Homeಮುಖಪುಟಚಂದ್ರಬಾಬು ನಾಯ್ಡುಗೆ ಸಧ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್​​ 9ರಂದು ವಿಚಾರಣೆ ಮುಂದೂಡಿದ ಸುಪ್ರೀಂ

ಚಂದ್ರಬಾಬು ನಾಯ್ಡುಗೆ ಸಧ್ಯಕ್ಕಿಲ್ಲ ಬಿಡುಗಡೆ ಭಾಗ್ಯ: ಅಕ್ಟೋಬರ್​​ 9ರಂದು ವಿಚಾರಣೆ ಮುಂದೂಡಿದ ಸುಪ್ರೀಂ

- Advertisement -
- Advertisement -

ಕೌಶಲ್ಯಾಭಿವೃದ್ಧಿ ಹಗರಣ ಪ್ರಕರಣದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅಕ್ಟೋಬರ್ 9ಕ್ಕೆ ಮುಂದೂಡಿದೆ.

ತಮ್ಮ ವಿರುದ್ದ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಾಯ್ಡು ಅವರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು (ಮಂಗಳವಾರ) ವಿಚಾರಣೆ ನಡೆಸಿದೆ. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿದೆ. ಇದೇ ವೇಳೆ ಹೈಕೋರ್ಟ್‌ಗೆ ಸಲ್ಲಿಸಿರುವ ದಾಖಲೆಗಳ ಸಂಪೂರ್ಣ ಸಂಗ್ರಹವನ್ನು ತನ್ನ ಮುಂದೆ ಇಡುವಂತೆ ಸುಪ್ರೀಂಕೋರ್ಟ್ ಆಂಧ್ರಪ್ರದೇಶ ಸರ್ಕಾರವನ್ನು ಕೇಳಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿದೆ. ಕಳೆದ ವಾರ, ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ವಿಚಾರಣೆಯಿಂದ ಹಿಂದೆ ಸರಿದಿದ್ದರಿಂದ ಅವರ ಅರ್ಜಿಯನ್ನು ಮುಂದೂಡಲಾಯಿತು.

ಎಫ್‌ಐಆರ್ ರದ್ದುಪಡಿಸುವ ತಮ್ಮ ಅರ್ಜಿಯನ್ನು ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್‌ನ 22.09.2023ರ ತೀರ್ಪನ್ನು ಪ್ರಶ್ನಿಸಿ ನಾಯ್ಡು ಅವರು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದಾರೆ. ನಾಯ್ಡು ಅವರನ್ನು ಸೆಪ್ಟೆಂಬರ್ 9 ರಂದು ಬಂಧಿಸಲಾಗಿದ್ದು ಅವರು ಅಂದಿನಿಂದ ಬಂಧನದಲ್ಲಿದ್ದಾರೆ.

ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿ ಕೆ ಶ್ರೀನಿವಾಸ ರೆಡ್ಡಿ ಅವರ ಪೀಠವು 2021ರಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿನ ತನಿಖೆ ಬಹುತೇಕ ಅಂತಿಮ ಹಂತದಲ್ಲಿದೆ. ಸುಮಾರು 140 ಸಾಕ್ಷಿಗಳನ್ನು ಪರೀಕ್ಷಿಸಿ 4000 ದಾಖಲೆಗಳನ್ನು ಸಂಗ್ರಹಿಸಲಾಗಿದೆ ಎಂದು ಗಮನಿಸುವ ಮೂಲಕ ನಾಯ್ಡು ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಹಂತದಲ್ಲಿ ತನಿಖೆಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಮಂಜೂರಾತಿ ಕೊರತೆಯಿಂದಾಗಿ ಎಫ್‌ಐಆರ್ ಸಮರ್ಥನೀಯವಲ್ಲ ಎಂದು ನಾಯ್ಡು ಎತ್ತಿದ ಕಾನೂನು ವಾದವನ್ನೂ ಹೈಕೋರ್ಟ್ ತಿರಸ್ಕರಿಸಿದೆ.

ದಾಖಲೆಗಳ ತಯಾರಿಕೆ ಮತ್ತು ಹಣ ದುರುಪಯೋಗಕ್ಕೆ ಸಂಬಂಧಿಸಿದ ಆರೋಪಗಳನ್ನು ಅಧಿಕೃತ ಕಾರ್ಯಗಳ ಭಾಗವಾಗಿ ಪರಿಗಣಿಸಲಾಗುವುದಿಲ್ಲ ಮತ್ತು ಆದ್ದರಿಂದ ಸೆಕ್ಷನ್ 17A ಅಡಿಯಲ್ಲಿ ರಕ್ಷಣೆ ಅನ್ವಯಿಸುವುದಿಲ್ಲ ಎಂದು ಪೀಠವು ಗಮನಿಸಿತ್ತು.

ಇಂದು ನಡೆದ ವಿಚಾರಣೆ ವೇಳೆ ವಕೀಲರಾದ ಗುಂಟೂರು ಪ್ರಮೋದ್ ಕುಮಾರ್ ಅವರ ಮೂಲಕ ಸಲ್ಲಿಸಲಾದ ಅರ್ಜಿಯಲ್ಲಿ, ನಾಯ್ಡು ವಿರುದ್ಧ ಸಲ್ಲಿಸಲಾಗಿರುವ ಎಫ್‌ಐಆರ್ ರಾಜ್ಯದಲ್ಲಿನ ಅತಿದೊಡ್ಡ ಪ್ರತಿಪಕ್ಷವನ್ನು ಹಳಿತಪ್ಪಿಸಲು ಆಡಳಿತದ ಸೇಡಿನ ಸಂಯೋಜಿತ ಅಭಿಯಾನವಾಗಿದೆ ಎಂದು ಹೇಳಿದೆ.

21 ತಿಂಗಳ ಹಿಂದೆ ದಾಖಲಾದ ಎಫ್‌ಐಆರ್‌ನಲ್ಲಿ ಅರ್ಜಿದಾರ ನಾಯ್ಡು ಅವರನ್ನು ಹೆಸರಿಸಲಾಗಿದೆ. ಆನಂತರ ಅವರನ್ನು ಕಾನೂನುಬಾಹಿರ ರೀತಿಯಲ್ಲಿ ಬಂಧಿಸಲಾಯಿತು. ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಯಿತು. ಇದು ಕೇವಲ ರಾಜಕೀಯ ಕಾರಣಗಳಿಂದ ಪ್ರೇರೇಪಿಸಲ್ಪಟ್ಟಿದೆ ಅವರ ವಿರುದ್ಧ ಯಾವುದೇ ಸಾಕ್ಷ್ಯ ಇಲ್ಲದಿದ್ದರೂ, ಅರ್ಜಿದಾರರ ಮೂಲಭೂತ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಲ್ಲಿ ಅಕ್ರಮ ಮತ್ತು ಪ್ರೇರಿತ ತನಿಖೆಯನ್ನು ಅನುಭವಿಸುವಂತೆ ಮಾಡಲಾಗುತ್ತಿದೆ ಎಂದು ವಿಶೇಷ ರಜೆ ಅರ್ಜಿಯಲ್ಲಿ ಹೇಳಲಾಗಿದೆ.

ಒಂದು ವಾರದ ಹಿಂದೆ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ 371 ಕೋಟಿ ರೂಪಾಯಿಗಳ ಕೌಶಲ್ಯಾಭಿವೃದ್ಧಿ ಭ್ರಷ್ಟಾಚಾರ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಮತ್ತು ನ್ಯಾಯಾಂಗ ಬಂಧನವನ್ನು ಕೊನೆಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ತನಿಖೆ ಅಂತಿಮ ಹಂತದಲ್ಲಿದ್ದಾಗ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ರದ್ದು ಅರ್ಜಿಯನ್ನು ವಜಾಗೊಳಿಸಿತ್ತು.

ಇದನ್ನೂ ಓದಿ: ಎಫ್‌ಐಆರ್‌ ರದ್ದುಕೋರಿ ಚಂದ್ರಬಾಬು ನಾಯ್ಡು ಸುಪ್ರೀಂಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...