Homeಮುಖಪುಟಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ಈ ವಾಟ್ಸಾಪ್ ಚಾಟ್‌ಗಳನ್ನು ಮುಂಬೈ ಪೊಲೀಸರು ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣದ ತನಿಖೆಯ ವೇಳೆ ಹೊರಗೆಳೆದಿದ್ದರು.

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯು ದೇಶದ ಗೌಪ್ಯ ಮತ್ತು ಸೂಕ್ಷ್ಮ ಮಾಹಿತಿ ಸೋರಿಕೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ವಾಟ್ಸಾಪ್ ಚಾಟ್‌ಗಳ ಬಗ್ಗೆ ಕೇಂದ್ರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ ಮಂಗಳವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದರು.

ಫೆಬ್ರವರಿ 2019 ರ ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ, ಫೆಬ್ರವರಿ 26, 2019 ರಂದು ಬಾಲಕೋಟ್‌‌ನ ಭಯೋತ್ಪಾದಕ ಶಿಬಿರದ ಮೇಲೆ ಭಾರತೀಯ ಏರ್‌ ಫೋರ್ಸ್ ಬಾಂಬ್ ಸ್ಫೋಟಿಸಿದೆ ಎನ್ನಲಾದ ಈ ಯೋಜನೆಯು ಗೌಪ್ಯವಾಗಿತ್ತು ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅರ್ನಾಬ್‌‌‌‌‌ ಮತ್ತು ಆಗಿನ ಬಾರ್ಕ್‌‌ನ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ನಡುವೆ ನಡೆದಿರುವ ವಾಟ್ಸಾಪ್ ಸಂಭಾಷಣೆಯಲ್ಲಿ, ಭಾರತೀಯ ವಾಯುಸೇನೆ ನಡೆಸಲಿರುವ ಬಾಲಕೋಟ್ ವಾಯುದಾಳಿಯ ಬಗ್ಗೆ ದಾಳಿಗಿಂತಲೂ ಮೂರು ದಿನ ಮೊದಲೇ ಚರ್ಚಿಸಿದ್ದರು. ಅಲ್ಲದೇ ಪುಲ್ವಾಮ ದಾಳಿ ನಡೆದಾಗ ಅರ್ನಾಬ್ ಸಂಭ್ರಮಿಸಿದ್ದರು ಎಂದು ಹೇಳಲಾಗಿದೆ. ಇದು ದೇಶಾದ್ಯಂತ ಕೋಲಾಹಲ ಸೃಷ್ಟಿಸಿತ್ತು.

ಈ ವಾಟ್ಸಾಪ್ ಚಾಟ್‌ಗಳನ್ನು ಮುಂಬೈ ಪೊಲೀಸರು ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣದ ತನಿಖೆಯ ವೇಳೆ ಹೊರಗೆಳೆದಿದ್ದರು.

ಇದನ್ನೂ ಓದಿ: ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ವಾಟ್ಸಾಪ್ ಚಾಟ್ ಪ್ರಕರಣದ ಬಗ್ಗೆ ವಿವರಗಳನ್ನು ಕೋರಿದ್ದ ಸಂಸತ್ತಿನ ಕನಿಷ್ಠ ಆರು ಸದಸ್ಯರಿಗೆ ಸಚಿವ ಜಿ.ಕಿಶನ್ ರೆಡ್ಡಿ ಲಿಖಿತ ಪ್ರತಿಕ್ರಿಯೆ ನೀಡಿದ್ದು, “ಅಂತಹ ಯಾವುದೇ ಮಾಹಿತಿಯು ಸರ್ಕಾರದ ಗಮನಕ್ಕೆ ಬಂದಿಲ್ಲ” ಎಂದಿ‌ದ್ದಾರೆ.

ದೇಶದ ಹಿತಾಸಕ್ತಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯ ಸೋರಿಕೆ ದೇಶದ ಭದ್ರತೆಯ ಉಲ್ಲಂಘನೆಯಾಗಿದೆ ಎಂದು ಅರ್ನಾಬ್ ಮತ್ತು ಬಾರ್ಕ್‌‌ನ ಮಾಜಿ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ಅವರ ನಡುವಿನ ಉದ್ದೇಶಿತ ಚಾಟ್‌ಗಳ ಕುರಿತು ತನಿಖೆ ನಡೆಸಬೇಕೆಂದು ಆಡಳಿತಾರೂಢ ಮಹಾರಾಷ್ಟ್ರ ವಿಕಾಸ್ ಅಘಾಡಿ ಮತ್ತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಫೆಬ್ರವರಿ 2019 ರ ಬಾಲಕೋಟ್ ವೈಮಾನಿಕ ದಾಳಿಯ ವಿವರಗಳ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಗಳನ್ನು ತೆಗೆದುಹಾಕುವ ಕೇಂದ್ರದ ಕ್ರಮಗಳನ್ನು ಒಳಗೊಂಡಿದ್ದ ವಾಟ್ಸಾಪ್ ಸಂಭಾಷಣೆಯ ಪ್ರತಿ ಕೂಡ ಟಿಆರ್‌ಪಿ ಹಗರಣದಲ್ಲಿ ಮುಂಬೈ ಪೊಲೀಸರು ಸಲ್ಲಿಸಿದ್ದ 500 ಪುಟಗಳ ಚಾರ್ಜ್‌ಶೀಟ್‌ನ ಒಂದು ಭಾಗವಾಗಿತ್ತು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ರಾಷ್ಟ್ರೀಯ ಭದ್ರತೆಯ ಉಲ್ಲಂಘನೆ ಎಂದು ಕರೆದು ಜಂಟಿ ಸಂಸದೀಯ ಸಮಿತಿ ಪ್ರಕರಣದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿತು. ದೇಶದ ಬಗೆಗಿನ ಉನ್ನತ ರಹಸ್ಯ ಮಾಹಿತಿಯನ್ನು ಸೋರಿಕೆ ಮಾಡುವುದು ಅಪರಾಧ. ಅಂತಹ ಕೃತ್ಯಕ್ಕೆ ಕಾರಣರಾದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ರಾಹುಲ್ ಗಾಂಧಿ ಕೇಂದ್ರಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...