Homeಮುಖಪುಟಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ದಾಹೋದ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಪರಾಧಿಗಳ ಶರಣಾಗತಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.

ಅಪರಾಧಿಗಳಿಗೆ ಮತ್ತೆ ಜೈಲಿಗೆ ಹೋಗಲು ಆದೇಶಿಸಿದ ಬಳಿಕ ಶಾಂತಿ ಕಾಪಾಡಲು ಅಪರಾಧಿಗಳು ವಾಸಿಸುವ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಪರಾಧಿಗಳು  ತಲೆಮರೆಸಿಕೊಂಡಿಲ್ಲ ಮತ್ತು ಅವರಲ್ಲಿ ಕೆಲವರು ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ.

2002ರಲ್ಲಿ ಗೋಧ್ರಾದಲ್ಲಿ ರೈಲು ಸುಟ್ಟ ಘಟನೆಯ ನಂತರ ನಡೆದಿದ್ದ ಕೋಮು ಗಲಭೆ ವೇಳೆ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. 2022ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಹೇಳಿದೆ.

ಈ ಬಗ್ಗೆ ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಪ್ರತಿಕ್ರಿಯಿಸಿದ್ದು, ಶರಣಾಗತಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿ ನಮಗೆ ತಲುಪಿಲ್ಲ. ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ನಿವಾಸಿಗಳಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ತೀರ್ಪು ಹೊರಬೀಳುವ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಡೀ ರಂಧಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳು?

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಅಪರಾಧಿಗಳ ಮನೆಗಳು ಬಾಗಿಲು ಮುಚ್ಚಿಕೊಂಡಿದೆ ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರದ ಅಪರಾಧಿ ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದರು. ಆದರೆ ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು ಸ್ಥಳೀಯರು  ಹೇಳಿದ್ದರು.

ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿರಲಿಲ್ಲ ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...