Homeಮುಖಪುಟದೇವಾಲಯಗಳಲ್ಲಿ ಇತರ ಧರ್ಮಿಯರಿಗೆ ಉದ್ಯೋಗಾವಕಾಶವಿಲ್ಲ : ಆಂಧ್ರ ಹೈಕೋರ್ಟ್‌

ದೇವಾಲಯಗಳಲ್ಲಿ ಇತರ ಧರ್ಮಿಯರಿಗೆ ಉದ್ಯೋಗಾವಕಾಶವಿಲ್ಲ : ಆಂಧ್ರ ಹೈಕೋರ್ಟ್‌

- Advertisement -
- Advertisement -

ಹಿಂದೂ ಧರ್ಮವನ್ನು ಅನುಸರಿಸುವವರು ಮಾತ್ರ ದೇವಾಲಯಗಳಲ್ಲಿ ಉದ್ಯೋಗಕ್ಕೆ ಅರ್ಹರು. ಇತರ ಧರ್ಮದವರಿಗೆ ಅವಕಾಶವಿಲ್ಲ ಎಂದು ಆಂಧ್ರ ಪ್ರದೇಶದ ಹೈಕೋರ್ಟ್‌ ಸೋಮವಾರ ಹೇಳಿದೆ.

ಶ್ರೀಶೈಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ತನ್ನನ್ನು ತೆಗೆದು ಹಾಕಿರುವುದನ್ನು ಪ್ರಶ್ನಿಸಿ ಪಿ ಸುದರ್ಶನ್ ಬಾಬು ಎಂಬವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹರಿನಾಥ್ ನೂನೆಪಲ್ಲಿ, ಅರ್ಜಿದಾರ ಸುದರ್ಶನ್ ತಾನು ಕ್ರೈಸ್ತ ಧರ್ಮಕ್ಕೆ ಸೇರಿದವನು ಎಂಬುವುದನ್ನು ಮುಚ್ಚಿಟ್ಟು ದೇವಸ್ಥಾನದಲ್ಲಿ ದಾಖಲೆ ಸಹಾಯಕರಾಗಿ ಅನುಕಂಪದ ನೇಮಕಾತಿ ಪಡೆದಿರುವುದು ರುಜುವಾತಾಗಿದೆ ಎಂದಿದ್ದು, ಸುದರ್ಶನ್ ಅವರ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೆ, ದೇವಸ್ಥಾನಗಳಲ್ಲಿ ಹಿಂದೂ ಧರ್ಮ ಅನುಸರಿಸುವವರಿಗೆ ಮಾತ್ರ ಉದ್ಯೋಗಕ್ಕೆ ಅವಕಾಶ ಎಂದು ತೀರ್ಪು ನೀಡಿದ್ದಾರೆ.

ಅರ್ಜಿದಾರ ಸುದರ್ಶನ್ ಬಾಬು 2002 ರಲ್ಲಿ, ತಾನು ಹಿಂದೂ ಧರ್ಮ ಮತ್ತು ಎಸ್ಸಿ (ಮಾಲಾ) ಸಮುದಾಯಕ್ಕೆ ಸೇರಿದವನು ಎಂದು ಸುಳ್ಳು ಹೇಳಿ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆದಿದ್ದಾರೆ. ನಂತರ 2010ರಲ್ಲಿ ಹೋಲಿ ಕ್ರಾಸ್ ಚರ್ಚ್‌ನಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ಮಹಿಳೆಯನ್ನು ವಿವಾಹವಾಗಿದ್ದಾರೆ. ಹಿಂದೂ ಎಂದು ಸುಳ್ಳು ಹೇಳಿಕೊಂಡು ಕೆಲಸ ಪಡೆದಿದ್ದಕ್ಕಾಗಿ ಸುದರ್ಶನ್ ವಿರುದ್ಧ ಲೋಕಾಯುಕ್ತದಲ್ಲಿ ದೂರುಗಳು ದಾಖಲಾಗಿದ್ದವು.

ದೂರಿನನ್ವಯ ಸುದರ್ಶನ್ ಅವರಿಗೆ ಲೋಕಾಯುಕ್ತ ನೋಟಿಸ್ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಸುದರ್ಶನ್, ತಾನು ತನ್ನ ನಂಬಿಕೆಯನ್ನು ಮುಚ್ಚಿಟ್ಟಿಲ್ಲ ಎಂದು ಪ್ರತಿಪಾದಿಸಿ
ಜಾತಿ ಪ್ರಮಾಣ ಪತ್ರ ಮತ್ತು ಶಾಲಾ ದಾಖಲಾತಿಗಳನ್ನು ಲೋಕಾಯುಕ್ತಕ್ಕೆ ಒದಗಿಸಿದ್ದರು.

ದಾಖಲೆಗಳನ್ನು ಪರಿಶೀಲಿಸಿದ ಲೋಕಾಯುಕ್ತ ಸುದರ್ಶನ್‌ ತನ್ನ ಧರ್ಮವನ್ನು ಮುಚ್ಚಿಟ್ಟು ಉದ್ಯೋಗ ಪಡೆದಿದ್ದಾರೆ ಎಂಬ ಅಂಶವನ್ನು ಪತ್ತೆ ಹಚ್ಚಿತ್ತು. ಈ ಬೆನ್ನಲ್ಲೇ ಶ್ರೀಶೈಲ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ಸುದರ್ಶನ್ ಅವರನ್ನು ತೆಗೆದು ಹಾಕಿತ್ತು.

ಇದನ್ನೂ ಓದಿ : ಮಧ್ಯಪ್ರದೇಶ: ಘರ್ಷಣೆ ವೇಳೆ ಕೈ ಕಾರ್ಯಕರ್ತ ಸಾವು: ಬಿಜೆಪಿ ಅಭ್ಯರ್ಥಿಯ ಬಂಧನಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...