Homeಮುಖಪುಟಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ದಾಹೋದ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಪರಾಧಿಗಳ ಶರಣಾಗತಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.

ಅಪರಾಧಿಗಳಿಗೆ ಮತ್ತೆ ಜೈಲಿಗೆ ಹೋಗಲು ಆದೇಶಿಸಿದ ಬಳಿಕ ಶಾಂತಿ ಕಾಪಾಡಲು ಅಪರಾಧಿಗಳು ವಾಸಿಸುವ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಪರಾಧಿಗಳು  ತಲೆಮರೆಸಿಕೊಂಡಿಲ್ಲ ಮತ್ತು ಅವರಲ್ಲಿ ಕೆಲವರು ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ.

2002ರಲ್ಲಿ ಗೋಧ್ರಾದಲ್ಲಿ ರೈಲು ಸುಟ್ಟ ಘಟನೆಯ ನಂತರ ನಡೆದಿದ್ದ ಕೋಮು ಗಲಭೆ ವೇಳೆ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. 2022ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಹೇಳಿದೆ.

ಈ ಬಗ್ಗೆ ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಪ್ರತಿಕ್ರಿಯಿಸಿದ್ದು, ಶರಣಾಗತಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿ ನಮಗೆ ತಲುಪಿಲ್ಲ. ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ನಿವಾಸಿಗಳಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ತೀರ್ಪು ಹೊರಬೀಳುವ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಡೀ ರಂಧಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳು?

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಅಪರಾಧಿಗಳ ಮನೆಗಳು ಬಾಗಿಲು ಮುಚ್ಚಿಕೊಂಡಿದೆ ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರದ ಅಪರಾಧಿ ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದರು. ಆದರೆ ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು ಸ್ಥಳೀಯರು  ಹೇಳಿದ್ದರು.

ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿರಲಿಲ್ಲ ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...