Homeಮುಖಪುಟಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಆರೋಗ್ಯ ಸೇತು ಆಪ್ ಕುರಿತ ಮಾಹಿತಿ ಇಲ್ಲ: ಕೇಂದ್ರ ಸರ್ಕಾರಕ್ಕೆ ನೋಟಿಸ್!

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

- Advertisement -
- Advertisement -

ಕೊರೊನಾ ನಿಯಂತ್ರಣ ಮತ್ತು ಮಾಹಿತಿಗಾಗಿ ಭಾರತದ ಜನತೆ ಬಳಸುತ್ತಿದ್ದ ಆರೋಗ್ಯ ಸೇತು ಆಪ್‌ ಅನ್ನು ಅಭಿವೃದ್ಧಿಪಡಿಸಿದವರು ಯಾರೆಂದು ತಿಳಿದಿಲ್ಲ ಎಂದು ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಹೇಳಿದೆ.

ಕೊರೊನಾ ಬಿಕ್ಕಟ್ಟಿನ ನಡುವೆ ಅದರ ನಿಯಂತ್ರಣಕ್ಕಾಗಿ ಸೋಂಕಿತರು ಮತ್ತು ಅವರೊಡನೆ ಸಂಪರ್ಕದಲ್ಲಿರುವವರ ಬಗ್ಗೆ ಮಾಹಿತಿ ಪಡೆಯುವುದಕ್ಕೆ ಮತ್ತು ಜಾಗೃತಿ ನೀಡುವುದಕ್ಕಾಗಿ ಅಭಿವೃದ್ಧಿಪಡಿಸಲಾಗಿದ್ದ ಆರೋಗ್ಯ ಸೇತು ಆಪ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಬಳಿ ಮಾಹಿತಿ ಇಲ್ಲ ಎಂದು ಆರ್‌ಟಿಐ ಮಾಹಿತಿಯಿಂದ ಬಹಿರಂಗವಾಗಿದೆ.

ಈ ಆಪ್‌ ಅಭಿವೃದ್ಧಿಯ ಬಗ್ಗೆ ಮಾಹಿತಿ ಇಲ್ಲ ಎಂದಿರುವ ಕೇಂದ್ರ ಸರ್ಕಾರದ ಅಧೀನ ಇಲಾಖೆಗಳು ಕೋಟ್ಯಂತರ ಭಾರತೀಯರ ಖಾಸಗೀ ಮಾಹಿತಿಯ ಬಗ್ಗೆ ನಿರ್ಲಕ್ಷ್ಯತೆ ತೋರುತ್ತಿದೆ.

ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ಈ  ಹಿಂದೆ ಸರ್ಕಾರವೇ, ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಸಹಕಾರಿಯಾದ ಸಾಧನ ಎಂದು ಘೋಷಿಸಿತ್ತು. ಹಾಗಾಗಿ ಭಾರತದ ಕೋಟ್ಯಂತರ ಜನರು ಈ ಆಪ್‌ ಅನ್ನು ಬಳಸುತ್ತಿದ್ದಾರೆ. ಅದೂ ಅಲ್ಲದೇ ರೈಲುಗಳಲ್ಲಿ ಮತ್ತು ಸರ್ಕಾರಿ ಸಾರಿಗೆಗಳಲ್ಲಿ ಪ್ರಯಾಣಿಸಬೇಕೆಂದರೆ ಆರೋಗ್ಯ ಸೇತು ಆಪ್ ಖಡ್ಡಾಯ ಎಂದು ಸರ್ಕಾರವೇ ಹೇಳಿತ್ತು. ಆದರೆ ಈಗ ಏಕಾಏಕಿ ಇದರ ಬಗ್ಗೆ ಮಾಹಿತಿ ಇಲ್ಲ ಎನ್ನುವುದು ದೊಡ್ಡ ಆಘಾತವನ್ನುಂಟುಮಾಡಿದೆ.

ಈ ಆಪ್ ಬಳಸುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯೂ ಅದರಲ್ಲೇ ಅಡಕವಾಗಿರುತ್ತದೆ. ಈಗ ಇದನ್ನು ಅಭಿವೃದ್ಧಿಪಡಿಸಿದವರ ಬಗ್ಗೆ ಗೊತ್ತಿಲ್ಲ ಎನ್ನುವುದಾದರೆ ಈ ಮಾಹಿತಿಗಳು ಸುರಕ್ಷಿತವಾಗಿಲ್ಲ ಎಂದೇ ಅರ್ಥ. ಆದರೆ ಈ ಆಪ್‌ನಲ್ಲಿ ರಾಷ್ಟ್ರೀಯ ಮಾಹಿತಿ ಕೇಂದ್ರ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇದನ್ನು ಅಭಿವೃದ್ಧಿಗೊಳಿಸಿದೆ ಎಂದು ನಮೂದಿಸಲಾಗಿದೆ. ಆದರೆ ಇದನ್ನು ಅಭಿವೃದ್ಧಿಪಡಿಸಿದವರು ಯಾರು ಎಂಬ ಪ್ರಶ್ನೆಗೆ ಎರಡೂ ಇಲಾಖೆಗಳೂ ಹಾರಿಕೆಯ ಉತ್ತರ ನೀಡಿವೆ.

ಇದನ್ನೂ ಓದಿ: ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಆರ್‌ಟಿಐ ಕಾಯ್ದೆಯಡಿ ಇದರ ಬಗ್ಗೆ ಮಾಹಿತಿ ಕೋರಿದ್ದ ಸೌರವ್ ದಾಸ್ ಎಂಬುವವರು ಕೇಂದ್ರ ಮಾಹಿತಿ ಆಯೋಗಕ್ಕೆ ದೂರು ನೀಡಿದ್ದು, ಆಪ್ ರೂಪಿಸಲು ಪ್ರಸ್ತಾವ ಸಲ್ಲಿಸಿದ್ದು ಯಾರು? ಅದಕ್ಕೆ ಅನುಮೋದನೆ ನೀಡಿದ್ದು ಯಾವತ್ತು? ಇದರಲ್ಲಿ ಭಾಗಿಯಾಗಿರುವ ಸಂಸ್ಥೆ, ವ್ಯಕ್ತಿಗಳು ಅಥವಾ ಸರ್ಕಾರದ ಇಲಾಖೆಯ ವಿವರ, ಇದನ್ನು ಅಭಿವೃದ್ಧಿಪಡಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಖಾಸಗೀ ವ್ಯಕ್ತಿಗಳ ನಡುವೆ ನಡೆದಿರುವ ಸಂವಹನದ ವಿವರಗಳನ್ನು ಒದಗಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

ಆದರೆ ಈ ಆಪ್ ರೂಪಿಸುವ ಕುರಿತ ಫೈಲ್ ನಮ್ಮ ಬಳಿ ಇಲ್ಲ ಎಂದು ರಾಷ್ಟ್ರೀಯ ಮಾಹಿತಿ ಕೇಂದ್ರ ಉತ್ತರಿಸಿತ್ತು. ಮಾಹಿತಿ ತಂತ್ರಜ್ಞಾನ ಇಲಾಖೆಯು ಈ ಅರ್ಜಿಯನ್ನು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ವರ್ಗಾಯಿಸಿತ್ತು. ಅಲ್ಲಿಯೂ ಇದಕ್ಕೆ ಸಂಬಂಧಿಸಿದ ಮಾಹಿತಿ ಇಲ್ಲವೆಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆಪ್ ಕಡ್ಡಾಯ ಕಾನೂನುಬಾಹಿರ – ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ

ನೀಡಬಹುದಾದ ಯಾವುದೇ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆಯಡಿ ನೀಡಬಹುದು ಎಂದು ಮಾಹಿತಿ ಆಯೋಗವೇ ಹೇಳಿದ್ದು, ಈ ರೀತಿ ಹಾರಿಕೆಯ ಉತ್ತರ ನೀಡಿರುವ ಇಲಾಖೆ ಮತ್ತು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ಜೊತೆಗೆ ಮುಖ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಮತ್ತು ರಾಷ್ಟ್ರೀಯ-ಇ-ಆಡಳಿತ ವಿಭಾಗಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಆದರೂ ಸಾರ್ವಜನಿಕರ ಖಾಸಗೀ ಮಾಹಿತಿಗಳಿಗೆ ಜವಾಬ್ದಾರಿ ಯಾರು ಎಂಬ ಪ್ರಶ್ನೆ ಗಾಢವಾಗಿ ಕಾಡುತ್ತದೆ. ಈ ಹಿಂದೆ ಆಧಾರ್‌ ಕಾರ್ಡ್‌‌ಗೆ ಸಂಬಂಧಿಸಿದಂತೆ ಇದೇ ರೀತಿಯ ತೊಂದರೆ ಎದುರಾಗಿ, ಆಧಾರ್‌ ಮಾಹಿತಿಗಳು ಸುರಕ್ಷಿತವಲ್ಲ ಎಂದು ಹಲವು ಡಿಜಿಟಲ್ ತಜ್ಞರು ಅಭಿಪ್ರಾಯಪಟ್ಟಿದ್ದರು. ಆದರೆ ಇದಕ್ಕೆ ಕೇಂದ್ರ ಸರ್ಕಾರ ಯಾವುದೆ ಕ್ರಮಗಳನ್ನು ಕೈಗೊಂಡಂತೆ ಕಾಣುತ್ತಿಲ್ಲ. ಹೀಗಿರುವಾಗ ಡಿಜಿಟಲ್ ಇಂಡಿಯಾ ಎಷ್ಟು ಸುರಕ್ಷಿತ ಎಂಬುದು ಮುಖ್ಯವಾಗಿದೆ.

ಇದನ್ನೂ ಓದಿ: ಆರೋಗ್ಯ ಸೇತು ಆ್ಯಪ್ ಅತ್ಯಾಧುನಿಕ ಕಣ್ಗಾವಲು ವ್ಯವಸ್ಥೆಯಾಗಿದೆ: ರಾಹುಲ್‌ ಗಾಂಧಿ

ಅಭಿವೃದ್ಧಿ ಯಾವತ್ತಿಗೂ ಮನುಷ್ಯನನ್ನು ಅಪಾಯಕ್ಕೆ ಸಿಲುಕಿಸುವಂತಿರಬಾರದು. ಆದರೆ ಇಂದು ಆಗುತ್ತಿರುವುದೇ ಬೇರೆ. ಮನುಷ್ಯ, ಅಭಿವೃದ್ಧಿಯ ಒಂದೊಂದೇ ಮೆಟ್ಟಿಲನ್ನು ಏರುತ್ತಾ ಹೋದಂತೆ ಅದರೊಂದಿಗಿನ ಅಪಾಯಗಳೂ ಒಂದೊಂದಾಗಿ ತೆರೆದುಕೊಳ್ಳುತ್ತಲೇ ಇವೆ. ಅದರಲ್ಲೂ ಇಂದಿನ ಡಿಜಿಟಲ್ ಯುಗದಲ್ಲಂತೂ ನಾವು ಪ್ರತಿಯೊಂದು ಹೆಜ್ಜೆಯನ್ನೂ ಎಚ್ಚರಿಕೆಯಿಂದ ಇಡಬೇಕು. ಆದರೆ ಸರ್ಕಾರದ ಇಂತಹ ಅವೈಜ್ಞಾನಿಕ ಮತ್ತು ಬೇಕಾಬಿಟ್ಟಿಯ ಧೋರಣೆಯಿಂದ ಇದು ಸಾಧ್ಯವಾಗುತ್ತಿಲ್ಲ. ಇದಕ್ಕೆ ಸ್ಪಷ್ಟ ಉದಾಹರಣೆ ಈ ಆರೋಗ್ಯ ಸೇತು ಆಪ್ ಮತ್ತು ಈ ಹಿಂದಿನ ಆಧಾರ್‌ ಕಾರ್ಡ್‌.

ಇಂದು ನಾವು ಮತ್ತು ನಮ್ಮ ಮಾಹಿತಿಯನ್ನು ರಕ್ಷಿಸುವಲ್ಲಿ ನಿರಾಸಕ್ತಿ ತೋರುತ್ತಿರುವ ಸರ್ಕಾರದ ವಿರುದ್ಧ ಆಂದೋಲನ ನಡೆಯಬೇಕಿದೆ. ಆದರೆ ಪಕ್ಷನಿಷ್ಟ ಮತ್ತು ವ್ಯಕ್ತಿನಿಷ್ಟ ಮಬ್ಬಕ್ತರಿಂದ ಇದು ಸಾಧ್ಯವಗುತ್ತಿಲ್ಲ. ಇಂದಿನ ಸೈಬರ್‌ ಯುಗದಲ್ಲಿ ನಾವು ಮತ್ತು ಮತ್ತು ನಮ್ಮ ಮಾಹಿತಿಗಳು ಸುರಕ್ಷಿತವಲ್ಲ ಎಂಬುದನ್ನು ಅರಿತಾಗ ಮಾತ್ರ ಮುಂದೆ ಸಂಭವಿಸಲಿರುವ ದೊಡ್ಡ ಅಪಾಯವನ್ನು ತಡೆಯಬಹುದು.


ಇದನ್ನೂ ಓದಿ: ದೇಶಪ್ರೇಮ ಇದ್ದರೆ, ಆರೋಗ್ಯ ಸೇತು ಸೋರ್ಸ್‌ ಕೋಡ್‌ ಪ್ರಕಟಿಸಿ | ಭಾರತ ಸರ್ಕಾರಕ್ಕೆ ಹ್ಯಾಕರ್‌ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...