Homeಮುಖಪುಟಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

- Advertisement -
- Advertisement -

ಕೊರೊನಾ ನಿಯಂತ್ರಣ ಮತ್ತು ಮಾಹಿತಿಗಾಗಿ ಭಾರತದ ಜನತೆ ಬಳಸುತ್ತಿದ್ದ ಆರೋಗ್ಯ ಸೇತು ಆಪ್‌ ಅನ್ನು ಅಭಿವೃದ್ಧಿಪಡಿಸಿದವರು ಯಾರೆಂದು ತಿಳಿದಿಲ್ಲ ಎಂದು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹೇಳಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ಅದರ ನಿಯಂತ್ರಣಕ್ಕಾಗಿ ಸೋಂಕಿತರು ಮತ್ತು ಅವರೊಡನೆ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಮತ್ತು ಜಾಗೃತಿ ನೀಡುವುದಕ್ಕಾಗಿ ಅಭಿವೃದ್ಧಿಪಡಿಸಲಾಗಿದ್ದ ಆರೋಗ್ಯ ಸೇತು ಆಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಮಾಹಿತಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಈ  ಹಿಂದೆ ಸರ್ಕಾರವೇ, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಹಕಾರಿಯಾದ ಸಾಧನ ಎಂದು ಘೋಷಿಸಿತ್ತು. ಹಾಗಾಗಿ ಭಾರತದ ಕೋಟ್ಯಂತರ ಜನರು ಈ ಆಪ್‌ ಅನ್ನು ಬಳಸುತ್ತಿದ್ದಾರೆ. ಅದೂ ಅಲ್ಲದೇ ರೈಲುಗಳಲ್ಲಿ ಮತ್ತು ಸರ್ಕಾರಿ ಸಾರಿಗೆಗಳಲ್ಲಿ ಪ್ರಯಾಣಿಸಬೇಕೆಂದರೆ ಆರೋಗ್ಯ ಸೇತು ಆಪ್ ಖಡ್ಡಾಯ ಎಂದು ಸರ್ಕಾರವೇ ಹೇಳಿತ್ತು. ಆದರೆ ಈಗ ಏಕಾಏಕಿ ಇದರ ಬಗ್ಗೆ ಮಾಹಿತಿ ಇಲ್ಲ ಎನ್ನುವುದು ದೊಡ್ಡ ಆಘಾತವನ್ನುಂಟುಮಾಡಿದೆ.

ಈ ಆಪ್ ಬಳಸುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯೂ ಅದರಲ್ಲೇ ಅಡಕವಾಗಿರುತ್ತದೆ. ಈಗ ಇದನ್ನು ಅಭಿವೃದ್ಧಿಪಡಿಸಿದವರ ಬಗ್ಗೆ ಗೊತ್ತಿಲ್ಲ ಎನ್ನುವುದಾದರೆ ಈ ಮಾಹಿತಿಗಳು ಸುರಕ್ಷಿತವಾಗಿಲ್ಲ ಎಂದೇ ಅರ್ಥ. ಆದರೆ ಈ ಆಪ್‌ನಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇದನ್ನು ಅಭಿವೃದ್ಧಿಗೊಳಿಸಿದೆ ಎಂದು ನಮೂದಿಸಲಾಗಿದೆ. ಆದರೆ ಇದನ್ನು ಅಭಿವೃದ್ಧಿಪಡಿಸಿದವರು ಯಾರು ಎಂಬ ಪ್ರಶ್ನೆಗೆ ಎರಡೂ ಇಲಾಖೆಗಳೂ ಹಾರಿಕೆಯ ಉತ್ತರ ನೀಡಿವೆ.

ಇದನ್ನೂ ಓದಿ: ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಆರ್‌ಟಿಐ ಕಾಯ್ದೆಯಡಿ ಇದರ ಬಗ್ಗೆ ಮಾಹಿತಿ ಕೋರಿದ್ದ ಸೌರವ್ ದಾಸ್ ಎಂಬುವವರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದು, ಆಪ್ ರೂಪಿಸಲು ಪ್ರಸ್ತಾವ ಸಲ್ಲಿಸಿದ್ದು ಯಾರು? ಅದಕ್ಕೆ ಅನುಮೋದನೆ ನೀಡಿದ್ದು ಯಾವತ್ತು? ಇದರಲ್ಲಿ ಭಾಗಿಯಾಗಿರುವ ಸಂಸ್ಥೆ, ವ್ಯಕ್ತಿಗಳು ಅಥವಾ ಸರ್ಕಾರದ ಇಲಾಖೆಯ ವಿವರ, ಇದನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಖಾಸಗೀ ವ್ಯಕ್ತಿಗಳ ನಡುವೆ ನಡೆದಿರುವ ಸಂವಹನದ ವಿವರಗಳನ್ನು ಒದಗಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಈ ಆಪ್ ರೂಪಿಸುವ ಕುರಿತ ಫೈಲ್ ನಮ್ಮ ಬಳಿ ಇಲ್ಲ ಎಂದು ರಾಷ್ಟ್ರೀಯ ಮಾಹಿತಿ ಕೇಂದ್ರ ಉತ್ತರಿಸಿತ್ತು. ಮಾಹಿತಿ ತಂತ್ರಜ್ಞಾನ ಇಲಾಖೆಯು ಈ ಅರ್ಜಿಯನ್ನು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ವರ್ಗಾಯಿಸಿತ್ತು. ಅಲ್ಲಿಯೂ ಇದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲವೆಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕಡ್ಡಾಯ ಕಾನೂನುಬಾಹಿರ – ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ

ನೀಡಬಹುದಾದ ಯಾವುದೇ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡಬಹುದು ಎಂದು ಮಾಹಿತಿ ಆಯೋಗವೇ ಹೇಳಿದ್ದು, ಈ ರೀತಿ ಹಾರಿಕೆಯ ಉತ್ತರ ನೀಡಿರುವ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಜೊತೆಗೆ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಆದರೂ ಸಾರ್ವಜನಿಕರ ಖಾಸಗೀ ಮಾಹಿತಿಗಳಿಗೆ ಜವಾಬ್ದಾರಿ ಯಾರು ಎಂಬ ಪ್ರಶ್ನೆ ಗಾಢವಾಗಿ ಕಾಡುತ್ತದೆ. ಈ ಹಿಂದೆ ಆಧಾರ್‌ ಕಾರ್ಡ್‌‌ಗೆ ಸಂಬಂಧಿಸಿದಂತೆ ಇದೇ ರೀತಿಯ ತೊಂದರೆ ಎದುರಾಗಿ, ಆಧಾರ್‌ ಮಾಹಿತಿಗಳು ಸುರಕ್ಷಿತವಲ್ಲ ಎಂದು ಹಲವು ಡಿಜಿಟಲ್ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವುದೆ ಕ್ರಮಗಳನ್ನು ಕೈಗೊಂಡಂತೆ ಕಾಣುತ್ತಿಲ್ಲ. ಹೀಗಿರುವಾಗ ಡಿಜಿಟಲ್ ಇಂಡಿಯಾ ಎಷ್ಟು ಸುರಕ್ಷಿತ ಎಂಬುದು ಮುಖ್ಯವಾಗಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಅಭಿವೃದ್ಧಿ ಯಾವತ್ತಿಗೂ ಮನುಷ್ಯನನ್ನು ಅಪಾಯಕ್ಕೆ ಸಿಲುಕಿಸುವಂತಿರಬಾರದು. ಆದರೆ ಇಂದು ಆಗುತ್ತಿರುವುದೇ ಬೇರೆ. ಮನುಷ್ಯ, ಅಭಿವೃದ್ಧಿಯ ಒಂದೊಂದೇ ಮೆಟ್ಟಿಲನ್ನು ಏರುತ್ತಾ ಹೋದಂತೆ ಅದರೊಂದಿಗಿನ ಅಪಾಯಗಳೂ ಒಂದೊಂದಾಗಿ ತೆರೆದುಕೊಳ್ಳುತ್ತಲೇ ಇವೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಂತೂ ನಾವು ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕು. ಆದರೆ ಸರ್ಕಾರದ ಇಂತಹ ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿಯ ಧೋರಣೆಯಿಂದ ಇದು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಆರೋಗ್ಯ ಸೇತು ಆಪ್ ಮತ್ತು ಈ ಹಿಂದಿನ ಆಧಾರ್‌ ಕಾರ್ಡ್‌.

ಇಂದು ನಾವು ಮತ್ತು ನಮ್ಮ ಮಾಹಿತಿಯನ್ನು ರಕ್ಷಿಸುವಲ್ಲಿ ನಿರಾಸಕ್ತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಂದೋಲನ ನಡೆಯಬೇಕಿದೆ. ಆದರೆ ಪಕ್ಷನಿಷ್ಟ ಮತ್ತು ವ್ಯಕ್ತಿನಿಷ್ಟ ಮಬ್ಬಕ್ತರಿಂದ ಇದು ಸಾಧ್ಯವಗುತ್ತಿಲ್ಲ. ಇಂದಿನ ಸೈಬರ್‌ ಯುಗದಲ್ಲಿ ನಾವು ಮತ್ತು ಮತ್ತು ನಮ್ಮ ಮಾಹಿತಿಗಳು ಸುರಕ್ಷಿತವಲ್ಲ ಎಂಬುದನ್ನು ಅರಿತಾಗ ಮಾತ್ರ ಮುಂದೆ ಸಂಭವಿಸಲಿರುವ ದೊಡ್ಡ ಅಪಾಯವನ್ನು ತಡೆಯಬಹುದು.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...