Homeಮುಖಪುಟನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಇಲ್ಲ: ಚೆನ್ನೈ ಹೈಕೋರ್ಟ್

ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ಇಲ್ಲ: ಚೆನ್ನೈ ಹೈಕೋರ್ಟ್

ಸೂರ್ಯನಂತಹ ಜನರು ನ್ಯಾಯಾಂಗದ ಮೇಲೆ ಟೀಕೆಗಳನ್ನು ಮಾಡುವ ಮೊದಲು ಅದು ನ್ಯಾಯಸಮ್ಮತವೇ ಅಥವಾ ಇಲ್ಲವೇ ಎಂದು ಯೋಚಿಸಬೇಕು ಎಂದು ನ್ಯಾಯಾಲಯ ಹೇಳಿದೆ.

- Advertisement -
- Advertisement -

ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯ ಕುರಿತು ನಟ ಸೂರ್ಯ ಟೀಕೆಗೆ ಸಂಬಂಧಿಸಿದಂತೆ ನ್ಯಾಯಾಲಯವು ಯಾವುದೇ ಪ್ರಕರಣವನ್ನು ತೆಗೆದುಕೊಳ್ಳುವುದಿಲ್ಲ ಎಂದು ಚೆನ್ನೈ ಹೈಕೋರ್ಟ್ ಹೇಳಿದೆ.

ಕಳೆದ ವಾರದ ನಡೆದ ನೀಟ್ ಪರೀಕ್ಷೆಗಿಂತಲೂ ಮುಂಚೆ, ಪರೀಕ್ಷೆಯನ್ನು ಬರೆಯಲು ಹೊರಟಿದ್ದ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ನಟ ಸೂರ್ಯ “ಕೊರೊನಾ ಭಯದಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯವನ್ನು ನೀಡುತ್ತಿರುವ ನ್ಯಾಯಾಲಯವು ವಿದ್ಯಾರ್ಥಿಗಳಿಗೆ ಭಯವಿಲ್ಲದೆ ಪರೀಕ್ಷೆಗಳನ್ನು ಪರೀಕ್ಷಿಸಲು ಆದೇಶಿಸುತ್ತದೆ” ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದರು.

ಇದನ್ನೂ ಓದಿ: ಜೆಇಇ-ನೀಟ್ ‘ಮನುನೀತಿ’ ಪರೀಕ್ಷೆಗಳಿದ್ದಂತೆ-ತಮಿಳು ನಟ ಸೂರ್ಯ ಟ್ವೀಟ್

“ನೀಟ್‌ನಂತಹ ಪರೀಕ್ಷೆಗಳು ವಿದ್ಯಾರ್ಥಿಗಳ ಅವಕಾಶಗಳನ್ನು ಮಾತ್ರವಲ್ಲದೆ ಅವರ ಜೀವನವನ್ನೂ ಸಹ ಕಸಿದುಕೊಳ್ಳುತ್ತವೆ ಎಂದಿದ್ದ ಅವರು, ಕೊರೊನಾ ಸೋಂಕಿನಂತಹ ಸಾಂಕ್ರಾಮಿಕದ ಸಮಯದಲ್ಲೂ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಮತ್ತು ಅವರ ಯೋಗ್ಯತೆಯನ್ನು ಸಾಬೀತುಪಡಿಸಲು ಒತ್ತಾಯಿಸಲ್ಪಟ್ಟಿದ್ದು ನೋವಿನ ಸಂಗತಿಯಾಗಿದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಅಲ್ಲದೆ ಅಸಮಾನತೆಯನ್ನು ಸೃಷ್ಟಿಸುವ ಶಿಕ್ಷಣ ವ್ಯವಸ್ಥೆಯನ್ನು ಸರ್ಕಾರ ಶಾಸನಬದ್ಧಗೊಳಿಸುತ್ತಿದೆ. ಬಡ ವಿದ್ಯಾರ್ಥಿಗಳ ವಾಸ್ತವತೆ ತಿಳಿದಿಲ್ಲದವರು ಶೈಕ್ಷಣಿಕ ನೀತಿಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದ್ದರು.

ನಟ ಸೂರ್ಯ ಅವರ ವಿರುದ್ಧ ಚೆನ್ನೈ ಹೈಕೋರ್ಟ್ ನ್ಯಾಯಮೂರ್ತಿ ಸುಬ್ರಮಣ್ಯಂ ಮುಖ್ಯ ನ್ಯಾಯಮೂರ್ತಿ ಅಮರೇಶ್ವರ ಪ್ರತಾಪ್ ಸಾಹಿಗೆ ಪತ್ರ ಬರೆದು, “ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ” ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದ್ದರು.

ಇದನ್ನೂ ಓದಿ: ಚಂದ್ರಶೇಖರ್ ಆಜಾದ್: ಮತ್ತೊಬ್ಬ ದಲಿತ ಸೂರ್ಯನ ಉದಯ

ಆದರೆ ನಟ ಸೂರ್ಯ ಅವರನ್ನು ಬೆಂಬಲಿಸಿ ಹೈಕೋರ್ಟ್ ಮಾಜಿ ನ್ಯಾಯಾಧೀಶರುಗಳಾದ ಕೆ. ಚಂದ್ರು, ಕೆ.ಎಂ. ಪಾಷಾ, ಡಿ. ಸ್ವಾತಂತ್ರ್ಯ, ಡಿ. ಹರಿಪ್ರಂದಮನ್, ಕೆ. ಕಣ್ಣನ್, ಜಿ.ಎಂ. ಅಕ್ಬರ್ ಅಲಿ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದು, ಸೂರ್ಯ ಮೇಲೆ ನ್ಯಾಯಾಂಗ ನಿಂದನೆ ಪ್ರಕರಣ ತೆಗೆದುಕೊಳ್ಳಬಾರದು ಎಂದು ಒತ್ತಾಯಿಸಿದ್ದರು.

ಈ ಮಧ್ಯೆ ನ್ಯಾಯಾಮೂರ್ತಿ ಸುಬ್ರಮಣ್ಯಂ ಬರೆದ ಪತ್ರವನ್ನು ತಮಿಳುನಾಡಿನ ಅಡ್ವೊಕೇಟ್ ಜನರಲ್‌ಗೆ ಕಳುಹಿಸಲಾಗಿದ್ದು, ಅವರ ಅಭಿಪ್ರಾಯವನ್ನು ಕೋರಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಈ ವಿಷಯದಲ್ಲಿ ಯಾವುದೇ ಕ್ರಮಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ಪ್ರಕರಣವು ಮುಖ್ಯ ನ್ಯಾಯಮೂರ್ತಿ ಎ.ಪಿ. ಸಾಹಿ, ಸೆಂಥಿಲ್‌ಕುಮಾರ್, ರಾಮಮೂರ್ತಿ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಇಂದು ವಿಚಾರಣೆಗೆ ಬಂದಿದ್ದು, ನಟ ಸೂರ್ಯ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ತೆಗೆದುಕೊಳ್ಳುವುದಿಲ್ಲ ಎಂದು ಅದು ಹೇಳಿದೆ ಮತ್ತು ಆರೋಪಗಳನ್ನು ತಿರಸ್ಕರಿಸಿದೆ.

ಸೂರ್ಯನಂತಹ ಜನರು ನ್ಯಾಯಾಂಗದ ಮೇಲೆ ಟೀಕೆಗಳನ್ನು ಮಾಡುವ ಮೊದಲು ಅದು ನ್ಯಾಯಸಮ್ಮತವೇ ಅಥವಾ ಇಲ್ಲವೇ ಎಂದು ಯೋಚಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವಿಡಿಯೋ| ಸೂರ್ಯಸ್ನಾನದಿಂದ ಕೊರೊನ ಬರೋಲ್ಲ : ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...