Homeಕರೋನಾ ತಲ್ಲಣಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ಮಾಹಿತಿ ಇಲ್ಲದೆ ಇರುವುದರಿಂದ ಪರಿಹಾರ ಒದಗಿಸುವ ಪ್ರಶ್ನೆಯು ಇಲ್ಲ ಎಂದಿದೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ, ಆದ್ದರಿಂದ ಮೃತಪಟ್ಟವರಿಗೆ ಪರಿಹಾರ ಒದಗಿಸುವ ಪ್ರಶ್ನೆಯು ಏಳುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಸಂಸತ್ತಿಗೆ ತಿಳಿಸಿದೆ.

ಈ ಕುರಿತು ಪ್ರಶ್ನೆಯನ್ನು ಸದಸ್ಯರೊಬ್ಬರು ಕೇಳಿದ್ದು, ಲಭ್ಯವಿದ್ದರೆ ವಲಸಿಗರ ರಾಜ್ಯವಾರು ಮಾಹಿತಿಯನ್ನೂ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: ಯಾವೊಬ್ಬ ವಲಸೆ ಕಾರ್ಮಿಕರೂ ಆಹಾರವಿಲ್ಲದೆ ಸಾವನ್ನಪ್ಪಿಲ್ಲ: ನಳಿನ್ ಕುಮಾರ್‌ ಕಟೀಲ್

ವಲಸಿಗ ಕಾರ್ಮಿಕರು ಲಾಕ್‌ಡೌನ್ ವೇಳೆ ಎದುರಿಸಬಹುದಾದ ಸಂಕಷ್ಟವನ್ನು ಅಂದಾಜಿಸಲು ಕೇಂದ್ರ ಸರ್ಕಾರ ವಿಫಲವಾಗಿತ್ತೇ ಎಂಬ ಕುರಿತಾದ ಪ್ರಶ್ನಗೆ ಉತ್ತರಿಸಿದ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್, “ಕೊರೊನಾ ಸಮಸ್ಯೆ ಹಾಗೂ ಲಾಕ್‌ಡೌನ್‍‌ನಿಂದಾಗಿ ಎದುರಾದ ಸಂಕಷ್ಟಗಳಿಗೆ ಕೇಂದ್ರ, ರಾಜ್ಯ ಸರಕಾರಗಳು, ಸ್ಥಳೀಯಾಡಳಿತ ಸಂಸ್ಥೆಗಳು, ವೈದ್ಯಕೀಯ ಸಿಬ್ಬಂದಿ, ಪೌರ ಕಾರ್ಮಿಕರು ಹಾಗೂ ಸರಕಾರೇತರ ಸಂಘಟನೆಗಳು ಸ್ಪಂದಿಸಿವೆ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಕೇವಲ ಕೆಲವೆ ಗಂಟೆಗಳ ಅಂತರದಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ ಪರಿಣಾಮದಿಂದಾಗಿ ಕೋಟ್ಯಾಂತರ ವಲಸೆ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿ ತಮ್ಮ ಊರುಗಳಿಗೆ ತಲುಪಲು ಹರಸಾಹಸ ಪಡುವಂತಾಗಿತ್ತು.

ಇದರ ನಂತರ ದೇಶದ ಮಹಾವಲಸೆ ಪ್ರಾರಂಭವಾಗಿ ನೂರಾರು ಮಂದಿ ವಲಸೆ ಕಾರ್ಮಿಕರು ದೇಶದ ಹೆದ್ದಾರಿಗಳಲ್ಲಿ, ರೈಲುಗಳಲ್ಲಿ, ರೈಲಿನ ಹಳಿಗಳಲ್ಲಿ, ಅಫಘಾತ, ದಣಿವು ಹಾಗೂ ಹಸಿವಿನಿಂದ ಪ್ರಾಣ ಬಿಡುವಂತಾಯಿತು.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...