Homeಮುಖಪುಟಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

ಬಿಲ್ಕಿಸ್‌ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪರಾಧಿಗಳ ಶರಣಾಗತಿ ಬಗ್ಗೆ ಮಾಹಿತಿ ಇಲ್ಲ; ದಾಹೋದ್‌ ಎಸ್ಪಿ

- Advertisement -
- Advertisement -

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಕುಟುಂಬಸ್ಥರ ಕೊಲೆ ಪ್ರಕರಣದಲ್ಲಿ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ನಿರ್ಧಾರವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ ನಂತರ ದಾಹೋದ್‌ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅಪರಾಧಿಗಳ ಶರಣಾಗತಿ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.

ಅಪರಾಧಿಗಳಿಗೆ ಮತ್ತೆ ಜೈಲಿಗೆ ಹೋಗಲು ಆದೇಶಿಸಿದ ಬಳಿಕ ಶಾಂತಿ ಕಾಪಾಡಲು ಅಪರಾಧಿಗಳು ವಾಸಿಸುವ ಪ್ರದೇಶದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಅಪರಾಧಿಗಳು  ತಲೆಮರೆಸಿಕೊಂಡಿಲ್ಲ ಮತ್ತು ಅವರಲ್ಲಿ ಕೆಲವರು ಸಂಬಂಧಿಕರನ್ನು ಭೇಟಿ ಮಾಡಲು ಹೋಗಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಹೇಳಿದ್ದಾರೆ.

2002ರಲ್ಲಿ ಗೋಧ್ರಾದಲ್ಲಿ ರೈಲು ಸುಟ್ಟ ಘಟನೆಯ ನಂತರ ನಡೆದಿದ್ದ ಕೋಮು ಗಲಭೆ ವೇಳೆ ಐದು ತಿಂಗಳ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆದರೆ ಆಕೆಯ ಮೂರು ವರ್ಷದ ಮಗಳು ಮತ್ತು ಇತರ ಆರು ಕುಟುಂಬ ಸದಸ್ಯರನ್ನು ಹತ್ಯೆ ಮಾಡಲಾಗಿತ್ತು. ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು 11 ಅಪರಾಧಿಗಳಿಗೆ ನೀಡಲಾದ ವಿನಾಯಿತಿಯನ್ನು ಸುಪ್ರೀಂಕೋರ್ಟ್ ಸೋಮವಾರ ರದ್ದುಗೊಳಿಸಿದೆ. 2022ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾದ ಎಲ್ಲಾ ಅಪರಾಧಿಗಳನ್ನು ಎರಡು ವಾರಗಳಲ್ಲಿ ಶರಣಾಗುವಂತೆ ಹೇಳಿದೆ.

ಈ ಬಗ್ಗೆ ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ಬಲರಾಮ್ ಮೀನಾ ಪ್ರತಿಕ್ರಿಯಿಸಿದ್ದು, ಶರಣಾಗತಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಇಲ್ಲ. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿ ನಮಗೆ ತಲುಪಿಲ್ಲ. ಶಿಕ್ಷೆಗೊಳಗಾದವರು ಸಿಂಗವಾಡ್ ತಾಲೂಕಿನ ನಿವಾಸಿಗಳಾಗಿದ್ದು, ಸೋಮವಾರ ಬೆಳಗ್ಗೆಯಿಂದಲೇ ತೀರ್ಪು ಹೊರಬೀಳುವ ಮುನ್ನ ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಕೋಮು ಸಂಘರ್ಷ ನಡೆಯದಂತೆ ನೋಡಿಕೊಳ್ಳಲು ಪೊಲೀಸರನ್ನು ನಿಯೋಜಿಸಲಾಗಿದೆ. ಇಡೀ ರಂಧಿಕ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ತಲೆಮರೆಸಿಕೊಂಡಿರುವ ಆರೋಪಿಗಳು?

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳಲ್ಲಿ ಒಂಬತ್ತು ಮಂದಿ ವಾಸಿಸುತ್ತಿದ್ದ ಗುಜರಾತ್‌ನ ದೋಹದ್ ಜಿಲ್ಲೆಯ ರಣಧಿಕ್‌ಪುರ್ ಮತ್ತು ಸಿಂಗ್‌ವಾಡ್ ಅವಳಿ ಗ್ರಾಮಗಳಲ್ಲಿ ಮನೆಗಳಿಗೆ ಬೀಗ ಹಾಕಲಾಗಿದೆ. ಅಲ್ಲಿಗೆ ತೆರಳಿದರೆ ಅಪರಾಧಿಗಳ ಮನೆಗಳು ಬಾಗಿಲು ಮುಚ್ಚಿಕೊಂಡಿದೆ ಮತ್ತು ಭದ್ರತೆಗೆ ನಿಯೋಜಿಸಿರುವ ಪೊಲೀಸ್ ಸಿಬ್ಬಂದಿ ನಮ್ಮನ್ನು ಸ್ವಾಗತಿಸುತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಸುಪ್ರೀಂಕೋರ್ಟ್‌ ತೀರ್ಪಿನ ಬೆನ್ನಲ್ಲೇ ನಾವು ಅಪರಾಧಿಗಳು ವಾಸಿಸುತ್ತಿದ್ದ ಗ್ರಾಮಕ್ಕೆ ತೆರಳಿದ್ದೆವು. ಆದರೆ, ಅಲ್ಲಿದ್ದ ಅವರ ಸಂಬಂಧಿಕರು 9 ಅಪರಾಧಿಗಳು ಎಲ್ಲಿದ್ದಾರೆ ಎಂಬ ಮಾಹಿತಿ ಬಿಟ್ಟುಕೊಡಲು ನಿರಾಕರಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿತ್ತು.

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರದ ಅಪರಾಧಿ ರಾಧೇಶ್ಯಾಮ್ ಶಾ ಕಳೆದ 15 ತಿಂಗಳಿಂದ ಮನೆಗೆ ಬಂದಿಲ್ಲ ಎಂದು ಆತನ ತಂದೆ ಭಗವಾನ್‌ದಾಸ್ ಶಾ ಹೇಳಿದ್ದರು. ಆದರೆ ರಾಧೇಶ್ಯಾಮ್ ಸೇರಿದಂತೆ ಬಹುತೇಕ ಎಲ್ಲಾ ಅಪರಾಧಿಗಳು ಭಾನುವಾರದವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು ಎಂದು ಸ್ಥಳೀಯರು  ಹೇಳಿದ್ದರು.

ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆ ಮಾಧ್ಯಮದವರು ಮನೆ ಬಳಿ ಬರಬಹುದೆಂದು ಅವರು ಬೀಗ ಹಾಕಿ ಹೋಗಿರಬಹುದು. ಅಲ್ಲದೆ ತಲೆಮರೆಸಿಕೊಳ್ಳುವ ಉದ್ದೇಶ ಅವರಿಗೆ ಇರಲು ಸಾಧ್ಯವಿಲ್ಲ. ಏಕೆಂದರೆ ಕಳೆದ 20 ವರ್ಷಗಳಲ್ಲಿ ಪೆರೋಲ್‌ ಮೇಲೆ ಜೈಲಿನಿಂದ ಬಿಡುಗಡೆಗೊಂಡಾಗಲೂ ಅವರು ಯಾರೂ ತಪ್ಪಿಸಿಕೊಂಡಿರಲಿಲ್ಲ ಎಂದು ಅಪರಾಧಿ ಗೋವಿಂದ್‌ನ ತಂದೆ ಅಖಂಭಾಯ್ ಹೇಳಿರುವ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿತ್ತು.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...