Homeಮುಖಪುಟಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

ಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಕೇಂದ್ರದ ಲಸಿಕಾ ನೀತಿ, ವಿಭಿನ್ನ ದರ ನಿಗದಿ, ಲಸಿಕೆಗಳ ಕೊರತೆ ಮತ್ತು ನಿಧಾನಗತಿಯ ಲಸಿಕಾ ಅಭಿಯಾನಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವಾರ ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರವಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿತ್ತು. ಅಫಿಡವಿಟ್‌ನಲ್ಲಿ ತನ್ನ ಲಸಿಕಾ ನೀತಿಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ಇದರಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ವಿರೋಧಿಸಿದೆ.

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪವುವನ್ನು ವಿರೋಧಿಸಿರುವ ಕೇಂದ್ರ, ಇದು ಅನಿರೀಕ್ಷಿತ ಮತ್ತು ಅನಪೇಕ್ಷಿತ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ತಾನು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ!

ಸೋಮವಾರ ಬೆಳಗ್ಗೆ ಕೇಂದ್ರ ಸರ್ಕಾರದ ಅಫಿಡವಿಟ್ ಬಗ್ಗೆ ವಿಚಾರಣೆ ವೇಳೆ ಹಲವು ತಾಂತ್ರಕ ಸಮಸ್ಯೆಗಳು ಕಂಡು ಬಂದಿದ್ದು, ವಿಚಾರಣೆ ತಡವಾಗಿ ಆರಂಭವಾಗಿತ್ತು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎಲ್.ಎನ್. ರಾವ್ ಮತ್ತು ಎಸ್ ರವೀಂದ್ರ ಭಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ.

“ಸರ್ವರ್ ಇಂದು ಸ್ಥಗಿತಗೊಂಡಿದೆ. ನಾವು ನ್ಯಾಯಾಧೀಶರು ನಮ್ಮ ನಡುವೆ ಚರ್ಚೆ ನಡೆಸಿದ್ದೇವೆ ಮತ್ತು ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

ಕೊರೊನಾ ಲಸಿಕೆ ತಯಾರಕರಾದ ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಕೇಂದ್ರಗಳು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿಭಿನ್ನ ಬೆಲೆಗಳನ್ನು ಘೋಷಿಸಿದ ನಂತರ ಈ ಲಸಿಕಾ ನೀತಿಯ ಬಗ್ಗೆ ಹಲವು ಟೀಕೆಗಳು, ಆಕ್ರೋಶ ದೇಶಾದ್ಯಂತ ಆರಂಭವಾಗಿದ್ದವು. ಸಾರ್ವಜನಿಕ ವಲಯದ ಆಕ್ರೋಶದ ನಂತರವೇ  ಬೆಲೆಗಳು ಕಡಿಮೆಯಾದವು.

ಬೆಲೆಗಳನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ವಾರ ಕೇಂದ್ರಕ್ಕೆ ನಿರ್ದೇಶನ ನೀಡಿ, “ಇದು ಆರ್ಟಿಕಲ್ 14 (ಕಾನೂನಿನ ಮುಂದೆ ಸಮಾನತೆ) ಮತ್ತು ಆರ್ಟಿಕಲ್ 21 (ಜೀವ ರಕ್ಷಣೆ ಮತ್ತು ವೈಯಕ್ತಿಕ ಸ್ವಾತಂತ್ರ್ಯ)ವನ್ನು ಪಾಲಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಹೇಳಿತ್ತು.

ಭಾರತವು ಜನವರಿಯಲ್ಲಿ ವ್ಯಾಕ್ಸಿನೇಷನ್ ಪ್ರಾರಂಭಿಸಿದೆ. ಇದುವರೆಗೆ 17 ಕೋಟಿ ಡೋಸ್‌ಗಳನ್ನು ನೀಡಿದೆ ಎನ್ನಲಾಗಿದೆ. ಆದರೆ ಲಸಿಕಾ ಅಭಿಯಾನದ ವೇಗವನ್ನು ಪ್ರಶ್ನಿಸಲಾಗಿದೆ, ಜೊತೆಗೆ ರಾಜ್ಯಗಳಲ್ಲಿ ಸ್ಟಾಕ್ ಮುಗಿದು ಲಸಿಕಾ ಕೇಂದ್ರಗಳನ್ನು ಮುಚ್ಚುತ್ತಿವೆ.

ರಾಷ್ಟ್ರ ರಾಜಧಾನಿ ದೆಹಲಿ, ಮಧ್ಯಪ್ರದೇಶ, ಕರ್ನಾಟಕ ಮತ್ತು ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳು ಡೋಸೇಜ್‌ಗಳ ಕೊರತೆಯಿಂದಾಗಿ ಮೂರನೇ ಹಂತದ ಲಸಿಕೆ ಅಭಿಯಾನದ ಆರಂಭವನ್ನು ಮುಂದೂಡಿದೆ.

ವ್ಯಾಕ್ಸಿನೇಷನ್ ಮತ್ತು ವೈದ್ಯಕೀಯ ಸಂಪನ್ಮೂಲಗಳ ಲಭ್ಯತೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕದ ಸುತ್ತಲಿನ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.


ಇದನ್ನೂ ಓದಿ: ಆಮ್ಲಜನಕ ಮತ್ತು ವ್ಯಾಕ್ಸಿನೇಷನ್‌ ಸಂಬಂಧಿಸಿ ರಾಷ್ಟ್ರೀಯ ನೀತಿ ಜಾರಿಗೆ ತನ್ನಿ: ಕೇಂದ್ರಕ್ಕೆ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...