Homeಮುಖಪುಟತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ಎಫ್‌ಐಆರ್‌ನಲ್ಲಿ ಥನ್‌ಬರ್ಗ್ ಸೇರಿದಂತೆ ಯಾರ ಹೆಸರೂ ಇಲ್ಲ. ಖಲಿಸ್ತಾನಿ ಗುಂಪೊಂದು ಟೂಲ್‌ಕಿಟ್ ಸಿದ್ಧಪಡಿಸಿರುವ ಶಂಕೆ ಇದ್ದು ಅದನ್ನು ಪತ್ತೆ ಮಾಡುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

“ಸಾಗರೋತ್ತರ ಪಿತೂರಿ”ಯ ತನಿಖೆಯು ಗ್ರೇಟಾ ಥನ್‌ಬರ್ಗ್ ವಿರುದ್ಧವಲ್ಲ, ಆದರೆ ಅವರು ಹಂಚಿಕೊಂಡ ಟೂಲ್‌ಕಿಟ್ ಸಿದ್ಧಪಡಿಸಿದವರ ವಿರುದ್ಧ. “ಖಲಿಸ್ತಾನಿ ಗುಂಪು” ಒಂದಕ್ಕೆ ಇದು ಸಂಬಂಧಿಸಿದ್ದು ಎಂಬ ಅನುಮಾನವಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

“ಜನವರಿ 26 ರ ಕೆಂಪೊಕೋಟೆ ಹಿಂಸಾಚಾರದ ಹಿಂದಿನ ಪಿತೂರಿಯ ಕಾರ್ಯಸೂಚಿಯನ್ನು ವಿವರಿಸುವ ಟೂಲ್‌ಕಿಟ್ ಡಾಕ್ಯುಮೆಂಟ್ ಅನ್ನು ದೆಹಲಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಭಾರತದ ವಿರುದ್ಧ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಯುದ್ಧವನ್ನು ನಡೆಸುವುದು ಇದರ ಉದ್ದೇಶವಾಗಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ಪ್ರವೀರ್ ರಂಜನ್ ತಿಳಿಸಿದ್ದಾರೆ.

ಆದರೆ, ಥನ್‌ಬರ್ಗ್ ಹಳೆಯ ಟೂಲ್‌ಕಿಟ್ ಡಿಲೀಟ್ ಮಾಡಿ, ನವೀಕೃತ ಟೂಲ್‌ಕಿಟ್ ಹಂಚಿಕೊಂಡಿದ್ದು, ಅದರಲ್ಲಿ ಜನವರಿ 26ರ ಪ್ರಸ್ತಾಪವಿಲ್ಲ.

‘ಭಾರತ ಸರ್ಕಾರದ ವಿರುದ್ಧ ಅಸಮಾಧಾನವನ್ನು ಹರಡುವ ಯತ್ನಕ್ಕಾಗಿ ಒಂದು ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದೇವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಯ ಮೂಡಿಸುವ ಕ್ರಿಮಿನಲ್ ಪಿತೂರಿ ಇದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

18 ವರ್ಷದ ಗ್ರೆಟಾ ಥನ್‌ಬರ್ಗ್‌ರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೇ ಎಂದು ಕೇಳಿದಾಗ, “ನಾವು ಎಫ್‌ಐಆರ್‌ನಲ್ಲಿ ಯಾರನ್ನೂ ಹೆಸರಿಸಿಲ್ಲ. ಇದು ಟೂಲ್‌ಕಿಟ್‌ನ ಸೃಷ್ಟಿಕರ್ತರ ವಿರುದ್ಧ ಮಾತ್ರ” ಎಂದು ಅವರು ಉತ್ತರಿಸಿದ್ದಾರೆ.

ಟೂಲ್‌ಕಿಟ್ ಅನ್ನು ಯಾರು ಹಂಚಿಕೊಂಡಿದ್ದಾರೆಂದು ಸೂಚಿಸಲು ವರದಿಗಾರರು ಒತ್ತಾಯಿಸಿದಾಗ, “ನಿಮಗೆ ಇದರ ಬಗ್ಗೆ ತಿಳಿದಿದೆ, ನಾನು ಅದನ್ನು ಇಲ್ಲಿ ಹೆಸರಿಸಲು ಬಯಸುವುದಿಲ್ಲ” ಎಂದು ರಂಜನ್ ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಕಳೆದ ವಾರ ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

‘ತನ್ನನ್ನು “ಪೊಯೆಟಿಕ್ ಜಸ್ಟೀಸ್ ಫೌಂಡೇಶನ್” ಎಂದು ಕರೆದುಕೊಳ್ಳುವ ಖಲಿಸ್ತಾನಿ ಗುಂಪು ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂಬ ಮಾಹಿತಿಯಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
“ನೀವು ಜನವರಿ 26 ರ ಘಟನೆಗಳನ್ನು ನೋಡಿದರೆ ಅದು ಟೂಲ್‌ಕಿಟ್‌ನ ಕ್ರಿಯಾ ಯೋಜನೆಯ ಕಾಪಿ ಕ್ಯಾಟ್ ಎಂಬುದನ್ನು ಬಹಿರಂಗಪಡಿಸುತ್ತದೆ. ಇದು ದೆಹಲಿ ಪೊಲೀಸರಿಗೆ ಕಳವಳಕಾರಿ ಸಂಗತಿಯಾಗಿದೆ. ಖಂಡಿತವಾಗಿಯೂ ಟೂಲ್‌ಕಿಟ್‌ನ ಸೃಷ್ಟಿಕರ್ತರ ಉದ್ದೇಶವು ವಿವಿಧ ಸಾಮಾಜಿಕ , ಧಾರ್ಮಿಕ ಗುಂಪುಗಳ ನಡುವೆ ವೈಮನಸ್ಸು ಮೂಡಿಸುವುದಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ,

ನಿನ್ನೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ’ ಎಂದಿದ್ದರು.
ಕಳೆದ ಎರಡು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್‌ಟ್ಯಾಗ್‌ಗಳು ಮತ್ತು ಕಾಮೆಂಟ್‌ಗಳ ಪ್ರಲೋಭನೆ” ವಿರುದ್ಧ ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.


ಇದನ್ನೂ ಓದಿ: ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...