Homeಮುಖಪುಟಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

’ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!’ ಎಂದು ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿನ್ನೆ ಆಲಿಸಿದ್ದು, ವಿಚಾರಣೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ.

ಅರ್ನಬ್ ಅರ್ಜಿ ಸಲ್ಲಿಸಿ ಒಂದು ದಿನದೊಳಗಾಗಿ ವಿಚಾರಣೆ ನಡೆದಿದ್ದು, ಕಾಶ್ಮೀರದಲ್ಲಿ ಸುಮಾರು 600 ಹೇಬಿಯಸ್ ಕಾರ್ಪಸ್ ಅರ್ಜಿಗಳಲ್ಲಿ 99% ಅರ್ಜಿಗಳು ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ಬಾಕಿ ಇದೆ. ಇದನ್ನು ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದು, “ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ

ಅಧ್ಯಾಪಕಿಯಾಗಿರುವ ಪ್ರಿಯಾ ಪ್ರಕಾಶ್, “ಅರ್ನಬ್ ಮನವಿ ಒಂದು ದಿನದೊಳಗೆ ವಿಚಾರಣೆಗೆ ಬಂದಿದೆ. ಆದರೆ ಕಾಶ್ಮೀರದಲ್ಲಿ, 600 ಮನವಿಗಳಲ್ಲಿ 99% ಅರ್ಜಿಗಳು, 2019 ರ ಆಗಸ್ಟ್ 6 ರಿಂದ ಬಾಕಿ ಉಳಿದಿದೆ. ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಕಿಡಿ ಕಾರಿದ್ದಾರೆ.

ಪತ್ರಕರ್ತ ದೆಬಾಶಿಶ್ ರಾಯ್ ಚೌಧರಿ, “ಕಾಶ್ಮೀರದಿಂದ ಸಲ್ಲಿಕೆಯಾಗಿರುವ ಸಾವಿರಾರು ಹೇಬಿಯಸ್ ಕಾರ್ಪಸ್ ಪ್ರಕರಣಗಳು ಒಂದು ವರ್ಷ ಆಗಿಯೂ ಗಮನಿಸದ ನ್ಯಾಯಾಲಯಗಳು, ಅರ್ನಾಬ್ ಪ್ರಕರಣವನ್ನು ಒಂದು ದಿನದ ವಿಳಂಬವಿಲ್ಲದೆ ಹೇಗೆ ನಡೆಯುತ್ತಿದೆ ಎಂಬುದು ಅದ್ಭುತವಾಗಿದೆ” ಎಂದಿರುವ ಅವರು, “ಒಂದು ಭಾರತ, ಒಂದೇ ಕಾನೂನು? ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಕತ್ತಲೆಗೆ ಒಂದು ವರ್ಷ: ಸಾಧಿಸಿದ್ದಾದರೂ ಏನು?

ಕತೆಗಾರ ಅಲಿ, “ಅರ್ನಬ್ ಗೋಸ್ವಾಮಿಯ ಮನವಿಯನ್ನು ನ್ಯಾಯಾಲಯಗಳಲ್ಲಿ 24 ಗಂಟೆಗಳ ಒಳಗಾಗಿ ವಿಚಾರಣೆ ನಡೆಸಲಾಗುತ್ತದೆ. ಸಾವಿರಾರು ಕಾಶ್ಮೀರಿ ನಾಗರಿಕರ 600 ಹೇಬಿಯಸ್ ಕಾರ್ಪಸ್ ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ. ಒಬ್ಬರೂ ಕಾನೂನಿನ ಬಗ್ಗೆ ಮಾತನಾಡಬಾರದು” ಎಂದು ಹೇಳಿದ್ದಾರೆ.

ಪೆರಿಯಾರಿಸ್ಟ್ ಟಿಪಿಎನ್ ಸುರೇಶ್, “ಈ ದೇಶವು ನಾಶವಾಗಿ ಹೋದರೆ ಏನು?” ಎಂದು ತಮಿಳಿನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ನಿಸ್ಸಿಮ್ ಮಣ್ಣತುಕ್ಕರೆನ್ ಅವರು ಕೂಡಾ, ಸಾವಿರಾರು ಕಾಶ್ಮೀರಿ ನಾಗರಿಕರ 600 ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ವಿಜಯ್. ಜೆ ಎನ್ನುವವರು ಕೂಡಾ ಪ್ರಿಯಾ ಪ್ರಕಾಶ್ ಅವರ ಮಾತನ್ನೇ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ:ಹಿಟ್ಲರನ ಜರ್ಮನಿಯಲ್ಲಿ ನಾಜೀಗಳ ಕಾಲಿಗೆರಗಿತ್ತು ನ್ಯಾಯಾಂಗ! 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...