Homeಮುಖಪುಟತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ತನಿಖೆ ಥನ್‌ಬರ್ಗ್ ವಿರುದ್ಧವಲ್ಲ, ಟೂಲ್‌ಕಿಟ್ ರೂಪಿಸಿದವರ ವಿರುದ್ಧ: ದೆಹಲಿ ಪೊಲೀಸ್

ಎಫ್‌ಐಆರ್‌ನಲ್ಲಿ ಥನ್‌ಬರ್ಗ್ ಸೇರಿದಂತೆ ಯಾರ ಹೆಸರೂ ಇಲ್ಲ. ಖಲಿಸ್ತಾನಿ ಗುಂಪೊಂದು ಟೂಲ್‌ಕಿಟ್ ಸಿದ್ಧಪಡಿಸಿರುವ ಶಂಕೆ ಇದ್ದು ಅದನ್ನು ಪತ್ತೆ ಮಾಡುತ್ತಿದ್ದೇವೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

- Advertisement -
- Advertisement -

“ಸಾಗರೋತ್ತರ ಪಿತೂರಿ”ಯ ತನಿಖೆಯು ಗ್ರೇಟಾ ಥನ್‌ಬರ್ಗ್ ವಿರುದ್ಧವಲ್ಲ, ಆದರೆ ಅವರು ಹಂಚಿಕೊಂಡ ಟೂಲ್‌ಕಿಟ್ ಸಿದ್ಧಪಡಿಸಿದವರ ವಿರುದ್ಧ. “ಖಲಿಸ್ತಾನಿ ಗುಂಪು” ಒಂದಕ್ಕೆ ಇದು ಸಂಬಂಧಿಸಿದ್ದು ಎಂಬ ಅನುಮಾನವಿದೆ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.

“ಜನವರಿ 26 ರ ಕೆಂಪೊಕೋಟೆ ಹಿಂಸಾಚಾರದ ಹಿಂದಿನ ಪಿತೂರಿಯ ಕಾರ್ಯಸೂಚಿಯನ್ನು ವಿವರಿಸುವ ಟೂಲ್‌ಕಿಟ್ ಡಾಕ್ಯುಮೆಂಟ್ ಅನ್ನು ದೆಹಲಿ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಭಾರತದ ವಿರುದ್ಧ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಯುದ್ಧವನ್ನು ನಡೆಸುವುದು ಇದರ ಉದ್ದೇಶವಾಗಿದೆ” ಎಂದು ದೆಹಲಿ ಪೊಲೀಸ್ ವಿಶೇಷ ಆಯುಕ್ತ ಪ್ರವೀರ್ ರಂಜನ್ ತಿಳಿಸಿದ್ದಾರೆ.

ಆದರೆ, ಥನ್‌ಬರ್ಗ್ ಹಳೆಯ ಟೂಲ್‌ಕಿಟ್ ಡಿಲೀಟ್ ಮಾಡಿ, ನವೀಕೃತ ಟೂಲ್‌ಕಿಟ್ ಹಂಚಿಕೊಂಡಿದ್ದು, ಅದರಲ್ಲಿ ಜನವರಿ 26ರ ಪ್ರಸ್ತಾಪವಿಲ್ಲ.

‘ಭಾರತ ಸರ್ಕಾರದ ವಿರುದ್ಧ ಅಸಮಾಧಾನವನ್ನು ಹರಡುವ ಯತ್ನಕ್ಕಾಗಿ ಒಂದು ದೇಶದ್ರೋಹ ಪ್ರಕರಣವನ್ನು ದಾಖಲಿಸಿದ್ದೇವೆ. ಧಾರ್ಮಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಆಧಾರದ ಮೇಲೆ ಗುಂಪುಗಳ ನಡುವೆ ವೈಮನಸ್ಯ ಮೂಡಿಸುವ ಕ್ರಿಮಿನಲ್ ಪಿತೂರಿ ಇದಾಗಿದೆ” ಎಂದು ಅಧಿಕಾರಿ ಹೇಳಿದ್ದಾರೆ.

18 ವರ್ಷದ ಗ್ರೆಟಾ ಥನ್‌ಬರ್ಗ್‌ರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆಯೇ ಎಂದು ಕೇಳಿದಾಗ, “ನಾವು ಎಫ್‌ಐಆರ್‌ನಲ್ಲಿ ಯಾರನ್ನೂ ಹೆಸರಿಸಿಲ್ಲ. ಇದು ಟೂಲ್‌ಕಿಟ್‌ನ ಸೃಷ್ಟಿಕರ್ತರ ವಿರುದ್ಧ ಮಾತ್ರ” ಎಂದು ಅವರು ಉತ್ತರಿಸಿದ್ದಾರೆ.

ಟೂಲ್‌ಕಿಟ್ ಅನ್ನು ಯಾರು ಹಂಚಿಕೊಂಡಿದ್ದಾರೆಂದು ಸೂಚಿಸಲು ವರದಿಗಾರರು ಒತ್ತಾಯಿಸಿದಾಗ, “ನಿಮಗೆ ಇದರ ಬಗ್ಗೆ ತಿಳಿದಿದೆ, ನಾನು ಅದನ್ನು ಇಲ್ಲಿ ಹೆಸರಿಸಲು ಬಯಸುವುದಿಲ್ಲ” ಎಂದು ರಂಜನ್ ಹೇಳಿದ್ದಾರೆ.

ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಗ್ರೇಟಾ ಥನ್‌ಬರ್ಗ್ ಬುಧವಾರ ಸಂಜೆ “ಟೂಲ್‌ಕಿಟ್” ಅನ್ನು ಟ್ವೀಟ್ ಮಾಡಿದ್ದರು, ಆದರೆ ಇದು ಕಳೆದ ವಾರ ನಡೆದ ಗಣರಾಜ್ಯೋತ್ಸವದ ಪ್ರತಿಭಟನೆಯ ಮೇಲೆ ಕೇಂದ್ರೀಕೃತವಾಗಿತ್ತು. ಸ್ವಲ್ಪ ಸಮಯದ ನಂತರ ಆ ಪೋಸ್ಟ್ ಡಿಲೀಟ್ ಮಾಡಿ, ಗುರುವಾರ ಬೆಳಿಗ್ಗೆ, ಹೊಸ ಟೂಲ್‌ಕಿಟ್ ಅನ್ನು ಪೋಸ್ಟ್ ಮಾಡಿದ್ದರು. ಹೊಸ ಟೂಲ್‌ಕಿಟ್ ಫೆಬ್ರವರಿ 13 ಮತ್ತು 14 ರಂದು ಪ್ರಪಂಚಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

‘ತನ್ನನ್ನು “ಪೊಯೆಟಿಕ್ ಜಸ್ಟೀಸ್ ಫೌಂಡೇಶನ್” ಎಂದು ಕರೆದುಕೊಳ್ಳುವ ಖಲಿಸ್ತಾನಿ ಗುಂಪು ಈ ಟೂಲ್‌ಕಿಟ್ ಸೃಷ್ಟಿಸಿದೆ ಎಂಬ ಮಾಹಿತಿಯಿದೆ’ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
“ನೀವು ಜನವರಿ 26 ರ ಘಟನೆಗಳನ್ನು ನೋಡಿದರೆ ಅದು ಟೂಲ್‌ಕಿಟ್‌ನ ಕ್ರಿಯಾ ಯೋಜನೆಯ ಕಾಪಿ ಕ್ಯಾಟ್ ಎಂಬುದನ್ನು ಬಹಿರಂಗಪಡಿಸುತ್ತದೆ. ಇದು ದೆಹಲಿ ಪೊಲೀಸರಿಗೆ ಕಳವಳಕಾರಿ ಸಂಗತಿಯಾಗಿದೆ. ಖಂಡಿತವಾಗಿಯೂ ಟೂಲ್‌ಕಿಟ್‌ನ ಸೃಷ್ಟಿಕರ್ತರ ಉದ್ದೇಶವು ವಿವಿಧ ಸಾಮಾಜಿಕ , ಧಾರ್ಮಿಕ ಗುಂಪುಗಳ ನಡುವೆ ವೈಮನಸ್ಸು ಮೂಡಿಸುವುದಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ,

ನಿನ್ನೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಗ್ರೇಟಾ ಥನ್‌ಬರ್ಗ್, “ನಾನು ಇನ್ನೂ ರೈತರ ಶಾಂತಿಯುತ ಪ್ರತಿಭಟನೆಯನ್ನು ಬೆಂಬಲಿಸುತ್ತೇನೆ. ಯಾವುದೇ ರೀತಿಯ ದ್ವೇಷ, ಬೆದರಿಕೆಗಳು ಅಥವಾ ಮಾನವ ಹಕ್ಕುಗಳ ಉಲ್ಲಂಘನೆಗಳು ಅದನ್ನು ಎಂದಿಗೂ ಬದಲಾಯಿಸುವುದಿಲ್ಲ’ ಎಂದಿದ್ದರು.
ಕಳೆದ ಎರಡು ದಿನಗಳಿಂದ ರೈತ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ ಹಲವಾರು ಅಂತರರಾಷ್ಟ್ರೀಯ ವ್ಯಕ್ತಿಗಳಲ್ಲಿ ಈ ಯುವ ಪರಿಸರ ಕಾರ್ಯಕರ್ತೆ ಕೂಡ ಸೇರಿದ್ದಾರೆ. ಈ ಬೆಂಬಲದಿಂದ ಕೇಂದ್ರವು ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನವೆಂಬರ್ ಅಂತ್ಯದಲ್ಲಿ ಪ್ರಾರಂಭವಾದ ಆಂದೋಲನಕ್ಕೆ ಜಾಗತಿಕ ಮನ್ನಣೆ ಪ್ರಾಪ್ತವಾಗಿದ್ದು, ಭಾರತ ಸರ್ಕಾರಕ್ಕೆ ಜಾಗತಿಕ ಮಟ್ಟದಲ್ಲಿ ಇರಿಸುಮುರಿಸು ಉಂಟಾಗಿದೆ.

ಟ್ವಿಟರ್‌ನಲ್ಲಿ 100 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪಾಪ್ ತಾರೆ ರಿಹಾನ್ನಾ ಅವರ ಪೋಸ್ಟ್‌ನೊಂದಿಗೆ ಮಂಗಳವಾರ ಸಂಜೆ ಇದು ಪ್ರಾರಂಭವಾಯಿತು. ಹಲವಾರು ಅಮೆರಿಕ ಜನಪ್ರತಿನಿಧಿಗಳು ಮತ್ತು ಇತರರು ಇದನ್ನು ಅನುಸರಿಸುತ್ತಿದ್ದಂತೆ, ಸರ್ಕಾರವು “ಸಂವೇದನಾಶೀಲ ಸಾಮಾಜಿಕ ಮಾಧ್ಯಮ ಹ್ಯಾಶ್‌ಟ್ಯಾಗ್‌ಗಳು ಮತ್ತು ಕಾಮೆಂಟ್‌ಗಳ ಪ್ರಲೋಭನೆ” ವಿರುದ್ಧ ಎಚ್ಚರಿಕೆ ನೀಡಿ ಪ್ರಕಟಣೆ ಹೊರಡಿಸಿತ್ತು.


ಇದನ್ನೂ ಓದಿ: ಜಾಗತಿಕ ಐಕಾನ್ ಗ್ರೇಟಾ ಥನ್‌ಬರ್ಗ್‌ ವಿರುದ್ಧ FIR – ಸ್ವಾಗತ ಕೋರಿದ ಕನ್ಹಯ್ಯಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...