Homeಮುಖಪುಟತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ಎಫ್‌ಐಆರ್‌ನಲ್ಲಿ ಥನ್‌ಬರ್ಗ್ ಸೇರಿದಂತೆ ಯಾರ ಹೆಸರೂ ಇಲ್ಲ. ಖಲಿಸ್ತಾನಿ ಗುಂಪೊಂದು ಟೂಲ್‌ಕಿಟ್ ಸಿದ್ಧಪಡಿಸಿರುವ ಶಂಕೆ ಇದ್ದು ಅದನ್ನು ಪತ್ತೆ ಮಾಡುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

“ಸಾಗರೋತ್ತರ ಪಿತೂರಿ”ಯ ತನಿಖೆಯು ಗ್ರೇಟಾ ಥನ್‌ಬರ್ಗ್ ವಿರುದ್ಧವಲ್ಲ, ಆದರೆ ಅವರು ಹಂಚಿಕೊಂಡ ಟೂಲ್‌ಕಿಟ್ ಸಿದ್ಧಪಡಿಸಿದವರ ವಿರುದ್ಧ. “ಖಲಿಸ್ತಾನಿ ಗುಂಪು” ಒಂದಕ್ಕೆ ಇದು ಸಂಬಂಧಿಸಿದ್ದು ಎಂಬ ಅನುಮಾನವಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

“ಜನವರಿ 26 ರ ಕೆಂಪೊಕೋಟೆ ಹಿಂಸಾಚಾರದ ಹಿಂದಿನ ಪಿತೂರಿಯ ಕಾರ್ಯಸೂಚಿಯನ್ನು ವಿವರಿಸುವ ಟೂಲ್‌ಕಿಟ್ ಡಾಕ್ಯುಮೆಂಟ್ ಅನ್ನು ದೆಹಲಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಭಾರತದ ವಿರುದ್ಧ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಯುದ್ಧವನ್ನು ನಡೆಸುವುದು ಇದರ ಉದ್ದೇಶವಾಗಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ಪ್ರವೀರ್ ರಂಜನ್ ತಿಳಿಸಿದ್ದಾರೆ.

ಆದರೆ, ಥನ್‌ಬರ್ಗ್ ಹಳೆಯ ಟೂಲ್‌ಕಿಟ್ ಡಿಲೀಟ್ ಮಾಡಿ, ನವೀಕೃತ ಟೂಲ್‌ಕಿಟ್ ಹಂಚಿಕೊಂಡಿದ್ದು, ಅದರಲ್ಲಿ ಜನವರಿ 26ರ ಪ್ರಸ್ತಾಪವಿಲ್ಲ.

‘ಭಾರತ ಸರ್ಕಾರದ ವಿರುದ್ಧ ಅಸಮಾಧಾನವನ್ನು ಹರಡುವ ಯತ್ನಕ್ಕಾಗಿ ಒಂದು ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದೇವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಯ ಮೂಡಿಸುವ ಕ್ರಿಮಿನಲ್ ಪಿತೂರಿ ಇದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

18 ವರ್ಷದ ಗ್ರೆಟಾ ಥನ್‌ಬರ್ಗ್‌ರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೇ ಎಂದು ಕೇಳಿದಾಗ, “ನಾವು ಎಫ್‌ಐಆರ್‌ನಲ್ಲಿ ಯಾರನ್ನೂ ಹೆಸರಿಸಿಲ್ಲ. ಇದು ಟೂಲ್‌ಕಿಟ್‌ನ ಸೃಷ್ಟಿಕರ್ತರ ವಿರುದ್ಧ ಮಾತ್ರ” ಎಂದು ಅವರು ಉತ್ತರಿಸಿದ್ದಾರೆ.

ಟೂಲ್‌ಕಿಟ್ ಅನ್ನು ಯಾರು ಹಂಚಿಕೊಂಡಿದ್ದಾರೆಂದು ಸೂಚಿಸಲು ವರದಿಗಾರರು ಒತ್ತಾಯಿಸಿದಾಗ, “ನಿಮಗೆ ಇದರ ಬಗ್ಗೆ ತಿಳಿದಿದೆ, ನಾನು ಅದನ್ನು ಇಲ್ಲಿ ಹೆಸರಿಸಲು ಬಯಸುವುದಿಲ್ಲ” ಎಂದು ರಂಜನ್ ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಕಳೆದ ವಾರ ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

‘ತನ್ನನ್ನು “ಪೊಯೆಟಿಕ್ ಜಸ್ಟೀಸ್ ಫೌಂಡೇಶನ್” ಎಂದು ಕರೆದುಕೊಳ್ಳುವ ಖಲಿಸ್ತಾನಿ ಗುಂಪು ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂಬ ಮಾಹಿತಿಯಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
“ನೀವು ಜನವರಿ 26 ರ ಘಟನೆಗಳನ್ನು ನೋಡಿದರೆ ಅದು ಟೂಲ್‌ಕಿಟ್‌ನ ಕ್ರಿಯಾ ಯೋಜನೆಯ ಕಾಪಿ ಕ್ಯಾಟ್ ಎಂಬುದನ್ನು ಬಹಿರಂಗಪಡಿಸುತ್ತದೆ. ಇದು ದೆಹಲಿ ಪೊಲೀಸರಿಗೆ ಕಳವಳಕಾರಿ ಸಂಗತಿಯಾಗಿದೆ. ಖಂಡಿತವಾಗಿಯೂ ಟೂಲ್‌ಕಿಟ್‌ನ ಸೃಷ್ಟಿಕರ್ತರ ಉದ್ದೇಶವು ವಿವಿಧ ಸಾಮಾಜಿಕ , ಧಾರ್ಮಿಕ ಗುಂಪುಗಳ ನಡುವೆ ವೈಮನಸ್ಸು ಮೂಡಿಸುವುದಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ,

ನಿನ್ನೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ’ ಎಂದಿದ್ದರು.
ಕಳೆದ ಎರಡು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್‌ಟ್ಯಾಗ್‌ಗಳು ಮತ್ತು ಕಾಮೆಂಟ್‌ಗಳ ಪ್ರಲೋಭನೆ” ವಿರುದ್ಧ ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.


ಇದನ್ನೂ ಓದಿ: ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...