೀತಿಯ ತೊಂದರೆ ಎದುರಾಗಿ, ಆಧಾರ್‌ ಮಾಹಿತಿಗಳು ಸುರಕ್ಷಿತವಲ್ಲ ಎಂದು ಹಲವು ಡಿಜಿಟಲ್ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವುದೆ ಕ್ರಮಗಳನ್ನು ಕೈಗೊಂಡಂತೆ ಕಾಣುತ್ತಿಲ್ಲ. ಹೀಗಿರುವಾಗ ಡಿಜಿಟಲ್ ಇಂಡಿಯಾ ಎಷ್ಟು ಸುರಕ್ಷಿತ ಎಂಬುದು ಮುಖ್ಯವಾಗಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಅಭಿವೃದ್ಧಿ ಯಾವತ್ತಿಗೂ ಮನುಷ್ಯನನ್ನು ಅಪಾಯಕ್ಕೆ ಸಿಲುಕಿಸುವಂತಿರಬಾರದು. ಆದರೆ ಇಂದು ಆಗುತ್ತಿರುವುದೇ ಬೇರೆ. ಮನುಷ್ಯ, ಅಭಿವೃದ್ಧಿಯ ಒಂದೊಂದೇ ಮೆಟ್ಟಿಲನ್ನು ಏರುತ್ತಾ ಹೋದಂತೆ ಅದರೊಂದಿಗಿನ ಅಪಾಯಗಳೂ ಒಂದೊಂದಾಗಿ ತೆರೆದುಕೊಳ್ಳುತ್ತಲೇ ಇವೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಂತೂ ನಾವು ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕು. ಆದರೆ ಸರ್ಕಾರದ ಇಂತಹ ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿಯ ಧೋರಣೆಯಿಂದ ಇದು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಆರೋಗ್ಯ ಸೇತು ಆಪ್ ಮತ್ತು ಈ ಹಿಂದಿನ ಆಧಾರ್‌ ಕಾರ್ಡ್‌.

ಇಂದು ನಾವು ಮತ್ತು ನಮ್ಮ ಮಾಹಿತಿಯನ್ನು ರಕ್ಷಿಸುವಲ್ಲಿ ನಿರಾಸಕ್ತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಂದೋಲನ ನಡೆಯಬೇಕಿದೆ. ಆದರೆ ಪಕ್ಷನಿಷ್ಟ ಮತ್ತು ವ್ಯಕ್ತಿನಿಷ್ಟ ಮಬ್ಬಕ್ತರಿಂದ ಇದು ಸಾಧ್ಯವಗುತ್ತಿಲ್ಲ. ಇಂದಿನ ಸೈಬರ್‌ ಯುಗದಲ್ಲಿ ನಾವು ಮತ್ತು ಮತ್ತು ನಮ್ಮ ಮಾಹಿತಿಗಳು ಸುರಕ್ಷಿತವಲ್ಲ ಎಂಬುದನ್ನು ಅರಿತಾಗ ಮಾತ್ರ ಮುಂದೆ ಸಂಭವಿಸಲಿರುವ ದೊಡ್ಡ ಅಪಾಯವನ್ನು ತಡೆಯಬಹುದು.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...