Homeಮುಖಪುಟತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ಎಫ್‌ಐಆರ್‌ನಲ್ಲಿ ಥನ್‌ಬರ್ಗ್ ಸೇರಿದಂತೆ ಯಾರ ಹೆಸರೂ ಇಲ್ಲ. ಖಲಿಸ್ತಾನಿ ಗುಂಪೊಂದು ಟೂಲ್‌ಕಿಟ್ ಸಿದ್ಧಪಡಿಸಿರುವ ಶಂಕೆ ಇದ್ದು ಅದನ್ನು ಪತ್ತೆ ಮಾಡುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

“ಸಾಗರೋತ್ತರ ಪಿತೂರಿ”ಯ ತನಿಖೆಯು ಗ್ರೇಟಾ ಥನ್‌ಬರ್ಗ್ ವಿರುದ್ಧವಲ್ಲ, ಆದರೆ ಅವರು ಹಂಚಿಕೊಂಡ ಟೂಲ್‌ಕಿಟ್ ಸಿದ್ಧಪಡಿಸಿದವರ ವಿರುದ್ಧ. “ಖಲಿಸ್ತಾನಿ ಗುಂಪು” ಒಂದಕ್ಕೆ ಇದು ಸಂಬಂಧಿಸಿದ್ದು ಎಂಬ ಅನುಮಾನವಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

“ಜನವರಿ 26 ರ ಕೆಂಪೊಕೋಟೆ ಹಿಂಸಾಚಾರದ ಹಿಂದಿನ ಪಿತೂರಿಯ ಕಾರ್ಯಸೂಚಿಯನ್ನು ವಿವರಿಸುವ ಟೂಲ್‌ಕಿಟ್ ಡಾಕ್ಯುಮೆಂಟ್ ಅನ್ನು ದೆಹಲಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಭಾರತದ ವಿರುದ್ಧ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಯುದ್ಧವನ್ನು ನಡೆಸುವುದು ಇದರ ಉದ್ದೇಶವಾಗಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ಪ್ರವೀರ್ ರಂಜನ್ ತಿಳಿಸಿದ್ದಾರೆ.

ಆದರೆ, ಥನ್‌ಬರ್ಗ್ ಹಳೆಯ ಟೂಲ್‌ಕಿಟ್ ಡಿಲೀಟ್ ಮಾಡಿ, ನವೀಕೃತ ಟೂಲ್‌ಕಿಟ್ ಹಂಚಿಕೊಂಡಿದ್ದು, ಅದರಲ್ಲಿ ಜನವರಿ 26ರ ಪ್ರಸ್ತಾಪವಿಲ್ಲ.

‘ಭಾರತ ಸರ್ಕಾರದ ವಿರುದ್ಧ ಅಸಮಾಧಾನವನ್ನು ಹರಡುವ ಯತ್ನಕ್ಕಾಗಿ ಒಂದು ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದೇವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಯ ಮೂಡಿಸುವ ಕ್ರಿಮಿನಲ್ ಪಿತೂರಿ ಇದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

18 ವರ್ಷದ ಗ್ರೆಟಾ ಥನ್‌ಬರ್ಗ್‌ರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೇ ಎಂದು ಕೇಳಿದಾಗ, “ನಾವು ಎಫ್‌ಐಆರ್‌ನಲ್ಲಿ ಯಾರನ್ನೂ ಹೆಸರಿಸಿಲ್ಲ. ಇದು ಟೂಲ್‌ಕಿಟ್‌ನ ಸೃಷ್ಟಿಕರ್ತರ ವಿರುದ್ಧ ಮಾತ್ರ” ಎಂದು ಅವರು ಉತ್ತರಿಸಿದ್ದಾರೆ.

ಟೂಲ್‌ಕಿಟ್ ಅನ್ನು ಯಾರು ಹಂಚಿಕೊಂಡಿದ್ದಾರೆಂದು ಸೂಚಿಸಲು ವರದಿಗಾರರು ಒತ್ತಾಯಿಸಿದಾಗ, “ನಿಮಗೆ ಇದರ ಬಗ್ಗೆ ತಿಳಿದಿದೆ, ನಾನು ಅದನ್ನು ಇಲ್ಲಿ ಹೆಸರಿಸಲು ಬಯಸುವುದಿಲ್ಲ” ಎಂದು ರಂಜನ್ ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಕಳೆದ ವಾರ ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

‘ತನ್ನನ್ನು “ಪೊಯೆಟಿಕ್ ಜಸ್ಟೀಸ್ ಫೌಂಡೇಶನ್” ಎಂದು ಕರೆದುಕೊಳ್ಳುವ ಖಲಿಸ್ತಾನಿ ಗುಂಪು ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂಬ ಮಾಹಿತಿಯಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
“ನೀವು ಜನವರಿ 26 ರ ಘಟನೆಗಳನ್ನು ನೋಡಿದರೆ ಅದು ಟೂಲ್‌ಕಿಟ್‌ನ ಕ್ರಿಯಾ ಯೋಜನೆಯ ಕಾಪಿ ಕ್ಯಾಟ್ ಎಂಬುದನ್ನು ಬಹಿರಂಗಪಡಿಸುತ್ತದೆ. ಇದು ದೆಹಲಿ ಪೊಲೀಸರಿಗೆ ಕಳವಳಕಾರಿ ಸಂಗತಿಯಾಗಿದೆ. ಖಂಡಿತವಾಗಿಯೂ ಟೂಲ್‌ಕಿಟ್‌ನ ಸೃಷ್ಟಿಕರ್ತರ ಉದ್ದೇಶವು ವಿವಿಧ ಸಾಮಾಜಿಕ , ಧಾರ್ಮಿಕ ಗುಂಪುಗಳ ನಡುವೆ ವೈಮನಸ್ಸು ಮೂಡಿಸುವುದಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ,

ನಿನ್ನೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ’ ಎಂದಿದ್ದರು.
ಕಳೆದ ಎರಡು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್‌ಟ್ಯಾಗ್‌ಗಳು ಮತ್ತು ಕಾಮೆಂಟ್‌ಗಳ ಪ್ರಲೋಭನೆ” ವಿರುದ್ಧ ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.


ಇದನ್ನೂ ಓದಿ: ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...