Homeಮುಖಪುಟಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

ಲಸಿಕಾ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪ ವಿರೋಧಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಕೇಂದ್ರದ ಲಸಿಕಾ ನೀತಿ, ವಿಭಿನ್ನ ದರ ನಿಗದಿ, ಲಸಿಕೆಗಳ ಕೊರತೆ ಮತ್ತು ನಿಧಾನಗತಿಯ ಲಸಿಕಾ ಅಭಿಯಾನಗಳ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ವಾರ ಉನ್ನತ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿಯ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರವಾಗಿ ಕೇಂದ್ರವು ಅಫಿಡವಿಟ್ ಸಲ್ಲಿಸಿತ್ತು. ಅಫಿಡವಿಟ್‌ನಲ್ಲಿ ತನ್ನ ಲಸಿಕಾ ನೀತಿಯನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದ್ದು, ಇದರಲ್ಲಿ ನ್ಯಾಯಾಂಗದ ಹಸ್ತಕ್ಷೇಪವನ್ನು ವಿರೋಧಿಸಿದೆ.

ಕೇಂದ್ರ ಸರ್ಕಾರದ ವ್ಯಾಕ್ಸಿನೇಷನ್ ನೀತಿಯಲ್ಲಿ ನ್ಯಾಯಾಂಗದ ಹಸ್ತಕ್ಷೇಪವುವನ್ನು ವಿರೋಧಿಸಿರುವ ಕೇಂದ್ರ, ಇದು ಅನಿರೀಕ್ಷಿತ ಮತ್ತು ಅನಪೇಕ್ಷಿತ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ತಾನು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಆರ್‌ಡಿಒ ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯ ತುರ್ತು ಬಳಕೆಗೆ ಅನುಮೋದಿಸಿದ ಡಿಸಿಜಿಐ!

ಸೋಮವಾರ ಬೆಳಗ್ಗೆ ಕೇಂದ್ರ ಸರ್ಕಾರದ ಅಫಿಡವಿಟ್ ಬಗ್ಗೆ ವಿಚಾರಣೆ ವೇಳೆ ಹಲವು ತಾಂತ್ರಕ ಸಮಸ್ಯೆಗಳು ಕಂಡು ಬಂದಿದ್ದು, ವಿಚಾರಣೆ ತಡವಾಗಿ ಆರಂಭವಾಗಿತ್ತು. ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಎಲ್.ಎನ್. ರಾವ್ ಮತ್ತು ಎಸ್ ರವೀಂದ್ರ ಭಟ್ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದಾರೆ.

“ಸರ್ವರ್ ಇಂದು ಸ್ಥಗಿತಗೊಂಡಿದೆ. ನಾವು ನ್ಯಾಯಾಧೀಶರು ನಮ್ಮ ನಡುವೆ ಚರ್ಚೆ ನಡೆಸಿದ್ದೇವೆ ಮತ್ತು ಗುರುವಾರ ಈ ವಿಷಯವನ್ನು ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ” ಎಂದು ನ್ಯಾಯಾಲಯ ತಿಳಿಸಿದೆ.

ಕೊರೊನಾ ಲಸಿಕೆ ತಯಾರಕರಾದ ಸೀರಮ್ ಇನ್ಸ್ಟಿಟ್ಯೂಟ್ ಮತ್ತು ಭಾರತ್ ಬಯೋಟೆಕ್ ಕೇಂದ್ರಗಳು ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿಭಿನ್ನ ಬೆಲೆಗಳನ್ನು ಘೋಷಿಸಿದ ನಂತರ ಈ ಲಸಿಕಾ ನೀತಿಯ ಬಗ್ಗೆ ಹಲವು ಟೀಕೆಗಳು, ಆಕ್ರೋಶ ದೇಶಾದ್ಯಂತ ಆರಂಭವಾಗಿದ್ದವು. ಸಾರ್ವಜನಿಕ ವಲಯದ ಆಕ್ರೋಶದ ನಂತರವೇ  ಬೆಲೆಗಳು ಕಡಿಮೆಯಾದವು.

ಬೆಲೆಗಳನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ವಾರ ಕೇಂದ್ರಕ್ಕೆ ನಿರ್ದೇಶನ ನೀಡಿ, “ಇದು ಆರ್ಟಿಕಲ್ 14 (ಕಾನೂನಿನ ಮುಂದೆ ಸಮಾನತೆ) ಮತ್ತು ಆರ್ಟಿಕಲ್ 21 (ಜೀವ ರಕ್ಷಣೆ ಮತ್ತು ವೈಯಕ್ತಿಕ ಸ್ವಾತಂತ್ರ್ಯ)ವನ್ನು ಪಾಲಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಹೇಳಿತ್ತು.

ಭಾರತವು ಜನವರಿಯಲ್ಲಿ ವ್ಯಾಕ್ಸಿನೇಷನ್ ಪ್ರಾರಂಭಿಸಿದೆ. ಇದುವರೆಗೆ 17 ಕೋಟಿ ಡೋಸ್‌ಗಳನ್ನು ನೀಡಿದೆ ಎನ್ನಲಾಗಿದೆ. ಆದರೆ ಲಸಿಕಾ ಅಭಿಯಾನದ ವೇಗವನ್ನು ಪ್ರಶ್ನಿಸಲಾಗಿದೆ, ಜೊತೆಗೆ ರಾಜ್ಯಗಳಲ್ಲಿ ಸ್ಟಾಕ್ ಮುಗಿದು ಲಸಿಕಾ ಕೇಂದ್ರಗಳನ್ನು ಮುಚ್ಚುತ್ತಿವೆ.

ರಾಷ್ಟ್ರ ರಾಜಧಾನಿ ದೆಹಲಿ, ಮಧ್ಯಪ್ರದೇಶ, ಕರ್ನಾಟಕ ಮತ್ತು ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳು ಡೋಸೇಜ್‌ಗಳ ಕೊರತೆಯಿಂದಾಗಿ ಮೂರನೇ ಹಂತದ ಲಸಿಕೆ ಅಭಿಯಾನದ ಆರಂಭವನ್ನು ಮುಂದೂಡಿದೆ.

ವ್ಯಾಕ್ಸಿನೇಷನ್ ಮತ್ತು ವೈದ್ಯಕೀಯ ಸಂಪನ್ಮೂಲಗಳ ಲಭ್ಯತೆ, ಆಸ್ಪತ್ರೆಯಲ್ಲಿ ಹಾಸಿಗೆಗಳು ಮತ್ತು ಆಮ್ಲಜನಕದ ಸುತ್ತಲಿನ ಸಮಸ್ಯೆಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.


ಇದನ್ನೂ ಓದಿ: ಆಮ್ಲಜನಕ ಮತ್ತು ವ್ಯಾಕ್ಸಿನೇಷನ್‌ ಸಂಬಂಧಿಸಿ ರಾಷ್ಟ್ರೀಯ ನೀತಿ ಜಾರಿಗೆ ತನ್ನಿ: ಕೇಂದ್ರಕ್ಕೆ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...