Homeಮುಖಪುಟಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

ಕಾಶ್ಮೀರಿಗಳ 600 ಹೇಬಿಯಸ್ ಕಾರ್ಪಸ್ ವರ್ಷದಿಂದ ಬಾಕಿ, ಅರ್ನಬ್ ಅರ್ಜಿ ಒಂದೇ ದಿನದಲ್ಲಿ ವಿಚಾರಣೆ; ಅನ್ಯಾಯ!

’ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!’ ಎಂದು ಆಕ್ರೋಶ ವ್ಯಕ್ತವಾಗಿದೆ

- Advertisement -
- Advertisement -

ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೊಳಗಾದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿಯ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ನಿನ್ನೆ ಆಲಿಸಿದ್ದು, ವಿಚಾರಣೆಯನ್ನು ಇಂದು ಮಧ್ಯಾಹ್ನ 12 ಗಂಟೆಗೆ ಮುಂದೂಡಿದೆ.

ಅರ್ನಬ್ ಅರ್ಜಿ ಸಲ್ಲಿಸಿ ಒಂದು ದಿನದೊಳಗಾಗಿ ವಿಚಾರಣೆ ನಡೆದಿದ್ದು, ಕಾಶ್ಮೀರದಲ್ಲಿ ಸುಮಾರು 600 ಹೇಬಿಯಸ್ ಕಾರ್ಪಸ್ ಅರ್ಜಿಗಳಲ್ಲಿ 99% ಅರ್ಜಿಗಳು ಒಂದು ವರ್ಷಕ್ಕಿಂತ ಹೆಚ್ಚು ಸಮಯದಿಂದ ಬಾಕಿ ಇದೆ. ಇದನ್ನು ಹಲವಾರು ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದು, “ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಮ್ಮುಕಾಶ್ಮೀರದ ಹೈಕೋರ್ಟ್‌ನಲ್ಲಿ 99% ಹೇಬಿಯಸ್ ಕಾರ್ಪಸ್ ಅರ್ಜಿಗಳು ಇನ್ನೂ ಬಾಕಿ

ಅಧ್ಯಾಪಕಿಯಾಗಿರುವ ಪ್ರಿಯಾ ಪ್ರಕಾಶ್, “ಅರ್ನಬ್ ಮನವಿ ಒಂದು ದಿನದೊಳಗೆ ವಿಚಾರಣೆಗೆ ಬಂದಿದೆ. ಆದರೆ ಕಾಶ್ಮೀರದಲ್ಲಿ, 600 ಮನವಿಗಳಲ್ಲಿ 99% ಅರ್ಜಿಗಳು, 2019 ರ ಆಗಸ್ಟ್ 6 ರಿಂದ ಬಾಕಿ ಉಳಿದಿದೆ. ಕೆಲವು ಜನರು ಇತರರಿಗಿಂತ ಹೆಚ್ಚು ಸಮಾನರು! ಕಾನೂನಿನ ಮುಂದೆ ಸಮಾನತೆಯ ತತ್ವವನ್ನು ಮರೆತುಬಿಡಿ!” ಎಂದು ಕಿಡಿ ಕಾರಿದ್ದಾರೆ.

ಪತ್ರಕರ್ತ ದೆಬಾಶಿಶ್ ರಾಯ್ ಚೌಧರಿ, “ಕಾಶ್ಮೀರದಿಂದ ಸಲ್ಲಿಕೆಯಾಗಿರುವ ಸಾವಿರಾರು ಹೇಬಿಯಸ್ ಕಾರ್ಪಸ್ ಪ್ರಕರಣಗಳು ಒಂದು ವರ್ಷ ಆಗಿಯೂ ಗಮನಿಸದ ನ್ಯಾಯಾಲಯಗಳು, ಅರ್ನಾಬ್ ಪ್ರಕರಣವನ್ನು ಒಂದು ದಿನದ ವಿಳಂಬವಿಲ್ಲದೆ ಹೇಗೆ ನಡೆಯುತ್ತಿದೆ ಎಂಬುದು ಅದ್ಭುತವಾಗಿದೆ” ಎಂದಿರುವ ಅವರು, “ಒಂದು ಭಾರತ, ಒಂದೇ ಕಾನೂನು? ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕಾಶ್ಮೀರದ ಕತ್ತಲೆಗೆ ಒಂದು ವರ್ಷ: ಸಾಧಿಸಿದ್ದಾದರೂ ಏನು?

ಕತೆಗಾರ ಅಲಿ, “ಅರ್ನಬ್ ಗೋಸ್ವಾಮಿಯ ಮನವಿಯನ್ನು ನ್ಯಾಯಾಲಯಗಳಲ್ಲಿ 24 ಗಂಟೆಗಳ ಒಳಗಾಗಿ ವಿಚಾರಣೆ ನಡೆಸಲಾಗುತ್ತದೆ. ಸಾವಿರಾರು ಕಾಶ್ಮೀರಿ ನಾಗರಿಕರ 600 ಹೇಬಿಯಸ್ ಕಾರ್ಪಸ್ ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ. ಒಬ್ಬರೂ ಕಾನೂನಿನ ಬಗ್ಗೆ ಮಾತನಾಡಬಾರದು” ಎಂದು ಹೇಳಿದ್ದಾರೆ.

ಪೆರಿಯಾರಿಸ್ಟ್ ಟಿಪಿಎನ್ ಸುರೇಶ್, “ಈ ದೇಶವು ನಾಶವಾಗಿ ಹೋದರೆ ಏನು?” ಎಂದು ತಮಿಳಿನಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಹಾಯಕ ಪ್ರಾಧ್ಯಾಪಕ ಹಾಗೂ ಲೇಖಕ ನಿಸ್ಸಿಮ್ ಮಣ್ಣತುಕ್ಕರೆನ್ ಅವರು ಕೂಡಾ, ಸಾವಿರಾರು ಕಾಶ್ಮೀರಿ ನಾಗರಿಕರ 600 ಮನವಿಗಳು 1 ವರ್ಷದ ನಂತರವೂ ವಿಚಾರಣೆಗೆ ಕಾಯುತ್ತಿವೆ ಎಂದು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ನಮ್ಮಿಂದ ಕಿತ್ತುಕೊಂಡದ್ದನ್ನು ಮರಳಿ ಪಡೆಯಬೇಕಾಗಿದೆ: ಮೆಹಬೂಬಾ ಮುಫ್ತಿ

ವಿಜಯ್. ಜೆ ಎನ್ನುವವರು ಕೂಡಾ ಪ್ರಿಯಾ ಪ್ರಕಾಶ್ ಅವರ ಮಾತನ್ನೇ ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ:ಹಿಟ್ಲರನ ಜರ್ಮನಿಯಲ್ಲಿ ನಾಜೀಗಳ ಕಾಲಿಗೆರಗಿತ್ತು ನ್ಯಾಯಾಂಗ! 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...